ಹೆಸ್ಕಾಂಗೆ ಸ್ಥಳೀಯ ಆಡಳಿತಗಳ ಶಾಕ್‌ ;21 ಗ್ರಾಪಂನಿಂದ 14.51 ಕೋಟಿ ಬಾಕಿ

ಅತಿ ಹೆಚ್ಚು ಬಾಕಿ ಉಳಿಸಿಕೊಂಡ ಮುರನಾಳ ಗ್ರಾಪಂ

Team Udayavani, Nov 6, 2022, 4:40 PM IST

13

ಬಾಗಲಕೋಟೆ: ಇದು ಕರೆಂಟ್‌ಗೆ ಶಾಕ್‌ ಕೊಡುವ ಸುದ್ದಿ. ಸರ್ಕಾರದಿಂದಲೇ ವಿದ್ಯುತ್‌ ಪೂರೈಸುವ ಕಂಪನಿಗೆ ಕೋಟಿ ಕೋಟಿ ಬಾಕಿ ಉಳಿಸಿದೆ ಎಂದರೆ ನಂಬಲೇಬೇಕು.

ಹೌದು, ಆಯಾ ಗ್ರಾಮಕ್ಕೆ ಸ್ಥಳೀಯ ಸರ್ಕಾರ ಅಂದ್ರೇನೇ, ಗ್ರಾಮ ಪಂಚಾಯಿತಿಗಳು. ಆಯಾ ಗ್ರಾಮಕ್ಕೆ ಬೇಕಾದ ಪ್ರತಿಯೊಂದು ಅಗತ್ಯ ಮೂಲಭೂತ ಸೌಲಭ್ಯಗಳ ಪೂರೈಕೆಯ ಹೊಣೆ ಗ್ರಾ.ಪಂ. ಹೊತ್ತುಕೊಂಡಿವೆ. ಇದಕ್ಕಾಗಿ ಸರ್ಕಾರ, ಅನುದಾನದ ರೂಪದಲ್ಲಿ ನೆರವು ಕೊಡುತ್ತದೆ. ಹಳ್ಳಿಗಳ ಜನರಿಗೆ ಸಧ್ಯದ ಪರಿಸ್ಥಿತಿಯಲ್ಲಿ ಒಂದು ಇಲ್ಲವೆಂದರೂ, ಇನ್ನೊಂದನ್ನು ಪಡೆದು ಬದುಕಬಹುದು.

ಆದರೆ, ನೀರು ಮತ್ತು ವಿದ್ಯುತ್‌ ಇಲ್ಲದಿದ್ದರೆ ಬದುಕೇ ದುಸ್ಥರ ಎಂಬ ಪರಿಸ್ಥಿತಿ ಎಲ್ಲೆಡೆ ಇದೆ. ಆದರೆ, ಈ ನೀರು ಮತ್ತು ವಿದ್ಯುತ್‌ ಪೂರೈಸಲು ಅಗತ್ಯವಾಗಿ ಬೇಕಾಗಿರುವುದು ವಿದ್ಯುತ್‌. ಆ ವಿದ್ಯುತ್‌ ಪೂರೈಸುವ ಹೊಣೆಗಾರಿಕೆ ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ವಹಿಸಿಕೊಂಡಿದೆ. ಈ ಹೆಸ್ಕಾಂ ವ್ಯಾಪ್ತಿಯಲ್ಲಿ ಬೆಳಗಾವಿ ಕಂದಾಯ ವಿಭಾಗದ ಏಳು ಜಿಲ್ಲೆಗಳಿವೆ.

