ಪ್ರವಾಸಿ ತಾಣ ವೀಕ್ಷಿಸಿದ ರಾಜ್ಯಪಾಲ ಗೆಹಲೋತ್‌


Team Udayavani, May 26, 2022, 12:18 PM IST

7

ಅಮೀನಗಡ: ದೇವಾಲಯ ವಾಸ್ತುಶೈಲಿಗಳ ತೊಟ್ಟಿಲು, ಪ್ರಯೋಗಾಲಯ ಎಂದೇ ಖ್ಯಾತಿ ಪಡೆದ ಐಹೊಳೆಯ ಐತಿಹಾಸಿಕ ಪ್ರವಾಸಿ ತಾಣಗಳಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಮೊದಲ ಬಾರಿಗೆ ಬೇಟಿ ನೀಡಿದರು.

ನಂತರ ಗ್ರಾಮದಲ್ಲಿರುವ ಪ್ರಸಿದ್ಧ ದುರ್ಗಾ ದೇವಾಲಯ, ಮ್ಯೂಸಿಯಂ, ಲಾಡಖಾನ ದೇವಾಲಯ, ಗೌಡರ ದೇವಾಲಯ ವೀಕ್ಷಿಸಿ ಪ್ರವಾಸಿ ಮಾರ್ಗದರ್ಶಿಗಳಿಂದ ಪ್ರವಾಸಿ ತಾಣಗಳ ಬಗ್ಗೆ ಸಮಗ್ರ ಮಾಹಿತಿ ಪಡೆದರು. ಐಹೊಳೆಯಲ್ಲಿ 125ಕ್ಕೂ ಹೆಚ್ಚು ದೇವಾಲಯಗಳಿವೆ ಮತ್ತು ಐಹೊಳೆ ಶಾಸನದಲ್ಲಿ ಮಹಾಭಾರತದ ಯುದ್ಧದ ದಿನಾಂಕ ಉಲ್ಲೇಖವಾಗಿರುವುದನ್ನು ಕೇಳಿ ಅಚ್ಚರಿ ವ್ಯಕ್ತಪಡಿಸಿದರು.

ರಾಜ್ಯಪಾಲರಿಗೆ ಮನವಿ: ಐತಿಹಾಸಿಕ ಪ್ರವಾಸಿ ತಾಣ ಐಹೊಳೆ ಗ್ರಾಮದಲ್ಲಿ 125ಕ್ಕೂ ಹೆಚ್ಚು ದೇವಾಲಯಗಳಿವೆ. ಇಲ್ಲಿಯ ಸ್ಮಾರಕಗಳು 9 ಸಾವಿರ ವರ್ಷಗಳ ಪ್ರಾಚೀನತೆ ಹೊಂದಿವೆ. ಈ ಸ್ಮಾರಕಗಳ ರಕ್ಷಣೆಗಾಗಿ 3 ದಶಕಗಳಿಂದ ಮಾನವ ವಸತಿ ಮನೆಗಳನ್ನು ಸ್ಥಳಾಂತರ ಮಾಡಬೇಕು ಎಂಬುದು ಗ್ರಾಮಸ್ಥರ ಒತ್ತಾಯ ಮತ್ತು 10 ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ಥಳಾಂತರ ಮಾಡಲು ಗ್ರಾಮಕ್ಕೆ ಬಂದು ಸ್ಥಳಾಂತರ ಸಮಾರಂಭ ಮಾಡಿ ಶಿಲಾನ್ಯಾಸ ಮಾಡಿದರು.

ಅಂದಿನಿಂದ ಇಂದಿನವರೆಗೂ ಅಧಿಕಾರಿಗಳು ಗ್ರಾಮಕ್ಕೆ ಬರುವುದು, ಸಭೆ ಮಾಡುವುದು ಮಾತ್ರ ಮಾಡುತ್ತಾರೆ. ಇದರಿಂದ ಗ್ರಾಮದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಮತ್ತು ಪುರಾತತ್ವ ಇಲಾಖೆಯ 1958ನೇ ಸಂರಕ್ಷಣೆ ಕಾಯ್ದೆಯಿಂದಾಗಿ ಗ್ರಾಮದಲ್ಲಿ ಮೂಲ ಸೌಕರ್ಯ ಪಡೆಯಲು ತೀವ್ರ ಸಮಸ್ಯೆ ಉಂಟಾಗಿದೆ.

ಆದ್ದರಿಂದ ಪ್ರಾಚೀನ ಸ್ಮಾರಕಗಳನ್ನು ಉಳಿಸಲು ಗ್ರಾಮ ಸ್ಥಳಾಂತರ ಮಾಡಲು ರಾಜ್ಯ-ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕು. ಇದರಿಂದ 125ಕ್ಕೂ ಹೆಚ್ಚು ದೇವಾಲಯಗಳು ಒಂದೇ ಸಮೂಹದಲ್ಲಿ ವೀಕ್ಷಣೆ ಮಾಡಬಹುದು ಎಂದು ರಾಜ್ಯಪಾಲರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಈ ವೇಳೆ ಬಾಗಲಕೋಟೆ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪುರಾತತ್ವ ಇಲಾಖೆಯ ಎಎಸ್‌ ಎಂ ಕುಮಾರನ್‌, ಹುನಗುಂದ ತಹಶೀಲ್ದಾರ್‌ ಬಸಲಿಂಗಪ್ಪ ನೈಕೋಡಿ, ಗ್ರಾಮಸ್ಥರಾದ ಪಿ.ಎಫ್‌. ಗೋಡಿ, ಅಶೋಕ ಮಾಯಾಚಾರಿ, ಯಮನಪ್ಪ ಮಾದರ, ರಮೇಶ ಭಜಂತ್ರಿ, ಜಗದೀಶ ಹೊಸಮನಿ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.