ಗ್ರಾಪಂ ಚುನಾವಣೆಗೆ ದಿನಗಣನೆ ಆರಂಭ

ರಂಗೇರುತ್ತಿದೆ ಕಣ

Team Udayavani, Dec 7, 2020, 3:37 PM IST

ಗ್ರಾಪಂ ಚುನಾವಣೆಗೆ ದಿನಗಣನೆ ಆರಂಭ

ಮುಧೋಳ: ಗ್ರಾಮ ಪಂಚಾಯತ್‌ ಫೈಟ್‌ ತಾಲೂಕಿನಾದ್ಯಂತ ಬಿಸಿಯೇರುತ್ತಿದ್ದು, ಚುನಾವಣಾ ಕಲಿಗಳು ಅ ಧಿಕಾರ ಹಿಡಿಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ತಾಲೂಕಿನ ಒಟ್ಟು 22 ಗ್ರಾಮ ಪಂಚಾಯತಗಳ 396 ಸ್ಥಾನಗಳಿಗೆಡಿ.22ರಂದು ಮೊದಲ ಹಂತದಲ್ಲಿಯೇ ಚುನಾವಣೆ ನಡೆಯಲಿದೆ. 9 ತಿಂಗಳ ಹಿಂದೆಯೇ ನಡೆಯಬೇಕಿದ್ದ ಗ್ರಾಮ ಪಂಚಾಯತ ಚುನಾವಣೆ ಪ್ರಕ್ರಿಯೆ ಕೊರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ಇದೀಗ ಆರಂಭಗೊಂಡಿದೆ.

ಚುರುಕುಗೊಂಡಿರುವ ರಾಜಕೀಯ ಪಕ್ಷಗಳು: ರಾಜ್ಯದ ಪ್ರಭಾವಿ ರಾಜಕಾರಣಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರವಾಗಿರುವ ಮುಧೋಳ ಮತಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆ ಕಣ ಹೆಚ್ಚು ರಂಗೇರಿದೆ. ಈಗಾಗಲೇ ಬಿಜೆಪಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬಿದೆ. ಅದೇ ಮಾರ್ಗದಲ್ಲಿರುವ ಕಾಂಗ್ರೆಸ್‌ ಪಕ್ಷ ಸತೀಶ ಬಂಡಿವಡ್ಡರನೇತೃತ್ವದಲ್ಲಿ ಒಂದು ಸುತ್ತಿನ ಚುನಾವಣೆ ಪೂರ್ವ  ಭಾವಿ ಸಭೆ ನಡೆಸಿ ಕಾರ್ಯಕರ್ತರನ್ನು ಚುನಾವಣೆಗೆ ಅಣಿಗೊಳಿಸಿದೆ. ಆರ್‌.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ನಡೆಯಲ್ಲಿರುವ ಕಾಂಗ್ರೆಸ್‌ ಪಕ್ಷದ ಮತ್ತೂಂದು ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಪಕ್ಷದ ಶಕ್ತಿ ಅನಾವರಣಕ್ಕೆ ವೇದಿಕೆ ಸಜ್ಜುಗೊಳಿಸಲಾಗಿದೆ.

ಇನ್ನು ಕ್ಷೇತ್ರದಲ್ಲಿ ಚುನಾವಣೆ ಆರಂಭಗೊಂಡಿರುವ ಹಿನ್ನೆಲೆ ಜೆಡಿಎಸ್‌ ಪಕ್ಷ ನೂತನ ಕಚೇರಿ ತೆರೆಯುವ ಮೂಲಕ ನಾವು ಸಹ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದೇವೆ ಎಂಬ ಮುನ್ಸೂಚನೆಯನ್ನು ರಾಷ್ಟ್ರೀಯ ಪಕ್ಷಗಳಿಗೆ ನೀಡಿದೆ. ಅದೇ ರೀತಿ ರೈತ ಸಂಘದ ಸದಸ್ಯರು ತಮ್ಮ ಪ್ರಭಾವದ ಮೂಲಕ ಚುನಾವಣೆಗೆ ಧುಮುಕಲು ಅಣಿಯಾಗಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಿಗೂ

ಕೊರತೆ ಇಲ್ಲ: ರಾಜಕೀಯ ಹಿನ್ನೆಲೆಯುಳ್ಳವರು ಪಕ್ಷಗಳ ಬೆಂಬಲದೊಂದಿಗೆ ಸ್ಪರ್ಧೆಗೆ ಧುಮುಕಲು ಮುಂದಾಗಿದ್ದರೆ, ಹಲವಾರು ಗ್ರಾಮಗಳಲ್ಲಿ ಯುವಕರು ಹಾಗೂ ರಾಜಕೀಯ ಹಿತಾಸಕ್ತಿಯುಳ್ಳವರು ಸ್ವತಂತ್ರವಾಗಿ ಸ್ಪ ರ್ಧಿಸುವ ಅಭಿಲಾಷೆ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷ ರಹಿತವಾಗಿರುವ ಗ್ರಾಮ ಪಂಚಾಯತ ಚುನಾವಣೆಯಲ್ಲಿ ವ್ಯಕ್ತಿಗತ ವರ್ಚಸ್ಸು ಕೈಹಿಡಿಯಲಿದೆ ಎಂಬುದು ಹಲವಾರು ಅಭ್ಯರ್ಥಿಗಳ ಅಭಿಪ್ರಾಯವಾಗಿದೆ.

ಹಳ್ಳಿಕಟ್ಟೆಯಲ್ಲಿ ಫೈಟಿಂಗ್‌ ಟಾಕ್‌: ದಿನಬೆಳಗಾದರೆ ಉಭಯ ಕುಶಲೋಪರಿ ಕೃಷಿ ಚಟುವಟಿಕೆ ಸೇರಿದಂತೆ ಇನ್ನುಳಿದ ವಿಷಯಗಳ ಬಗ್ಗೆ ಚರ್ಚೆಯಾಗುತ್ತಿದ್ದ ಹಳ್ಳಿಕಟ್ಟೆಗಳು ಇದೀಗ ಸಂಪೂರ್ಣ ಬದಲಾಗಿವೆ. ಚುನಾವಣೆ ಮಾತು ಅಭ್ಯರ್ಥಿ, ಮತಸೆಳೆಯಲು ರಣತಂತ್ರ, ಚುನಾವಣೆಗೆ ಬೇಕಾದ ಕಾಗದ ಪತ್ರಗಳ ತಯಾರಿಕೆ ಕ್ರಮ ಸೇರಿದಂತೆ ಅನೇಕ ವಿಷಯಗಳು ಮುನ್ನೆಲೆಗೆ ಬರುತ್ತಿವೆ. ತಡರಾತ್ರಿವರೆಗೆ ಹಳ್ಳಿಕಟ್ಟೆಗಳು ಚುನಾವಣೆಗೆ ಮಾತಿಗೆ ಮೀಸಲಾಗಿವೆ.

ಕಡೆಗಣೆನೆಯೂ ಇದೆ: ಚುನಾವಣೆ ದುಡ್ಡು ಇದ್ದವರಿಗೆ, ನಮ್ಮಂತ ಬಡವರಿಗಲ್ಲ ಯಾರು ಆರಿಸಿ ಬಂದರೂ ನಾವು ದುಡಿದು ತಿನ್ನುವುದು ಮಾತ್ರ ತಪ್ಪುವುದಿಲ್ಲ ಎಂಬ ಮನೋಭಾವ ಉಳ್ಳ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಯಾವುದೇ ಗೋಜು ಗದ್ದಲಿಗೆ ಸಿಗದೆ ತಾವಾಯಿತು ತಮ್ಮ ಕೆಲಸವಾಯಿತು ಮಾತಿನಂತಿದ್ದಾರೆ. ಅವರಲ್ಲಿ ಚುನಾವಣೆ ಬಗ್ಗೆ ಪ್ರಶ್ನಿಸಿದರೆ ನಮಗ್ಯಾಕೆ ಅದರ ಉಸಾಬರಿ ಎಂಬ ಉತ್ತರ ನೀಡುತ್ತಾರೆ.