ಕೋಟಿ ಕೋಟಿ ಬಾಕಿ: ಖಾಸಗಿ ವ್ಯಕ್ತಿಗಳು ಬಹುತೇಕ ವಿದ್ಯುತ್‌ ಬಿಲ್‌ ಪಾವತಿಸುತ್ತಾರೆ. ಗೃಹ ಬಳಕೆಗೆ ಪಡೆಯುವ ವಿದ್ಯುತ್‌ ಬಿಲ್‌ ಪಾವತಿಸದಿದ್ದರೆ ಹೆಸ್ಕಾಂ, ಅಂತಹ ಮನೆಗಳಿಗೆ ವಿದ್ಯುತ್‌ ಬಿಲ್‌ ಕಡಿತಗೊಳಿಸುತ್ತದೆ. ಅಷ್ಟೊಂದು ಕಟ್ಟುನಿಟ್ಟಿನ ಕ್ರಮ ಹೆಸ್ಕಾಂ ಮಾಡುತ್ತಿದೆ. ಆದರೆ, ಸಧ್ಯ ಹೆಸ್ಕಾಂಗೆ ದೊಡ್ಡ ತಲೆನೋವಾಗಿರೋದು, ಸರ್ಕಾರಿ ಕಚೇರಿಗಳು, ಕುಡಿಯುವ ನೀರು ಪೂರೈಕೆ ಯೋಜನೆಗಳು, ಏತ ನೀರಾವರಿ ಯೋಜನೆಗಳು, ಗ್ರಾಮ ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿದ್ಯುತ್‌ ಬಿಲ್‌ ಕೋಟಿ ಕೋಟಿ ಲೆಕ್ಕದಲ್ಲಿದೆ ಎಂದರೆ ನಂಬಲೇಬೇಕು.

ಹೀಗೆ ಕೋಟಿ ಕೋಟಿ ಲೆಕ್ಕದಲ್ಲಿ ಬಾಕಿ ಉಳಿಸಿಕೊಂಡ ವಿದ್ಯುತ್‌ ಬಿಲ್‌ನಿಂದ ಹೆಸ್ಕಾಂ ಕಂಪನಿ ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದೆ. ಜನರಿಗೆ ಸಕಾಲಕ್ಕೆ ವಿದ್ಯುತ್‌ ಪೂರೈಸುವ ನಿಟ್ಟಿನಲ್ಲಿ ಅದೂ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಹೀಗಾಗಿ ವಿದ್ಯುತ್‌ ಬಿಲ್‌ ಕೊಡದ, ಅದರಲ್ಲೂ 10 ಲಕ್ಷಕ್ಕೂ ಅಧಿಕ ಬಾಕಿ ಉಳಿಸಿಕೊಂಡ ಗ್ರಾ.ಪಂ. ಕಚೇರಿ ವ್ಯಾಪ್ತಿಯ ಬೀದಿದೀಪ ಮತ್ತು ಕುಡಿಯುವ ನೀರು ಪೂರೈಕೆಗೆ ನೀಡಿದ ವಿದ್ಯುತ್‌ ಕಡಿತಗೊಳಿಸಲು ಸ್ವತಃ ಸರ್ಕಾರದ ಆದೇಶವೂ ಇದೆ. ಅದನ್ನೇ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹೆಸ್ಕಾಂ ಇದೀಗ ಮುಂದಾಗಿದೆ. ಬಾಕಿ ಕೊಡದ ಗ್ರಾಮಗಳಲ್ಲಿ ಇದೇ ನವ್ಹೆಂಬರ್‌ 16ರಿಂದ ಬಹುತೇಕ ವಿದ್ಯುತ್‌ ಕಡಿತಗೊಳ್ಳಲಿದೆ.

