Bagalkote; ಬಿಜೆಪಿ-ಕಾಂಗ್ರೆಸ್ ಸರ್ಕಾರಗಳ ಹಗರಣ ತನಿಖೆ ಸಿಬಿಐಗೆ ಕೊಡಿ: ಕೆ.ಎಸ್.ಈಶ್ವರಪ್ಪ
Team Udayavani, Jul 22, 2024, 11:04 AM IST
ಬಾಗಲಕೋಟೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು.
ನಗರದಲ್ಲಿ ಸುತ್ತಿದಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. ಈ ಆಪಾದನೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದ ಮೇಲೆ ಅವರು ಪ್ರತಿಯಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 22 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರೈತನ ತೆರಿಗೆ ಹಣ ಸಂಪೂರ್ಣ ದುರುಪಯೋಗ ಆಗುತ್ತಿದೆ ಎನ್ನುವುದು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಅನುಮಾನವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳು ನಡೆದಿದೆ. ಅವುಗಳನ್ನು ಸಿಬಿಐಗೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಆವಾಗ ಹೇಳುತ್ತಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಅಪಾದಿಸುತ್ತಿದ್ದಾರೆ. ಭಯ ಪಕ್ಷಗಳ ನಾಯಕರು ಕೇವಲ ತನಿಖೆಯಾಗಲಿ ಎಂದು ಹೇಳುತ್ತಿದ್ದಾರೆ ವಿನಃ ಸಿಬಿಐಗೆ ನೀಡಲು ಯಾಕೆ ಹಿಂಜರಿಯುತ್ತಿದ್ದಾರೆ. ದೇಶದಲ್ಲಿ ಎರಡು ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ನೀಡಿದರೆ ರಾಜ್ಯ ಮತ್ತು ದೇಶದಲ್ಲಿ ಯಾರು ಭ್ರಷ್ಟಾಚಾರ ಹಗರಣಗಳು ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿ ಜನರ ಮುಂದೆ ಬರುತ್ತದೆ. ಇಲ್ಲವಾದಲ್ಲಿ ಕೇವಲ ಪರಸ್ಪರ ಆರೋಪ ಆಪಾದನೆಗಳನ್ನು ಮಾಡಿದರೆ. ತಪ್ಪಿಸ್ತಸ್ಥರು ಯಾರು ಎಂಬುದು ಹೊರಗೆ ಬರುವುದಿಲ್ಲ. ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ. ಸಿಬಿಐಗೆ ನೀಡಲು ಯಾರು ಸಿದ್ದವಿಲ್ಲ. ಒಬ್ಬರನ್ನೊಬ್ಬರು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ: ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಆರೋಪಿಸಿದರು. ಶಿಕಾರಿಪುರದಲ್ಲಿ ಈಗಿನ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಬಸನಗೌಡ ಯತ್ನಾಳ, ಪ್ರತಾಪ್ ಸಿಂಹ, ಸಿ.ಟಿ. ರವಿ ಅವರ ಮಾತುಗಳು ನೂರಕ್ಕೆ ನೂರು ಸತ್ಯ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇರುವುದರಿಂದ ರಾಜಕೀಯ ಭ್ರಷ್ಟಾಚಾರ, ವ್ಯಬಿಚಾರ ನಡೆಯುತ್ತಿರುವುದು ರಾಜ್ಯದ ಜನರಿಗೆ ಗೊತ್ತಾಗಿದೆ. ಈ ಹೊಂದಾಣಿಕೆ ಕೂಡಾ ಹೊರಗಡೆ ಬರುತ್ತದೆ. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳು, ಅವ್ಯವಹಾರಗಳನ್ನು ಸಿಬಿಐಗೆ ನೀಡಬೇಕು ಎಂದು ಬಾಗಲಕೋಟೆಯಲ್ಲಿ ಈಶ್ವರಪ್ಪ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.