Guledgudda: ಸಾವಯವ ಕೃಷಿಗೆ ಆದ್ಯತೆ ನೀಡಿ : ಹಕಾಟಿ

ನೀರನ್ನು ಮಿತವಾಗಿ ಬಳಸಿ ತೋಟಗಾರಿಕೆ ಬೆಳೆ ಬೆಳೆದರೆ ಆರ್ಥಿಕವಾಗಿ ಸಬಲರಾಗಲು ಸಾಧ್ಯ

Team Udayavani, Nov 17, 2023, 6:12 PM IST

Guledgudda: ಸಾವಯವ ಕೃಷಿಗೆ ಆದ್ಯತೆ ನೀಡಿ : ಹಕಾಟಿ

ಗುಳೇದಗುಡ್ಡ: ಭಾರತದಲ್ಲಿ ಕೃಷಿಯತ್ತ ಯುವ ಜನಾಂಗದ ಆಸಕ್ತಿ ಕಡಿಮೆಯಾಗುತ್ತಿದೆ. ಇಂದು ಯುವಕರು ಕೃಷಿಯ ಕಡೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ತಂತ್ರಜ್ಞಾನ ಅಳವಡಿಸಿಕೊಂಡು  ಕೃಷಿಯಲ್ಲಿ ಅಮೂಲಾಗ್ರ ಪ್ರಗತಿ ಮಾಡಬೇಕಾಗಿದೆ ಜೊತೆಗೆ ಈಗಿರುವ ಕೃಷಿ ಪದ್ದತಿ ಬದಲಾವಣೆ ಮಾಡಿ ಸಾವಯವ ಕೃಷಿಗೆ ಆದ್ಯತೆ ನೀಡಬೇಕಾದ ಅವಶ್ಯಕತೆ ಇದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ ಹೇಳಿದರು.

ಮುರುಡಿ ಗ್ರಾಮದ ಕರಿಯಪ್ಪ ಸೀತಿಮನಿ ಅವರ ತೋಟದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕೆ ಬೆಳೆಗಳ ಕ್ಷೇತ್ರೋತ್ಸವ ಮತ್ತು
ವಿಚಾರ ಸಂಕಿರಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಸಾಕಷ್ಟು ಸಹಾಯ ಮಾಡುತ್ತಿದೆ. ವಿವಿಧ ಹಣ್ಣುಗಳ ಬೆಳೆಗೆ ಸಹಾಯಧನ ನೀಡುತ್ತಿದೆ. ರೈತರು ಹಿರಿಯರು ಗಳಿಸಿದ ಭೂಮಿಯನ್ನು ಉಳಿಸಿಕೊಂಡು, ನೀರನ್ನು ಮಿತವಾಗಿ ಬಳಸಿ ತೋಟಗಾರಿಕೆ ಬೆಳೆ ಬೆಳೆದರೆ ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದರು.

ಅಮರೇಶ್ವರ ಮಠದ ಡಾ| ನೀಲಕಂಠ ಶಿವಾಚಾರ್ಯ ಶ್ರೀ ಸಾನಿಧ್ಯವಹಿಸಿ ಮಾತನಾಡಿ, ಅಧಿ ಕ ಹಾಗೂ ತಕ್ಷಣದ ಲಾಭಕ್ಕೆ ದಲ್ಲಾಳಿಗಳು ಬಾಳೆಹಣ್ಣನ್ನು ರಾಸಾನಿಕಯುಕ್ತ ಮಾಡದೇ, ನೈಸರ್ಗಿಕವಾಗಿ ಹಣ್ಣಾಗಲು ಬಿಡುವ ಕ್ರಮವನ್ನು ಸರ್ಕಾರ ಮತ್ತು ತೋಟಗಾರಿಕೆ  ವಿಜ್ಞಾನಿಗಳು ಮಾಡಬೇಕು ಎಂದರು. ಇದೇ ಸಂದರ್ಭದಲ್ಲಿ ಇತ್ತೀಚಿಗೆ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕರಿಯಪ್ಪ ಸೀತಿಮನಿ ಅವರನ್ನು ವಿವಿಧ ಸಂಘ ಸಂಸ್ಥೆಯವರು ಸನ್ಮಾನಿಸಿದರು. ಬಾಗಲಕೋಟೆಯ ತೋಟಗಾರಿಕೆ ವಿ.ವಿ.ಯ ಹಣ್ಣು ವಿಭಾಗದ ಪ್ರಾಧ್ಯಾಪಕ ಆನಂದ ನಂಜಪ್ಪನವರ್‌, ಕೃಷಿ ಅಧಿಕಾರಿ ಆನಂದಗೌಡ ಗೌಡರ ಮಾತನಾಡಿದರು. ಬಾದಾಮಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಬಾನುಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು ಹಾನಾಪುರ ಗ್ರಾಪಂ ಅಧ್ಯಕ್ಷ ಜಗದೀಶ ಹಿರೇಗೌಡರ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್‌. ಕವಿಶೆಟ್ಟಿ, ಗುರುರಾಜ ಮುಕುಂದ, ಪಿ.ವಿ.ಜಾಧವ, ಎಂ.ಪಿ.ಮಾಗಿ, ಎನ್‌.ಬಿ.ಮಾಚಾ ಉಪಸ್ಥಿತರಿದ್ದರು.

ರೈತರು ಬೆಳೆದ ಹಣ್ಣುಗಳಿಗೆ ರಾಸಾಯನಿಕ ಸಿಂಪಡಿಸಿ ಬೇಗ ಹಣ್ಣು ಮಾಡಿ ಮಾರುಕಟ್ಟೆಗೆ ತರುವ ಪದ್ಧತಿಯನ್ನು ಸರ್ಕಾರ ನಿರ್ಬಂಧಿ ಸಬೇಕು. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೆಳೆ, ಹಣ್ಣು ಕೆಡದಂತೆ ಇಡಲು ಬೇರೆ ಮಾರ್ಗವನ್ನು ಸರ್ಕಾರ ಹಾಗೂ ತೋಟಗಾರಿಕೆ ಮತ್ತು ಕೃಷಿ ವಿಜ್ಞಾನಿಗಳು ಕಂಡುಕೊಳ್ಳಬೇಕು.
ಎಸ್‌.ಎಸ್‌.ನಾರಾ ಪ್ರಗತಿಪರ ರೈತರು,
ಗುಳೇದಗುಡ್ಡ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.