ಹರ್ ಘರ್ ತಿರಂಗಾ: ಗುಡಿಸಲು,ಜಮೀನಿನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ


Team Udayavani, Aug 13, 2022, 4:29 PM IST

ಹರ್ ಘರ್ ತಿರಂಗಾ: ಗುಡಿಸಲು,ಜಮೀನಿನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ

ಕುಳಗೇರಿ ಕ್ರಾಸ್: (ಬಾಗಲಕೋಟೆ):  75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಗ್ರಾಮದಲ್ಲಿ ದೇಶಭಕ್ತರು ಬೆಳಿಗ್ಗೆಯಿಂದಲೇ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಇತ್ತ ಮನೆ ಇಲ್ಲದವರು ತಮ್ಮ ಗುಡಿಸಲು ಮೇಲೆ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸಿದರೆ ಕೆಲ ರೈತರು ತಮ್ಮ ಜಮಿನುಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ ಮಾಡಿದರು.

ಗ್ರಾಮದ ಎಪಿಎಂಸಿ ಆವರಣದಲ್ಲಿ ಸುಮಾರು ವರ್ಷಗಳಿಂದ ವಾಸವಿರುವ 80 ಕ್ಕೂ ಹೆಚ್ಚು ಅಲೆಮಾರಿ ಕುಟುಂಬದ ನೂರಾರು ಸದಸ್ಯರು ಸೇರಿ ತಮ್ಮ ಗುಡಿಸಲು ಮೇಲೆ ರಾಷ್ಟ್ರ ಧ್ವಜ ಹಾರಿಸಿ ಸಂಭ್ರಮಿಸಿದರು. ತಮ್ಮ ಗುಡಿಸಲು ಮುಂದೆ ರಂಗೋಲಿ ಹಾಕಿ ನಂತರ ರಾಷ್ಟ್ರ ಧ್ವಜಕ್ಕೆ ಪೂಜೆ ನಡೆಸಿ ಅವರು ಮಕ್ಕಳು ಮಹಿಳೆಯರು ಸೇರಿ ಧ್ವಜಾರೋಹಣ ಮಾಡಿದರು.

ನಂತರ ಅಲೆಮಾರಿ ಜನಾಂಗದ ಮುಖಂಡ ಮಾರುತಿ ಎಣ್ಣಿ ಮಾತನಾಡಿ ಸರಕಾರ ಎಲ್ಲರಿಗೂ ತಮ್ಮ ಮನೆಗಳ ಮೇಲೆ ಧ್ವಜಾರೋಹಣ ಮಾಡಲು ಅವಕಾಶ ಕೊಟ್ಟಿರುವುದು ನಮಗೆ ಬಹಳ ಸಂತೋಷವಾಗಿದೆ.

ನಾವು ಬೆಳಿಗ್ಗೆ ಬೇಗ ಎದ್ದು ಮನೇಯ ಹೆಣ್ಣು ಮಕ್ಕಳು ಸಾರಣಿ ಮಾಡಿ ರಂಗೋಲಿ ಹಾಕಿ ಈ ಒಂದು ಅವಕಾಶವನ್ನು ಹಬ್ಬಂದಂತೆ ಆಚರಿಸಿದ್ದೇವೆ.

ಇಷ್ಟುದಿನ ನಾವು ಎಲ್ಲ ಸರ್ಕಾರಿ ಕಛೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ದ್ವಜ ಹಾರಿಸುವುದನ್ನ ಕಂಡು ಸಂತಸ ಪಡುತ್ತಿದ್ದೆವು. ಆದರೆ ಈ ಬಾರಿ 75 ರ ಸಂಭ್ರಮಾಚರಣೆಗೆ ನಮಗೆಲ್ಲ ತ್ರಿವರ್ಣ ಧ್ವಜ ಕೊಡುವ ಮೂಲಕ ನಮ್ಮ ಗುಡಿಸಲು ಮೇಲೆ ಧ್ವಜ ಹಾರಿಸಲು ನಮಗೆ ಅವಕಾಶ ಕೊಟ್ಟು ಸರಕಾರ ನಮ್ಮನ್ನೆಲ್ಲ ಸಂತೋಷಪಡಿಸಿದೆ.

ಗ್ರಾಪಂ ಸದಸ್ಯರಾದ ವೆಂಕಣ್ಣ ಹೊರಕೇರಿ, ಹನಮಂತ ನರಗುಂದ, ಶೇಖಪ್ಪ ಪವಾಡಿನಾಯ್ಕರ್, ಮುತ್ತಪ್ಪ ವಿಭುತಿ, ಬುಡ್ಡಪ್ಪ ಕರಿ, ಮಲ್ಲಯ್ಯ ವಿಭುತಿ, ಅಣ್ಣಪ್ಪ ಎಣ್ಣಿ ಸೇರಿದಂತೆ ಅಲೆಮಾರಿ ಕುಟುಂಬದವರು ಭಾಗವಹಿಸಿದ್ದರು.

ನಾವು ಅಲೆಮಾರಿ ಜನಾಂಗದವರು ಸುಮಾರು ವರ್ಷಗಳಿಂದ ಕುಳಗೇರಿ ಗ್ರಾಮದ ಒಂದೆ ಸ್ಥಳದಲ್ಲಿ ಗುಡಿಸಲಲ್ಲಿ ವಾಸವಿದ್ದೆವೆ ಈಗಾಗಲೇ ಕೆಲ ಕುಟುಂಬಗಳಿಗೆ ಸರಕಾರ ಮನೆಗಳನ್ನ ಕೊಟ್ಟಿದೆ ಇನ್ನೂ ಕೆಲ ಕುಟುಂಬಗಳು ಇನ್ನು ಗುಡಿಸಲಲ್ಲೇ ವಾಸವಿದ್ದು ಅವರಿಗೆ ಸರ್ಕಾರದಿಂದ ಮನೆಗಳನ್ನು ಕೊಡಬೇಕು. -ಅಲೇಮಾರಿ ಜನಾಂಗದ ಮುಖಂಡ ಮಾರುತಿ ಎಣ್ಣಿ.

 

-ವರದಿ: ಮಹಾಂತಯ್ಯ ಹಿರೇಮಠ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.