
ಫುಟ್ಪಾತ್ ಅತಿಕ್ರಮಣ ತೆರವು
Team Udayavani, Oct 6, 2019, 5:39 PM IST

ಬಾಗಲಕೋಟೆ: ನಗರಸಭೆಯಿಂದ ನಗರದ ವಿವಿಧೆಡೆ ಫುಟ್ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಶನಿವಾರ ಮುಂದುವರಿದಿದ್ದು, ಈ ವೇಳೆ ನಗರದ ಬಿಲಾಲ್ ಮಸ್ಜಿದ್ ಬಳಿ ನಗರಸಭೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರ ಮಧ್ಯೆ ವಾಗ್ವಾದ ನಡೆಯಿತು.
ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಹಾಗೂ ಪರಿಸರ ಅಭಿಯಂತರ ಹನಮಂತ ಕಲಾದಗಿ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದಿಂದ ಬಿಲಾಲ್ ಮಜ್ಜಿದ, ಮೆಳ್ಳಿಗೇರಿ ವಾಣಿಜ್ಯ ಸಂಕೀರ್ಣದಿಂದ ಕೆರೂಡಿ ಆಸ್ಪತ್ರೆ ರಸ್ತೆವರೆಗೆ ಅಮೃತ ಯೋಜನೆಯಡಿ ನಿರ್ಮಿಸಿದ ಫುಟ್ಪಾತ್ ಅನ್ನು ವ್ಯಾಪಾರಸ್ಥರು ಅತಿಕ್ರಮಣ ಮಾಡಿಕೊಂಡಿದ್ದರು.
ಇದರಿಂದ ನಿತ್ಯ ಆಸ್ಪತ್ರೆಗೆ ಬರುವ ಸಾವಿರಾರು ಜನರು ರಸ್ತೆಯ ಮೇಲೆಯೇ ಸಂಚಾರ ಮಾಡುತ್ತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಫುಟ್ಪಾತ್ ತೆರವು ಮಾಡುವಂತೆ ಒತ್ತಾಯ ಕೇಳಿಬಂದಿತ್ತು.
ಶನಿವಾರ ಬೆಳಗ್ಗೆ ಬಿಲಾಲ್ ಮಸ್ಜಿದ್ ಬಳಿ ಫುಟ್ಪಾತ್ ಅತಿಕ್ರಮಣ ತೆರವಿಗೆ ನಗರಸಭೆ ಸಿಬ್ಬಂದಿ ಮುಂದಾಗುತ್ತಿದ್ದಂತೆ, ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿದರು. ಮೊದಲು ರೈಲ್ವೆ ನಿಲ್ದಾಣ ಕಡೆಯಿಂದ ತೆರವು ಮಾಡಿ. ಆ ಮೇಲೆ ನಾವು ಅಂಗಡಿ ಮುಂದೆ ಹಾಕಿರುವ ತಗಡು ತೆಗೆದುಕೊಳ್ಳುತ್ತೇವೆ ಎಂದು ಪಟ್ಟು ಹಿಡಿದರು. ಈ ವೇಳೆ ನಗರಸಭೆಯ ಹೆಚ್ಚಿನ ಸಿಬ್ಬಂದಿ ಕರೆಸಿ, ಫುಟ್ಪಾತ್ ಮೇಲೆ ಹಾಕಿದ್ದ ಎಲ್ಲ ಗೂಡಂಗಡಿ, ಅಂಗಡಿ ಮುಂದೆ ಹಾಕಿದ್ದ ತಗಡು ತೆಗೆಯಲಾಯಿತು.
ಮೆಳ್ಳಿಗೇರಿ ವಾಣಿಜ್ಯ ಸಂಕಿರ್ಣದಿಂದ ಕೆರೂಡಿ ಆಸ್ಪತ್ರೆ ಹಾಗೂ ರೈಲ್ವೆ ನಿಲ್ದಾಣದಿಂದ ಬಿಲಾಲ್ ಮಸ್ಜಿದ್ ವರೆಗೆ ಸುಮಾರು 30ಕ್ಕೂ ಹೆಚ್ಚು ಗೂಡಂಗಡಿ, ಅಂಗಡಿ ಮುಂದಿನ ತಗಡು ತೆರವುಗೊಳಿಸಲಾಯಿತು. ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ, ಪರಿಸರ ಅಭಿಯಂತರ ಎಚ್.ವಿ. ಕಲಾದಗಿ, ಕಂದಾಯ ಅಧಿಕಾರಿ ಬಸವರಾಜ ನಿರುಗ್ಗಿ, ಜೆಸಿ ಸಾರವಾನ, ಆರೋಗ್ಯ ನಿರೀಕ್ಷರಾದ ಮನೋಜ, ಕಿರಣಕುಮಾರ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.