Mudhol: ನೀರಿನ ಹೊಡೆತಕ್ಕೆ ಕಿತ್ತು ಹೋದ ಡಾಂಬರ್ ರಸ್ತೆ… ವಾಹನ ಸವಾರರ ಪರದಾಟ
Team Udayavani, Aug 9, 2024, 3:27 PM IST
ಮುಧೋಳ: ಘಟಪ್ರಭಾ ಪ್ರವಾಹ ತಗ್ಗಿದ್ದರೂ ನದಿಯ ಅಬ್ಬರಕ್ಕೆ ಹತ್ತಾರು ಅವಾಂತರಗಳು ಸೃಷ್ಠಿಯಾಗಿವೆ.
ತಾಲೂಕಿನ ಮಾಚಕನೂರ ಗ್ರಾಮದ ಬ್ರಿಜ್ ಕಂ ಬ್ಯಾರೇಜ್ ಮೇಲೆ ನೀರು ಹರಿದ ರಭಸಕ್ಕೆ ಡಾಂಬರ್ ರಸ್ತೆ ಕಿತ್ತುಹೋಗಿದ್ದು ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪ್ರಯಾಸ ಪಡುವಂತಾಗಿದೆ.
ಚಿಕ್ಕೂರ-ಮಾಚಕನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಜ್ ಕಂ ಬ್ಯಾರೇಜ್ ಘಟಪ್ರಭಾ ನದಿಯಲ್ಲಿ ಮುಳುಗಡೆಯಾಗಿತ್ತು. ಇದೀಗ ನದಿಯ ನೀರು ಇಳಿಮುಖವಾಗಿದ್ದು ಬ್ರಿಜ್ ಕಂ ಬ್ಯಾರೇಜ್ ಬಳಿಯಲ್ಲಿ ರಸ್ತೆಯಲ್ಲಿನ ಡಾಂಬರ್ ಸಂಪೂರ್ಣ ಕಿತ್ತು ಹೋಗಿದೆ. ಈ ಮಾರ್ಗದಲ್ಲಿ ಓಡಾಡುವ ವಾಹನ ಸವಾರರಿಗೆ ಹೆಚ್ಚಿನ ತೊಂದರೆಯುಂಟಾಗಿದೆ.
ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸವಾರರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Bengaluru: ʼಕೆಲಸಕ್ಕೆ ಹೋಗು’ ಎಂದಿದ್ದಕ್ಕೆ ತಮ್ಮನನ್ನೇ ಕೊಂದ ಅಣ್ಣ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.