ರೈತರ ಬಾಳಿಗೆ ಬೆಳಕಾಗದ ವರುಣ


Team Udayavani, Nov 8, 2019, 11:58 AM IST

bk-tdy-3

ಮುಧೋಳ: ಅತಿಯಾದರೆ ಅಮೃತವೂ ವಿಷವಾಗುತ್ತೆ ಎಂಬುದಕ್ಕೆ ತಾಲೂಕಿನಾದ್ಯಂತ ಈ ಬಾರಿ ಸುರಿದ ಮುಂಗಾರು ಹಾಗೂ ಹಿಂಗಾರು ಮಳೆಯೇ ಉದಾಹರಣೆಯಾಗಿದೆ.

ನಿರಂತರ ಬರದಿಂದ ಕಂಗೆಟ್ಟಿದ್ದ ತಾಲೂಕಿನ ರೈತರ ಬಾಳಿಗೆ ಬೆಳಕಾಗಬೇಕಿದ್ದ ಮಳೆರಾಯ ತನ್ನ ರೌದ್ರಾವತಾರದಿಂದ ರೈತರನ್ನು ಕಂಗೇಡಿಸಿದ್ದಾನೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆಗಳು ನಿರಂತರ ಸುರಿದ ಪರಿಣಾಮ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ.

ಮುಂಗಾರು ಆರಂಭದಲ್ಲಿಯೇ ನೆರೆಯ ಮಹಾರಾಷ್ಟ್ರದಲ್ಲಿ ಅತಿಯಾದ ಮಳೆ ಸುರಿದು ಪ್ರವಾಹ ಉಂಟಾದ ಪರಿಣಾಮ ತಾಲೂಕಿನ ರೈತರ ಮನೆ, ಆಸ್ತಿ ಲಕ್ಷಾಂತರ ಎಕರೆ ಬೆಳೆಹಾನಿಯಾಗಿ, ಅವರ ಬಾಳು ಬೀದಿಗೆ ಬಂದಿತ್ತು. ಪ್ರವಾಹ ತಗ್ಗಿ ಜೀವನ ಮತ್ತೆ ಮರಳಿತ್ತಿದೆ ಎನ್ನುವಷ್ಟರಲ್ಲಿ ಎಡೆಬಿಡದೆ ಸುರಿದ ಹಿಂಗಾರಿ ಮಳೆಯಿಂದ ಕೊಯ್ಲಿಗೆ ಬಂದಿದ್ದ ಗೋವಿನ ಜೋಳ, ಈರುಳ್ಳಿ ಬೆಳೆ ಹಾನಿಗೀಡಾಗಿದೆ. ಸಾಲಸೋಲ ಮಾಡಿ ಬಿತ್ತನೆ ಮಾಡಿದ್ದ ರೈತರು ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗೆ ಅವಧಿಯಲ್ಲಿ ತಾಲೂಕಿನ 6490 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳ ಬಿತ್ತನೆ ಮಾಡಲಾಗಿತ್ತು. ಅತಿಯಾದ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಗೋವಿನಜೋಳ ಹಾಗೂ ಮೇವು ಹಾನಿಗೀಡಾಗಿದೆ. ಅದೇ ರೀತಿ ಈರುಳ್ಳಿ ಬೆಳೆ ಭೂಮಿಯಲ್ಲಿಯೇ ಕೊಳೆತುಹೋಗಿದೆ.

ಮಳೆ ಮುಂದುವರಿದರೆ ಹೆಚ್ಚಲಿದೆ ನಷ್ಟ: ಹಿಂಗಾರು ಮಳೆ ನಿರಂತರವಾಗಿ ಸುರಿದ ಪರಿಣಾಮ ಸದ್ಯ ತಾಲೂಕಿನಾದ್ಯಂತ ಗೋವಿನಜೋಳ ಹಾಗೂ ಈರುಳ್ಳಿ ಹಾನಿಯಾಗಿರುವುದು ಒಂದೆಡೆಯಾದರೆ, ತಿಂಗಳ ಹಿಂದೆ ಬಿತ್ತಿರುವ ಬಿಳಿ ಜೋಳಕ್ಕೂ ಆಪತ್ತು ಎದುರಾಗುವ ಭೀತಿ ಉಂಟಾಗಿದೆ. ತಾಲೂಕಿನಲ್ಲಿ 1878 ಹೆಕ್ಟೇರ್‌ ಪ್ರದೇಶದಲ್ಲಿ ಬಿಳಿಜೋಳ ಬಿತ್ತನೆ ಮಾಡಲಾಗಿದೆ. ಈಗಾಗಲೇ ಕೆಲ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಬಿಳಿಜೋಳ ಹಾನಿಯಾಗಿದೆ.

ಇದೇ ರೀತಿ ಮಳೆಯ ಪ್ರಮಾಣ ಮುಂದುವರಿದರೆ ತೇವಾಂಶ ಹೆಚ್ಚಾಗಿ ಬಿಳಿಜೋಳ ಕೆಂಪುಬಣ್ಣಕ್ಕೆ ತಿರುಗಿ ತಿನ್ನಲೂ ಯೋಗ್ಯವಾಗುವುದಿಲ್ಲ ಎಂಬುದು ರೈತರ ಅಳಲು. ಒಟ್ಟಿನಲ್ಲಿ ಬೇಸಾಯ ನಂಬಿ ಬದುಕು ಕಟ್ಟಿಕೊಳ್ಳುವ ರೈತರ ಬಾಳಲ್ಲಿ ಈ ಬಾರಿಯ ವರ್ಷಧಾರೆ ಬಿರುಗಾಳಿ ಎಬ್ಬಿಸಿದೆ.

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.