ಆರೋಗ್ಯ ಸೇವೆ ದೊರೆಯದೇ ಪರದಾಟ

ಆದರೆ, ಇಂದು ಆಸ್ಪತ್ರೆಯಲ್ಲಿ 30-40 ಜನರಿಗೆ ಚಿಕಿತ್ಸೆ ದೊರೆಯುತ್ತಿಲ್ಲ.

Team Udayavani, Oct 28, 2021, 6:46 PM IST

ಆರೋಗ್ಯ ಸೇವೆ ದೊರೆಯದೇ ಪರದಾಟ

ಮಹಾಲಿಂಗಪುರ: ಚಿಮ್ಮಡ ಪ್ರಾಥಮಿಕ ಆರೋಗ್ಯ ಕೇಂದ್ರ ಸುಸಜ್ಜಿತ ಕಟ್ಟಡ ಹೊಂದಿದ್ದರೂ ರೋಗಿಗಳಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ. ಸಕಾಲಕ್ಕೆ ವೈದ್ಯರಿಂದ ಸಮರ್ಪಕ ಸೇವೆ ಸಿಗದೇ, ಕಾಯಂ ನರ್ಸ್‌ ಇಲ್ಲದೇ ರೋಗಿಗಳು ಪರದಾಡುವಂತಾಗಿದೆ. ವೈದ್ಯಾಧಿಕಾರಿಗಳ
ವರ್ಗಾವಣೆ, ಅಸಮರ್ಪಕ ನಿರ್ವಹಣೆ, ಔಷಧ ಕೊರತೆಯಿಂದ ರೋಗಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ರೋಗಿಗಳ ಕೊರತೆ ಕಾರಣ ನೀಡಿ, 24×7 ಆಸ್ಪತ್ರೆ ಸೌಲಭ್ಯ ಹಿಂಪಡೆಯಲಾಯಿತು. ಇದರಿಂದ ಈ ಆಸ್ಪತ್ರೆ ಕೇವಲ ಕೋವಿಡ್‌ ಲಸಿಕೆ ನೀಡಲು ಹಾಗೂ ಗರ್ಭಿಣಿಯರಿಗೆ ಹೆರಿಗೆ ಕಾರ್ಡ್‌ ನೀಡುವುದಕ್ಕೆ ಮಾತ್ರ ಸೀಮಿತವಾದಂತಾಗಿದೆ.

ಕೋವಿಡ್‌ ಲಸಿಕಾಮೇಳದಲ್ಲಿ ಕರ್ತವ್ಯಕ್ಕೆ ಹಾಜರಿಲ್ಲದ ಕಾರಣ ಚಿಮ್ಮಡ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ| ಅಶೋಕ ಪಡಸಾಲೆ ಅವರನ್ನು ಅಮಾನತು ಮಾಡಲಾಗಿತ್ತು. ಕೆಲವೇ ದಿನಗಳಲ್ಲಿ ಪಡಸಾಲೆ ಮುಖ್ಯ ವೈದ್ಯಾಧಿಕಾರಿಗಳಾಗಿ ಕಾರ್ಯ ನಿರ್ವಹಣೆ ಆರಂಭಿಸಿದ್ದರೂ ಜನರು ಇವರ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿಲ್ಲ.

ಸ್ಟಾಫ್‌ ನರ್ಸ್‌ ಕೊರತೆ: ಸದ್ಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಸೇರಿದಂತೆ 13 ಜನ ಸಿಬ್ಬಂದಿ, ಹನ್ನೆರಡು ಜನ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ಸ್ಟಾಪ್‌ ನರ್ಸ್‌ಗಳ ಕೊರತೆ ಇದೆ.

ಡಿಎಚ್‌ಒ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ:ಆಸ್ಪತ್ರೆ ಆರಂಭದ ಕೆಲವು ವರ್ಷಗಳವರೆಗೆ ಪ್ರತಿದಿನ 200ಕ್ಕೂ ಹೆಚ್ಚು ಜನ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಆಸ್ಪತ್ರೆಯಲ್ಲಿ 30-40 ಜನರಿಗೆ ಚಿಕಿತ್ಸೆ ದೊರೆಯುತ್ತಿಲ್ಲ. ಗ್ರಾಮಸ್ಥರು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಅನಂತ ದೇಸಾಯಿಯವರ ಗಮನಕ್ಕೆ ತಂದಾಗ ಗ್ರಾಮದ ಆಸ್ಪತ್ರೆಗೆ ಖಾಯಂ ನರ್ಸ ನೇಮಕಗೊಳಿಸಿ ಗ್ರಾಮದ ಆಸ್ಪತ್ರೆಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ಅಳಲು.

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹಾಗೂ ಶಾಸಕರಿಗೆ ಹಲವಾರು ಬಾರಿ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ, ಹೆರಿಗೆಗೆ ಗರ್ಭಿಣಿಯರು ಪರದಾಡುವಂತಾಗಿದೆ. ಗ್ರಾಮದ ಆಸ್ಪತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಿ. 24×7 ಹೆರಿಗೆ ಸೌಲಭ್ಯ ನೀಡದಿದ್ದಲ್ಲಿ ಆಸ್ಪತ್ರೆಯ ಬಾಗಿಲು ಹಾಕಿ ಪ್ರತಿಭಟನೆ ನಡೆಸಲಾಗುವುದು.
ಗುರಲಿಂಗಪ್ಪ ಪೂಜಾರಿ, ಅಧ್ಯಕ್ಷರು ಗ್ರಾಪಂ ಚಿಮ್ಮಡ

ಚಿಮ್ಮಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ನರ್ಸ್‌ ಹುದ್ದೆಯೇ ಇಲ್ಲ. ಅದಕ್ಕಾಗಿ ಈಗಾಗಲೇ ಡಿಎಚ್‌ಓ ಅವರು ಸರ್ಕಾರಕ್ಕೆ ಪತ್ರ ಬರೆದು ಕಾಯಂ ನರ್ಸ್‌ ಹುದ್ದೆಯನ್ನು ಮಂಜೂರಿ ಮಾಡಲು ವಿನಂತಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವೈದ್ಯರಿಗೆ ಎಚ್ಚರಿಕೆ
ನೀಡಿ, ಅಲ್ಲಿನ ಲೋಪದೋಷ ಸರಿಪಡಿಸುತ್ತೇವೆ. ಮಹಾಲಿಂಗಪುರ ಮತ್ತು ಬನಹಟ್ಟಿ ಸರಕಾರಿ ಆಸ್ಪತ್ರೆಯ ವೈದ್ಯರಿಗೆ ತಿಳಿಸಿ. ಚಿಮ್ಮಡ ಗ್ರಾಮದಿಂದ ಬರುವ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸುತ್ತೇವೆ.
ಜಿ.ಎಸ್‌.ಗಲಗಲಿ, ಟಿಎಚ್‌ಒ ರಬಕವಿ-ಬನಹಟ್ಟಿ

*ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.