ರಬಕವಿ-ಬನಹಟ್ಟಿ: ಮೂರು ವರ್ಷದ ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ


Team Udayavani, Mar 15, 2023, 8:01 PM IST

ರಬಕವಿ-ಬನಹಟ್ಟಿ: ಮೂರು ವರ್ಷದ ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

ರಬಕವಿ-ಬನಹಟ್ಟಿ: 9.6 ಕಿ.ಮೀ ಉದ್ದದ ಮತ್ತು 100 ಮೀ ಅಗಲದ ಸಸಾಲಟ್ಟಿಯ ಶಿವಲಿಂಗೇಶ್ವರ ಏತ ನೀರಾವರಿ ಯೋಜನೆಯಿಂದಾಗಿ ಹಳಿಂಗಳಿ, ಹನಗಂಡಿ ಮತ್ತು ಯರಗಟ್ಟಿ ಗ್ರಾಮದ ರೈತರ ಬೆಳೆಗಳಿಗೆ ಭಾರಿ ಹಾನಿಯಾಗಿದ್ದು, ಇಲಾಖೆಯ ಅಧಿಕಾರಿಗಳು ಕೇವಲ ಒಂದು ವರ್ಷದ ಬೆಳೆ ಪರಿಹಾರವನ್ನು ನೀಡಲು ಮುಂದಾಗಿದ್ದು, ಇದರಿಂದ ಈ ಭಾಗದ ಅಂದಾಜು 25 ಎಕರೆಯಷ್ಟು ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾನಿಯಾಗಿದ್ದು, ಹಾನಿಗೆ ಒಳಗಾದ ರೈತರಿಗೆ ಮೂರು ವರ್ಷದ ಬೆಳೆ ಪರಿಹಾರವನ್ನು ನೀಡಬೇಕು ಎಂದು ರೈತ ಸಂಘದ ಮುಖಂಡ ಶ್ರೀಕಾಂತ ಘೂಳನ್ನವರ ಸರ್ಕಾರವನ್ನು ಆಗ್ರಹಿಸಿದರು.

ಬುಧವಾರ ರಬಕವಿಯ ಜಿಎಲ್ ಬಿಸಿ ಆವರಣದಲ್ಲಿ ಹಮ್ಮಿಕೊಂಡ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡುತ್ತ, ಈ ಕುರಿತು ಜಿಎಲ್ ಬಿಸಿ ಅಧಿಕಾರಿಗಳೊಂದಿಗೆ ಎರಡು ಸಂಧಾನ ಸಭೆಗಳು ನಡೆದಿದ್ದು ಯಾವುದೆ ಪ್ರಯೋಜನವಾಗಿಲ್ಲ. ಬೆಳೆ ಪರಿಹಾರ ಕುರಿತು ಅಧಿಕಾರಿಗಳು ಕೇವಲ ಮೌಖಿಕ ಹೇಳಿಕೆಗಳನ್ನು ಮಾತ್ರ ನೀಡುತ್ತಿದ್ದಾರೆ. ಇಲ್ಲಿಯವರೆಗೆ ಹಾನಿಗೆ ಒಳಗಾದ ರೈತರಿಗೆ ಯಾವುದೆ ಲಿಖಿತ ಆದೇಶವನ್ನು ನೀಡಿಲ್ಲ.