ಮುರನಾಳ ಗ್ರಾ.ಪಂ. ಅಧಿಕ: ಬಾಗಲಕೋಟೆ ತಾಲೂಕಿನಲ್ಲಿ 29 ಗ್ರಾ.ಪಂ.ಗಳಿದ್ದು, ಅದರಲ್ಲಿ ಬರೋಬ್ಬರಿ 21 ಗ್ರಾ.ಪಂ.ಗಳು ತಲಾ 10 ಲಕ್ಷಕ್ಕೂ ಮೇಲ್ಪಟ್ಟು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿವೆ. ಅದರಲ್ಲೂ ಮುರನಾಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಟ್ಟು 840 ವಿದ್ಯುತ್‌ ಸ್ಥಾವರ (ಮೀಟರ್‌) ಗಳಿದ್ದು, ಅವುಗಳಿಂದ 178.45 ಲಕ್ಷ (1.78 ಕೋಟಿ) ಬಾಕಿ ಪಾವತಿಸಬೇಕಿದೆ. ಅಷ್ಟೂ ಗ್ರಾ.ಪಂ. ಗಳಲ್ಲಿ ಅತಿಹೆಚ್ಚು ವಿದ್ಯುತ್‌ ಬಾಕಿ ಉಳಿಸಿಕೊಂಡ ಗ್ರಾ.ಪಂ.ನಲ್ಲಿ ಮುರನಾಳಕ್ಕೆ ಪ್ರಥಮ ಸ್ಥಾನವಿದೆ. ಇನ್ನು ತಾಲೂಕಿನ ಕದಾಂಪುರ ಗ್ರಾ.ಪಂ. 12.12 ಲಕ್ಷ ಬಾಕಿ ಪಾವತಿಸಬೇಕಿದ್ದು, ಬಾಗಲಕೋಟೆ ತಾಲೂಕಿನ ಬಾಕಿ ಉಳಿಸಿಕೊಂಡ ಗ್ರಾ.ಪಂ.ಗಳಲ್ಲೇ ಅತಿ ಕಡಿಮೆ (10 ಲಕ್ಷ ಮೇಲ್ಪಟ್ಟ ಗ್ರಾ.ಪಂ.ಗಳಲ್ಲಿ) ಬಾಕಿ ಉಳಿಸಿಕೊಂಡ ಪಟ್ಟಿಯಲ್ಲಿದೆ.

ಪ್ರತಿ ತಿಂಗಳು ನೋಟಿಸ್‌

ಜಿಲ್ಲೆಯ ಗ್ರಾ.ಪಂ.ಗಳು ಬಾಕಿ ಉಳಿಸಿಕೊಂಡಿರುವ ವಿದ್ಯುತ್‌ ಬಾಕಿ ಕುರಿತು ಪ್ರತಿಯೊಂದು ಪಂಚಾಯಿತಿಯ ಬಾಕಿ ಪಟ್ಟಿಯೊಂದಿಗೆ ಪಾವತಿಸಲು ಆಯಾ ಗ್ರಾಪಂಗಳಿಗೆ ನೋಟಿಸ್‌ ನೀಡಲಾಗುತ್ತಿದೆ. ಬಾಕಿ ಪಾವತಿಸದ ಗ್ರಾ.ಪಂ.ಗಳ ಕುಡಿಯುವ ನೀರು ಮತ್ತು ಬೀದಿದೀಪಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಆಗ ಆಯಾ ಊರಿನ ಹಿರಿಯರು, ಶಾಸಕರು, ವಿಧಾನಪರಿಷತ್‌ ಸದಸ್ಯರಿಗೆ ಕರೆ ಮಾಡುವ ಸಂಪ್ರದಾಯವಿದ್ದು, ಆ ಜನಪ್ರತಿನಿಧಿಗಳು ಹೆಸ್ಕಾಂ ಅಧಿಕಾರಿಗಳ ಮೇಲೆ ತೀವ್ರ ಒತ್ತಡ ಹಾಕಿ ವಿದ್ಯುತ್‌ ಸಂಪರ್ಕ ಕೊಡಿಸುತ್ತಾರೆ. ಆದರೆ, ಹೆಸ್ಕಾಂಗೆ ಬರಬೇಕಾದ ವಿದ್ಯುತ್‌ ಬಾಕಿಯೇ ಬರುತ್ತಿಲ್ಲ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳೇ ನೀಡಿದ ನಿರ್ದೇಶನ ಹಾಗೂ ಆದೇಶದ ಪ್ರಕಾರ, ಈ ತಿಂಗಳ 16ರಿಂದ ಕಡ್ಡಾಯವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಕಡಿತಗೊಳಿಸಲು ಹೆಸ್ಕಾಂ ನಿರ್ಧರಿಸಿದೆ.

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.