Arrested: ಭ್ರೂಣಹತ್ಯೆ ಪ್ರಕರಣ… ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನ
Team Udayavani, Jun 1, 2024, 7:33 AM IST
ಮಹಾಲಿಂಗಪುರ: ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಟ್ಟಣದ ಜಯಲಕ್ಷ್ಮಿ ನಗರದ ನಕಲಿ ವೈದ್ಯೆ ಕವಿತಾ ಬಾಡನವರ ಅವರಿಂದ ಗರ್ಭಪಾತ ಮಾಡಿಸಿಕೊಂಡು ಮೃತಳಾದ ಮಹಾರಾಷ್ಟ್ರದ ಮೂಲದ ಸೋನಾಲಿ ಕದಂ ಕೇಸ್ಗೆ ಸಂಬಂಧಿಸಿದಂತೆ ಪ್ರಕರಣದ ಪ್ರಥಮ, ದ್ವಿತೀಯ ಆರೋಪಿಗಳಾದ ಸಾಂಗಲಿ ಜಿಲ್ಲೆಯ ದುದಗಾಂವ ಗ್ರಾಮದ ನಿವಾಸಿಗಳಾದ ಮೃತ ಸೋನಾಲಿ ತಂದೆ ಸಂಜಯ ಗೌಳಿ, ತಾಯಿ ಸಂಗೀತಾ ಗೌಳಿ ಅವರನ್ನು ಮಹಾಲಿಂಗಪುರ ಪೊಲೀಸರು ಗುರುವಾರ ರಾತ್ರಿ ಬಂಧಿಸಿ, ಶುಕ್ರವಾರ ಮಹಾಲಿಂಗಪುರ ಠಾಣೆಗೆ ಕರೆತಂದು ಜಮಖಂಡಿ ಡಿವೈಎಸ್ಪಿ ಶಾಂತಕುಮಾರ ಈ, ಬನಹಟ್ಟಿ ಸಿಪಿಆಯ್ ಸಂಜೀವ ಬಳಗಾರ ಸಮ್ಮುಖದಲ್ಲಿ ಠಾಣಾಧಿಕಾರಿ ಪ್ರವೀಣ ಬೀಳಗಿ ಅವರು ಭ್ರೂಣಹತ್ಯೆಯ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯ ಹಾಜುರುಪಡಿಸಿ ಜಮಖಂಡಿ ಜೈಲಿಗೆ ಒಪ್ಪಿಸಿದ್ದಾರೆ.
ಜಾಮೀನು ಅರ್ಜಿ ತೀರಸ್ಕಾರ : ಇಲ್ಲಿಯವರೆಗೆ ಪ್ರಕರಣಕ್ಕೆ ಸಂಬಂಧಿಸಿದ ಐವರನ್ನು ಬಂಧಿಸಲಾಗಿದೆ. ಅಥಣಿಯ ರಾಮಾನಂದ ನಗರದ ಡಾ.ಕೊತ್ವಾಲೆ, ಮಿರಜ ಸ್ಕ್ಯಾನಿಂಗ್ ಸೆಂಟರ್ನ ಸೋನೋಗ್ರಾಫರ್ ಅವರನ್ನು ಬಂಧಿಸಬೇಕಾಗಿದೆ. ಗರ್ಭಪಾತ ಮಾಡಿಸಿದ ಆರೋಪಿ ಮಹಾಲಿಂಗಪುರದ ಕವಿತಾ ಬಾಡನವರ ಗುರುವಾರ ತಮ್ಮ ವಕೀಲರ ಮೂಲಕ ಕೋರ್ಟಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಮಖಂಡಿ ಕೋರ್ಟ ಅವರ ಜಾಮೀನು ಅರ್ಜಿಯನ್ನು ತೀರಸ್ಕಾರ ಮಾಡಿದೆ.
ಒಂದು ಭ್ರೂಣಹತ್ಯೆಗೆ 2 ಲಕ್ಷ :
ತನ್ನ ಮನೆಯಲ್ಲಿಯೇ ಅಕ್ರಮವಾಗಿ ಭ್ರೂಣಹತ್ಯೆ ಮಾಡುತ್ತಿದ್ದ ಕವಿತಾ ಬಾಡನವರ, ಗರ್ಭಪಾತಕ್ಕೆ ಮೊದಲು ಚಿಕಿತ್ಸೆ ನೀಡುತ್ತಿದ್ದ ಸಾಂಗಲಿಯ ವೈದ್ಯ ಡಾ. ಮಾರುತಿ, ಗಂಡು ಹೆಣ್ಣು ಎಂಬ ಭ್ರೂಣ ಚೆಕ್ ಮಾಡುತ್ತಿದ್ದ ಮಿರಜ್ ಸ್ಕ್ಯಾನಿಂಗ್ ಸೆಂಟರ್ ಸೋನೋಗ್ರಾಪರ್, ಅಥಣಿಯ ಡಾ.ಕೋತ್ವಾಲೆ ಸೇರಿ ಒಂದು ಭ್ರೂಣಹತ್ಯೆಗೆ ಬರೊಬ್ಬರಿ 2 ಲಕ್ಷ ಹಣವನ್ನು ಪಡೆಯುತ್ತಿದ್ದರು ಎಂದು ಬಂಧಿತ ಸಂಜಯ ಗೌಳಿ, ಸಂಗೀತಾ ಗೌಳಿ ಅವರು ಪೊಲೀಸರ ವಿಚಾರಣೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಸುಮಲತಾಗೆ ಪರಿಷತ್ ಭಾಗ್ಯ? ರವಿಕುಮಾರ್ಗೆ ಮತ್ತೆ ಅವಕಾಶ, ಸಿ.ಟಿ.ರವಿಗೆ ಶಾಕ್?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.