ಈ ಕಾಮಗಾರಿಯಿಂದ ರೈತರಿಗೆ ಬಹಳಷ್ಟು ನಷ್ಟವಾಗುತ್ತಿದೆ. ಈಗಾಗಲೇ ಭೂಮಿಯನ್ನು ಅಗೆದು ಬೃಹತ್ ಪೈಪ್ ಅಳವಡಿಸುವ ಕಾರ್ಯ ನಡೆದಿದೆ. ಭೂಮಿಯನ್ನು ಅಗೆಯುವ ಸಂದರ್ಭದಲ್ಲಿ ಈ ಭಾಗದ ರೈತರು ಕೃಷ್ಣಾ ನದಿಯಿಂದ ಪೈಪ್ ಲೈನ್ ಮಾಡಿಕೊಂಡಿದ್ದಾರೆ. ಅವುಗಳಿಗೂ ಕೂಡಾ ಧಕ್ಕೆಯಾಗಿದ್ದು, ರೈತರು ಸಾಕಷ್ಟು ಹಾನಿಯನ್ನು ಅನುಭವಿಸುತ್ತಿದ್ದಾರೆ. ಇದರಿಂದಾಗಿಯೂ ಬೆಳೆಗಳಿಗೆ ಹಾನಿಯಾಗುತ್ತಿದೆ. ಬೃಹತ್ ಪೈಪ್ ಅಳವಡಿಸು ಸಂದರ್ಭದಲ್ಲಿ ಚಿಕ್ಕ ಪುಟ್ಟ ಸಣ್ಣ ಪ್ರಮಾಣದಲ್ಲಿ ಭೂಮಿಯನ್ನು ಹೊಂದಿದ ರೈತರಿಗೆ ಬಹಳಷ್ಟು ಹಾನಿಯಾಗುತ್ತಿದೆ ಎಂದು ಶ್ರೀಕಾಂತ ಘೂಳನ್ನವರ ತಿಳಿಸಿದರು.

ರೈತ ಮುಖಂಡ ಬಸವರಾಜ ಸೆಂಡಗಿ ಮಾತನಾಡಿ, ಈ ಭಾಗದ ಅಂದಾಜು 50 ರಿಂದ 60 ರೈತರ ಭೂಮಿಗಳಿಗೆ ತೊಂದರೆಯಾಗುತ್ತಿದೆ. ಈ ಕಾಮಗಾರಿಯಿಂದ ರೈತರ ಜಮೀನುಗಳಿಗೆ ವೈಜ್ಞಾನಿಕವಾಗಿ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಕಡೆಗೆ ನೀಡಬೇಕು ಎಂದು ಆಗ್ರಹಿಸಿದರು.

ಮಲ್ಲಪ್ಪ ಅಳ್ಳಿಮಟ್ಟಿ, ಮಹಾವೀರ ಮುರಗುಂಡಿ, ಶೇಖರ ಅಳ್ಳಿಮಟ್ಟಿ, ಅಶೋಕ ಮುರಗುಂಡಿ, ಧರೆಪ್ಪ ದೇಸಾಯಿ, ಮಲ್ಲಪ್ಪ ಗೋಪಾಳಿ, ಭೀಮಶಿ ಮುದ್ದೆನ್ನವರ ಸೇರಿದಂತೆ ಅನೇಕ ರೈತರು ಇದ್ದರು. ನೀರಾವರಿ ಇಲಾಖೆಯ ಅಧಿಕಾರಿಗಳಾ ಚೇತನ ಅಬ್ಬಿಗೇರಿ, ಶ್ರೀಧರ ನಂದಿಹಾಳ ಇದ್ದರು.

ಈ ಸಂದರ್ಭದಲ್ಲಿ ನೀರಾವರಿಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಶಿವಲಿಂಗಯ್ಯ ಮಾತನಾಡಿ, ರೈತರು ಮೂರು ವರ್ಷದ ಬೆಳೆ ಹಾನಿಯನ್ನು ಕೇಳುತ್ತಿದ್ದಾರೆ. ಮೂರು ವರ್ಷದ ಹಾನಿಯನ್ನು ನೀಡಲು ಸಾಧ್ಯವಿಲ್ಲ. ಈಗಾಗಲೇ ಮುಧೋಳದ ಮಂಟೂರ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯಲ್ಲಿಯೂ ಕೂಡಾ ಒಂದೇ ಬಾರಿ ಪರಿಹಾರ ನೀಡಲಾಗುತ್ತಿದೆ ಎಂದರು.
– ಶಿವಲಿಂಗಯ್ಯ ಎಂ. ಕಾರ್ಯನಿರ್ವಾಹಕ ಎಂಜಿನಿಯರ್, ಜಿಎಲ್ ಬಿಸಿ ಬೀಳಗಿ

ಇದನ್ನೂ ಓದಿ: H3N2 ವೈರಸ್ ಗೆ MBBS ವಿದ್ಯಾರ್ಥಿ ಕೊನೆಯುಸಿರು; ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ

ಟಾಪ್ ನ್ಯೂಸ್

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.