ಉತ್ತಮ ಮಳೆ: ಮುಂಗಾರು ಬಿತ್ತನೆಗೆ ರೈತ ಸಜ್ಜು
Team Udayavani, Jun 16, 2019, 10:10 AM IST
ರಾಂಪುರ: ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡಲಾದ ಬಿತ್ತನೆ ಬೀಜ.
ರಾಂಪುರ: ಗ್ರಾಮದ ರಾಂಪುರ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಖರೀದಿಸಲು ಮುಂದಾಗಿರುವ ರೈತರು, ಮತ್ತೂಂದು ಮಳೆಗಾಗಿ ಹಾತೊರೆಯುತ್ತಿದ್ದಾರೆ.
ರಾಂಪುರ, ಬೇವೂರ ಸೇರಿದಂತೆ ಸುತ್ತಲಿನ ಗ್ರಾಮಗಳ ಸಣ್ಣ ಮತ್ತು ಅತೀ ಸಣ್ಣ ರೈತರು ಸದಾ ಒಂದಿಲ್ಲೊಂದು ಸಂಕಷ್ಟದ ಸುಳಿಗೆ ಸಿಲುಕಿ ಪರದಾಡಿದ್ದಾರೆ. ಈಚೆಗೆ ಸುರಿದ ಮಳೆಯಿಂದ ಅನ್ನದಾತರು ನಿಟ್ಟಿಸಿರು ಬಿಟ್ಟಿದ್ದಾರೆೆ. ಮಳೆರಾಯನ ಮುನಿಸಿನಿಂದ ರೈತರಲ್ಲಿ ಅಡಗಿರುವ ಆತಂಕ ಕೊಂಚ ದೂರಾಗಿದೆ. ಮುಂಗಾರು ಹಂಗಾಮಿನ ಮಳೆ ಇನ್ನಷ್ಟು ಉತ್ತಮವಾಗಿ ಸುರಿಯುವ ಆಶಾಭಾವನೆಯಿಂದ ಬಿತ್ತನೆ ಬೀಜ ಪಡೆಯಲು ಮುಗಿಬಿದ್ದಿದ್ದಾರೆ.
ಬೀಜಗಳ ದಾಸ್ತಾನು: ರೈತರಿಗೆ ಬೀಜ ಪೂರೈಸಲು ರಾಂಪುರ ರೈತ ಸಂಪರ್ಕ ಕೇಂದ್ರದಲ್ಲಿ ಹೆಸರು ಕಾಳು ಬೀಜ 65 ಕೆಜಿ, ತೊಗರಿ 6 ಕೆಜಿ. ಗೋವಿನ ಜೋಳ 1800 ಕೆಜಿ. ಸಜ್ಜೆ 215 ಕೆಜಿ. ಸೂರ್ಯಕಾಂತಿ 330 ಕೆಜಿ ದಾಸ್ತಾನು ಇದೆ. ಅದರಂತೆ ಹೆಸರು ಕಾಳು 3 ಕ್ವಿಂಟಲ್, ತೊಗರಿ 3 ಕ್ವಿಂಟಲ್ ಬೇಡಿಕೆ ಪಟ್ಟಿಯನ್ನು ಇಲಾಖೆಗೆ ಕಳಿಸಲಾಗಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಎ.ಬಿ. ಒಂಟಿ ತಿಳಿಸಿದ್ದಾರೆ.
ಅಲ್ಲಲ್ಲಿ ಮಳೆ: ಸುತ್ತಲಿನ ಗ್ರಾಮದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ, ಇನ್ನಷ್ಟು ಮಳೆಯಾಗುವ ಲಕ್ಷಣ ಕಂಡು ಬರುತ್ತಿರುವ ಹಿನ್ನೆಲೆಯಿಂದ ಹರ್ಷಿತರಾದ ರೈತರು ಹೆಸರು, ಸಜ್ಜೆ, ಮತ್ತಿತರ ಬಿತ್ತನೆ ಬೀಜ ಪಡೆಯುತ್ತಿರುವುದು ಸಾಮಾನ್ಯವಾಗಿದೆ. ಉತ್ತಮ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಚಾಲನೆ ದೊರೆತಿದೆ. ರೈತರಿಗೆ ಅನಕೂಲವಾಗಲೆಂದು ಸಾಕಷ್ಟು ದಿನಗಳ ಮುಂಚೆಯೆ ಎಲ್ಲ ಬೀಜಗಳ ದಾಸ್ತಾನು ಮಾಡಲಾಗಿತ್ತು. ಆದರೆ ಮಳೆಯಾಗದೇ ಇದ್ದುದರಿಂದ ರೈತರು ಬೀಜ ಖರೀದಿಗೆ ಹಿಂದೇಟು ಹಾಕಿದರು. ಎರಡು ದಿನದಿಂದ ಮಳೆಯ ವಾತಾವರಣ ಕಂಡು ಬರುತ್ತಿದೆ. ಹೀಗಾಗಿ ಎಲ್ಲ ರೈತರು ಒಮ್ಮಲೇ ಬೀಜ ಖರೀದಿಗೆ ಬರುತ್ತಿರುವುದರಿಂದ ನೂಕುನುಗ್ಗಲು ಉಂಟಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.