![Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು](https://www.udayavani.com/wp-content/uploads/2024/07/gold-415x252.jpg)
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Team Udayavani, Apr 19, 2024, 11:08 PM IST
![Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’](https://www.udayavani.com/wp-content/uploads/2024/04/Congress-s-620x351.jpg)
ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಮುನಿಸಿಕೊಂಡಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ, 2019ರ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಅವರು ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದು, ಜಿಲ್ಲೆಯ ಕಾಂಗ್ರೆಸ್ ಬಿಕ್ಕಟ್ಟು ಬಹುತೇಕ ಶಮನವಾದಂತಿದೆ.
ಟಿಕೆಟ್ ಘೋಷಣೆಯಿಂದಲೂ ಕಾಂಗ್ರೆಸ್ ನಾಯಕರಿಗೆ ಮುಜುಗರ ತರಿಸುತ್ತಿದ್ದ ವೀಣಾ ಶುಕ್ರವಾರ ಕಾಂಗ್ರೆಸ್ ಬೃಹತ್ ಮೆರವಣಿಗೆಯಲ್ಲಿ ಪತಿಯೊಂದಿಗೆ ಕಾಣಿಸಿಕೊಳ್ಳುವ ಜತೆಗೆ ಪಕ್ಷದ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಗೆಲುವಿಗೆ ಶ್ರಮಿಸುವ ಮಾತು ಕೊಟ್ಟಿದ್ದಾರೆ. ವೀಣಾಗೆ ಕೊನೆ ಗಳಿಗೆಯಲ್ಲಿ ಟಿಕೆಟ್ ಕೈತಪ್ಪಿತ್ತು.
ಜಿಲ್ಲಾ ನಾಯಕರ ಶಿಫಾರಸು ಪಟ್ಟಿಯಲ್ಲಿ ಅವರ ಹೆಸರಿರಲಿಲ್ಲ ಎಂಬುದು ಕೆಪಿಸಿಸಿ ವಿವರಣೆಯಾದರೆ, ಕೆಪಿಸಿಸಿಯಿಂದ ನಮಗೆ ಹೆಸರೇ ಬಂದಿಲ್ಲ ಎಂಬುದು ಎಐಸಿಸಿ ವಾದವಾಗಿತ್ತು. ಇದರಿಂದ ನೊಂದಿದ್ದ ವೀಣಾ ಬೆಂಬಲಿಗರ ಸಭೆ ನಡೆಸಿದ್ದರು. ಈ ಮಧ್ಯೆ ಬೆಂಗಳೂರಿನಲ್ಲಿ ಸ್ವತಃ ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ನಡೆದರೂ ವೀಣಾ ಮುನಿಸು ಶಮನವಾಗಿರಲಿಲ್ಲ. ಅವರ ಪತಿ ವಿಜಯಾನಂದ ಅವರು ಪಕ್ಷದ ಪರ ಪ್ರಚಾರ ಆರಂಭಿಸಿದ್ದರೂ ವೀಣಾ ಕಾಣಿಸಿಕೊಂಡಿರಲಿಲ್ಲ. ದಾವಣಗೆರೆಯಲ್ಲಿ ವಾರಗಳ ಕಾಲ ತಂದೆ-ತಾಯಿ ಜತೆಗಿದ್ದ ಅವರು, ಶುಕ್ರವಾರ ಮಧ್ಯಾಹ್ನ ಕಾಂಗ್ರೆಸ್ ಮೆರವಣಿಗೆಯಲ್ಲಿ ಕಾಣಿಸಿಕೊಂಡರು.
ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸ್ಥಾನದ ಭರವಸೆ?
ವೀಣಾಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿ ಅಧ್ಯಕ್ಷೆ ಪುಷ್ಪಾ ಅಮರನಾಥ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
![Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು](https://www.udayavani.com/wp-content/uploads/2024/07/gold-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ](https://www.udayavani.com/wp-content/uploads/2024/07/aa-150x84.jpg)
Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ
![Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್](https://www.udayavani.com/wp-content/uploads/2024/07/pl-150x82.jpg)
Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್
![Rabakavi](https://www.udayavani.com/wp-content/uploads/2024/07/Rabakavi-150x90.jpg)
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-150x98.jpg)
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.