ಕೊಳೆರೋಗದ ಹೊಡೆತಕ್ಕೆ ನರಳಿದ ಈರುಳ್ಳಿ |ಟ್ರ್ಯಾಕ್ಟರ್‌ನಿಂದ ಬೆಳೆ ನಾಶಪಡಿಸುತ್ತಿರುವ ರೈತರು

ಉತ್ಪನ್ನ ಬರುವ ಮುಂಚೆಯೇ ರೈತರಿಗೆ ಕಣ್ಣೀರು ತರಿಸಿದ ಬೆಳೆ

Team Udayavani, Aug 12, 2021, 1:54 PM IST

fghtytr

ವರದಿ: ಚಂದ್ರಶೇಖರ ಹಡಪದ

ಕಲಾದಗಿ: ಮಳೆ ಸೇರಿದಂತೆ ಪ್ರವಾಹದ ಹೊಡೆತಕ್ಕೆ ರೈತರು ಅಕ್ಷರಶಃ ನಲುಗಿದ್ದಾರೆ. ಹೇಗೋ ಸಾಲ-ಸೂಲ ಮಾಡಿ ಅಲ್ಪ-ಸ್ವಲ್ಪ ಬೆಳೆ ಬೆಳೆದರೂ ಇದೀಗ ಬೆಳೆಗಳಿಗೆ ರೋಗ-ಕೀಟಬಾಧೆ ಕಾಡುತ್ತಿದ್ದು ಅನ್ನದಾತರಿಗೆ ನುಂಗಲಾರದ ತುತ್ತಾಗಿದೆ.

ರೋಗಬಾಧೆಗೆ ಬಲಿಯಾದ ಬೆಳೆಗಳಲ್ಲಿ ಈರುಳ್ಳಿ ಪ್ರಮುಖ ಬೆಳೆ. ಈರುಳ್ಳಿ ಕೊಳೆರೋಗದ ಹೊಡೆತಕ್ಕೆ ಸಿಕ್ಕು ಹಳದಿ ಬಣ್ಣಕ್ಕೆ ತಿರುಗಿ ಬಾಡುತ್ತಿದೆ. ಹೀಗಾಗಿ ಕಷ್ಟಪಟ್ಟು ರೈತರು ಬೆಳೆದ ಬೆಳೆ ಕಣ್ಣೆದುರೇ ಬಾಡುತ್ತಿರುವುದನ್ನು ಕಂಡು ರೈತ ನೇಗಿಲು ಹೊಡೆದು ಬೆಳೆಯನ್ನು ಮಣ್ಣಲ್ಲಿ ಮುಚ್ಚುತ್ತಿರುವುದು ರೈತನ ಅಸಹಾಯಕತೆಗೆ ಸಾಕ್ಷಿ. ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆ ಬೆಳೆಯುತ್ತಾರೆ. ಮೇ ಕೊನೆ ವಾರ ಇಲ್ಲವೇ ಜೂನ್‌ ಮೊದಲೆರಡು ವಾರದಲ್ಲಿ ಬಿತ್ತನೆ ಮಾಡಿ ಹಗಲು-ರಾತ್ರಿ ಶ್ರಮಿಸುತ್ತ ಉತ್ತಮ ಇಳುವರಿ, ಬೆಲೆ ನಿರೀಕ್ಷೆಯಲ್ಲಿ ರೈತರಿದ್ದರು. ಆದರೆ ಇದೀಗ ಈರುಳ್ಳಿಗೆ ಕೊಳೆರೋಗ ಕಾಡುತ್ತಿದ್ದು, ಹೊಲದಲ್ಲಿ ಬೆಳೆ ಕೊಳೆಯುವುದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ.

ಕೆಲ ರೈತರಂತೂ ಲಕ್ಷಾಂತರ ರೂ. ಖರ್ಚು ಮಾಡಿ ಹಗಲು-ರಾತ್ರಿ ಶ್ರಮಿಸಿ ಬೆಳೆದಿದ್ದ ಬೆಳೆ ನೇಗಿಲು ಹೊಡೆದು ಮಣ್ಣಲ್ಲಿ ಮುಚ್ಚುತ್ತಿರುವ ಉದಾಹರಣೆಗಳೂ ಕಣ್ಣೆದುರಿವೆ. ಸದ್ಯ ಕೆಲವು ರೈತರ ಈರುಳ್ಳಿ ಬೆಳೆ ಈ ಕೊಳೆರೋಗಕ್ಕೆ ಕೊಳೆಯುತ್ತಿದ್ದು, ಇನ್ನೂ ಕೆಲವರು ರೈತರ ಈರುಳ್ಳಿ ರೋಗ ತಗುಲುವ ಪ್ರಾರಂಭದ ಹಂತದಲ್ಲಿದೆ. ಈ ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ತೋಟಗಾರಿಕೆ ಇಲಾಖೆ ಅಧಿ ಕಾರಿಗಳ ಮಾರ್ಗದರ್ಶನ, ಸೂಕ್ತ ಔಷಧೋಪಚಾರದ ತಿಳಿವಳಿಕೆ ನೀಡಿದ್ದಲ್ಲಿ ರೈತರು ಬೆಳೆ ಉಳಿಸಿಕೊಳ್ಳಲು ಸಾಧ್ಯ ಎನ್ನುವುದು ಹಲವು ರೈತರ ಮಾತು.

ಕಲಾದಗಿ ಹೋಬಳಿಯಲ್ಲಿ ಒಟ್ಟು 2800 ಹೆಕ್ಟೇರ್‌ ಈರುಳ್ಳಿಯಲ್ಲಿ 750 ಹೆಕ್ಟೇರ್‌ ಈಗಾಗಲೇ ಕೊಳೆರೋಗದಿಂದ ಹಾನಿಯಾಗಿದೆ. ಇನ್ನಷ್ಟು ಬೆಳೆ ಕೊಳೆ ರೋಗಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದ್ದು, ಅಧಿ ಕಾರಿಗಳು ಕೂಡಲೇ ರೈತ ಸಮುದಾಯಕ್ಕೆ ಔಷಧೋಪಚಾರದ ಅಗತ್ಯ ಮಾಹಿತಿ ನೀಡುವಂತೆ ಉದಗಟ್ಟಿ, ಶಾರದಾಳ, ಅಂಕಲಗಿ ಸೇರಿದಂತೆ ಹಲವು ಹಳ್ಳಿಗಳ ರೈತರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.