ಕಬ್ಬು ಪ್ರಧಾನ ಬೆಳೆಯಾಗಿರುವ ತಾಲೂಕಿನಲ್ಲಿ ಇದೀಗ ಕಬ್ಬು ಕಟಾವು ಪ್ರಕ್ರಿಯೆಯಲ್ಲಿದೆ. ಕೃಷಿಕರು ತಮ್ಮ ಜಮೀನಿನಲ್ಲಿರುವ ಕಬ್ಬು ಕಟಾವಿನ ಬಗ್ಗೆ ಗಮನಹರಿಸಿದ್ದರೆ. ಲೋಕಲ್‌ ಕಬ್ಬು ಕಟಾವು ಮಾಡುವ ಗ್ಯಾಂಗ್‌ ಕಾರ್ಮಿಕರು ಬೆಳಗ್ಗೆ 5ಗಂಟೆಗೆ ಮನೆಬಿಟ್ಟರೆ ಮರಳಿ ಮನೆಗೆ ವಾಪಸ್ಸಾಗುವುದು ಸೂರ್ಯಾಸ್ತದ ಬಳಿಕವೇ ಅಂತವರು ಮಾತ್ರ ಚುನಾವಣೆ ಎಂದರೆ ಮಾರುದ್ದ ಸರಿದುಹೋಗುತ್ತಿದ್ದಾರೆ.

ತಾಲೂಕು ಆಡಳಿತ ಸಕ್ರಿಯ: ತಾಲೂಕಿನ 22 ಗ್ರಾಮ ಪಂಚಾಯತಗೆ ನಡೆಯುವ ಚುನಾವಣೆಗೆ ತಾಲೂಕು ಆಡಳಿತ ಸನ್ನದ್ಧವಾಗಿದ್ದು, ಚುನಾವಣೆ ಕಾರ್ಯವನ್ನು ಚುರುಕಿನಿಂದ ನಿರ್ವಹಿಸುತ್ತಿದೆ. ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಸಹಾಯಕ ಚುನಾವಣಾಕಾರಿಗಳ ನೇಮಕ ಮಾಡಲಾಗಿದ್ದು, ಶಾಂತಿ ಹಾಗೂ ಸುವಸ್ತಸ್ಥಿತ ಮತದಾನ ಪ್ರಕ್ರಿಯೆಗೆ ಶ್ರಮಿಸುತ್ತಿದ್ದಾರೆ. ಇನ್ನೊಂದೆಡೆ ಚುನಾವಣಾಕಾಂಕ್ಷಿಗಳು ಕಾಗದಪತ್ರ ಹಾಗೂ ಇನ್ನಿತರ ಮಾಹಿತಿಗಾಗಿ ತಹಶೀಲ್ದಾರ್‌ ಕಚೇರಿಗೆ ನಿತ್ಯ ಅಲೆದಾಡುತ್ತಿರುವುದರಿಂದ ತಹಶೀಲ್ದಾರ್‌ ಕಚೇರಿಯೂ ಜನಜಂಗುಳಿಯಿಂದ ಕೂಡಿದೆ.

ತಾಲೂಕಿನಲ್ಲಿ ಬಿಜೆಪಿ ಪರ ಅಲೆಯಿದ್ದು, ಬಹುತೇಕ ಎಲ್ಲ ಪಂಚಾಯಿತಿಗಳಲ್ಲಿ ನಮ್ಮ ಪಕ್ಷ ಬೆಂಬಲಿತ ಕಾರ್ಯಕರ್ತರೆ ಅಧಿ ಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ನಮ್ಮ ಕಾರ್ಯಕರ್ತ ಪಡೆ ಆತ್ಮವಿಶ್ವಾಸದಿಂದ ಚುನಾವಣೆಗೆ ಸನ್ನದ್ಧಗೊಂಡಿದ್ದು, ಎಲ್ಲ ಪಂಚಾಯತತಿಗಳಲ್ಲೂ ಗೆಲುವು ಸಾ ಧಿಸಲಿದ್ದೇವೆ.

 ಹನಮಂತ ತುಳಸಿಗೇರಿ, ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ

ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.