ಮಲಪ್ರಭಾಕ್ಕೆ ಹೆಚ್ಚಿದ ನೀರು: ಬಾಗಲಕೋಟೆ ಜಿಲ್ಲೆಯ 34 ಹಳ್ಳಿಗಳಿಗೆ ಪ್ರವಾಹ ಭೀತಿ!


Team Udayavani, Aug 16, 2020, 2:43 PM IST

ಮಲಪ್ರಭಾಕ್ಕೆ ಹೆಚ್ಚಿದ ನೀರು: ಬಾಗಲಕೋಟೆ ಜಿಲ್ಲೆಯ 34 ಹಳ್ಳಿಗಳಿಗೆ ಪ್ರವಾಹ ಭೀತಿ!

ಬಾಗಲಕೋಟೆ: ಮಲಪ್ರಭಾ ನದಿಗೆ ನವಿಲು ತೀರ್ಥ ಡ್ಯಾಂನಿಂದ ಹೆಚ್ಚಿನ ನೀರು ಬಿಡಲಾಗುತ್ತಿದ್ದು, ಜಿಲ್ಲೆಯ ಬಾದಾಮಿ, ಗುಳೇದ ಗುಡ್ಡ ತಾಲೂಕಿನ ಸುಮಾರು 34 ಹಳ್ಳಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಮಲ್ರಪಭಾ ನದಿಗೆ ಶನಿವಾರ ಸಂಜೆ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದರೆ, ರವಿವಾರ ಮಧ್ಯಾಹ್ನ 1ಕ್ಕೆ 15 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಶನಿವಾರ ಸಂಜೆ ಬಿಟ್ಟ ನೀರು, ರವಿವಾರ ಜಿಲ್ಲೆಗೆ ಪ್ರವೇಶಿಸಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಬಾದಾಮಿ ಮತ್ತು ಗುಳೇದಗುಡ್ಡ ತಾಲೂಕು ಆಡಳಿತದಿಂದ ಡಂಗುರ ಸಾರಿ, ಕಟ್ಟೆಚ್ಚರ ವಹಿಸಲಾಗಿದೆ.

ಕಳೆದ ವರ್ಷ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಂದಿದ್ದರಿಂದ ಸುಮಾರು 43 ಹಳ್ಳಿಗಳು ನೀರಿನಲ್ಲಿ ಮುಳುಗಿದ್ದವು. ಇದರಿಂದ ಲಕ್ಷಾಂತರ ಜನರು ತೀವ್ರ ಸಂಕಷ್ಟ ಎದುರಿಸಿದ್ದರು. ಈ ಭೀಕರ ಪ್ರವಾಹ ಮರೆಯುವ ಮುನ್ನವೇ, ಶನಿವಾರದಿಂದ ನದಿಗೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಭೀತಿಯಲ್ಲೇ ಬದುಕುವ ಅನಿವಾರ್ಯತೆ ಎದುರಾಗಿದೆ.

ಅಧಿಕಾರಿಗಳು ಭೇಟಿ

ಅಧಿಕಾರಿಗಳು ಭೇಟಿ

ಮಲಪ್ರಭಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ಬಾದಾಮಿ ತಹಶಿಲ್ದಾರ ಸುಹಾಸ ಇಂಗಳೆ ಮುಂತಾದ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಮದುರ್ಗ ತಾಲೂಕಿನ ಕಳಸ ಬಳಿ ಮಲಪ್ರಭಾ ನದಿ ಜಿಲ್ಲೆ ಪ್ರವೇಸಿಸುತ್ತಿದ್ದು, ಅಲ್ಲಿಂದ ಕೂಡಲಸಂಗಮ ಬಳಿ ಕೃಷ್ಣಾ ನದಿಯೊಂದಿಗೆ ವಿಲೀನಗೊಳ್ಳುವ ಮಧ್ಯೆ ಒಟ್ಟು 23 ಬ್ಯಾರೇಜ್‌ಗಳಿವೆ.

ಎಲ್ಲ ಬ್ಯಾರೇಜ್‌ಗಳ ಗೇಟ್ ತೆಗೆಯಲಾಗಿದ್ದು, ಅಪಾರ ಪ್ರಮಾಣದ ಮುಳ್ಳು ಕಂಠಿ ಹರಿದು ಬಂದು, ಬ್ಯಾರೇಜ್ ಗೇಟ್‌ನಡಿ ನೀರು ಹರಿದು ಹೋಗಲು ತೊಡಕಾಗಿತ್ತು. ಬಾದಾಮಿ ತಾಲೂಕು ಆಡಳಿತದಿಂದ ಎಲ್ಲ ಬ್ಯಾರೇಜ್ ಗೇಟ್‌ನಲ್ಲಿ ಸುಲುಕಿದ್ದ ಮುಳ್ಳು ಕಂಠಿ ತೆರವುಗೊಳಿಸಿ, ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ.

ಮೂರು ನದಿಯಲ್ಲೂ ಭೀತಿ: ಕಳೆದೊಂದು ವಾರದಿಂದ ತಗ್ಗಿದ್ದ ಪ್ರವಾಹ ಭೀತಿ, ರವಿವಾರ ಮತ್ತೆ ಎದುರಾಗಿದೆ. ಜಿಲ್ಲೆಯ ಕೃಷ್ಣಾ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದು 2.15 ಲಕ್ಷ ದಾಟಿದರೆ ಕೆಲವು ಹಳ್ಳಿಗಳಿಗೆ ಪ್ರವಾಹ ಭೀತಿ ಶುರುವಾಗಲಿದೆ. ಸದ್ಯ ನದಿ ಪಾತ್ರದ ಭೂಮಿಗೆ ನೀರು ನುಗ್ಗಿದ್ದು, ಬೆಳೆಗಳು ನೀರಿನಲ್ಲಿ ನಿಂತಿವೆ.

ಇನ್ನು ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ 13,626 ಕ್ಯೂಸೆಕ್, ಧೂಪದಾಳ ಜಲಾಶಯದಿಂದ 18,470 ಕ್ಯೂಸೆಕ್ ಸೇರಿ ಒಟ್ಟು 32,096 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ 45 ಸಾವಿರ ಕ್ಯೂಸೆಕ್ ನೀರು ಹರಿದು ಬರಲು ಆರಂಭಿಸಿದರೆ, ಈ ನದಿಯಲ್ಲೂ ಪ್ರವಾಹ ಉಂಟಾಗಲಿದೆ.

ಮಲ್ರಪಭಾ ನದಿಗೆ ರವಿವಾರ ಮಧ್ಯಾಹ್ನ 15 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟಿದ್ದು, ಅದು ಸೋಮವಾರದ ಹೊತ್ತಿಗೆ ಜಿಲ್ಲೆ ಪ್ರವೇಶಿಸಲಿದೆ. ಸಧ್ಯಕ್ಕೆ ಈ ನೀರು ನದಿ ಮಟ್ಟದಲ್ಲಿ ಮಾತ್ರ ಹರಿಯಲಿದ್ದು, ಪ್ರವಾಹ ಉಂಟಾಗುವುದಿಲ್ಲ. ಈ ನದಿಗೆ 18 ರಿಂದ 20 ಸಾವಿರ ಕ್ಯೂಸೆಕ್ ನೀರು ಹರಿದರೆ 43 ಹಳ್ಳಿಗಳು ಪ್ರವಾಹಕ್ಕೆ ಒಳಗಾಗಲಿವೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.