ಹುನಗುಂದ: ಐಟಿಐ ಕಾಲೇಜಿನಲ್ಲಿ ಸೌಲಭ್ಯಗಳದ್ದೇ ಕೊರತೆ


Team Udayavani, Jan 10, 2024, 4:45 PM IST

ಹುನಗುಂದ: ಐಟಿಐ ಕಾಲೇಜಿನಲ್ಲಿ ಸೌಲಭ್ಯಗಳದ್ದೇ ಕೊರತೆ

ಉದಯವಾಣಿ ಸಮಾಚಾರ
ಹುನಗುಂದ: ತಾಲೂಕಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಪಟ್ಟಣದಲ್ಲಿ ಆರಂಭಿಸಿರುವ ಕೈಗಾರಿಕಾ ತರಬೇತಿ ಕೇಂದ್ರ ಇದ್ದೂ ಇಲ್ಲದಂತಾಗಿದೆ. ಹಳೆ ಟಿಸಿಎಚ್‌ ವಸತಿ ನಿಲಯದಲ್ಲಿ 2014ರಲ್ಲಿ ಸರ್ಕಾರಿ ಐಟಿಐ ಕಾಲೇಜು ಆರಂಭವಾಯಿತು. ಈ ಕಟ್ಟಡ ಶಿಥಿಲವಾಗಿದ್ದು, ವಿದ್ಯುತ್‌ ಸಂಪರ್ಕವೂ ಇರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಇಲ್ಲಿ ಕಲಿಕೆಗೆ ಹೆಚ್ಚಿಗೆ ಆಸಕ್ತಿ ತೋರಲಿಲ್ಲ.

ಸದ್ಯ ಪಟ್ಟಣದಿಂದ ನಾಲ್ಕು ಕಿಲೋ ಮೀಟರ್‌ ದೂರದ ರಾಷ್ಟ್ರೀಯ ಹೆದ್ದಾರಿ-50ರ ಹೊಂದಿಕೊಂಡ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಪ್ರಚಾರ ಮತ್ತು ವಿದ್ಯಾರ್ಥಿ ವರ್ಗಕ್ಕೆ ಸೂಕ್ತ ಮಾಹಿತಿ ಇರದೆ ಇರುವುದರಿಂದ ಕಡಿಮೆ ವಿದ್ಯಾರ್ಥಿಗಳು ಇಲ್ಲಿ
ಓದುತ್ತಿದ್ದಾರೆ. ಆದರೆ ಆಸಕ್ತ ವಿದ್ಯಾರ್ಥಿಗಳಿಗೆ ಅದರ ಮಾಹಿತಿ ಸಿಗುತ್ತಿಲ್ಲ. ಕಟ್ಟಡ ಶಿಥಿಲಾವಸ್ಥೆಗೊಂಡಿದೆ.

ವಿದ್ಯುತ್‌ ರಹಿತ ಜತೆಗೆ ಇತರೆ ಸೌಲಭ್ಯಗಳ ಕೊರತೆ, ಕಲಿಕಾ ಸಾಮಗ್ರಿಗಳ ಕೊರತೆಯಿಂದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಕಾಲೇಜಿನಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದೇ ಇರುವುದರಿಂದ ಯಾವುದೇ ಪ್ರಾಯೋಗಿಕ ತರಗತಿಗಳು ನಡೆಯುತ್ತಿಲ್ಲ.

ಪ್ರಸಕ್ತ ಈ ಕಾಲೇಜು 4 ಕಿ.ಮೀ ದೂರದಲ್ಲಿ ರಸ್ತೆಗೆ ಸೂಚನಾ ಫಲಕ ಕಾಣದಂತೆ ಖಾಸಗಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವರ್ಗ ಪ್ರವೇಶಕ್ಕೆ ಪತ್ರಿಕೆ ಸಾರ್ವಜನಿಕ ಕ್ಷೇತ್ರಕ್ಕೆ ಮಾಹಿತಿ ಇಲ್ಲದೇ ಇರುವುದರಿಂದ ಆಸಕ್ತ ವಿದ್ಯಾರ್ಥಿಗಳಿಗೆ ಅನ್ಯಾಯವಾದಂತಾಗುತ್ತದೆ.

ನಾನು ಕಳೆದ 6 ತಿಂಗಳಿಂದ ಈ ಕಾಲೇಜಿಗೆ ಪ್ರಭಾರಿ ಪ್ರಾಂಶುಪಾಲನಾಗಿ ಬಂದಿದ್ದೇನೆ. ಸಕಲ ಸೌಲಭ್ಯ ಹೊಂದಿದ ಬಾಡಿಗೆ ಕಟ್ಟಡದಲ್ಲಿ ಹೆಚ್ಚಿನ ಸ್ಥಳಾವಕಾಶದಲ್ಲಿ ಕಲಿಕಾ ಸಾಮಗ್ರಿ ಸಂಗ್ರಹಿಸಿ ಶೈಕ್ಷಣಿಕ ವರ್ಷದಲ್ಲಿ ಈ ಕಾಲೇಜು ಆರಂಭಿಸಿದೆ. ಕೇವಲ ಮೂರು ಕಾಯಂ, ಇಬ್ಬರು ಅತಿಥಿ ಉಪನ್ಯಾಸಕರು ಸೇರಿ ಒಟ್ಟು ಐವರು ಕಾರ್ಯ ನಿರ್ವಹಿಸುತ್ತಿದ್ದಾರೆ.

40 ಫಿಟ್ಟರ್‌, 40 ಇಲೆಕ್ಟ್ರಿಕಲ್‌ ಸೇರಿ 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಇಲೆಕ್ಟ್ರಿಕಲ್‌ ಹೆಚ್ಚಿನ ಬೇಡಿಕೆ ಇರುವುದರಿಂದ ಟ್ರೇಡ್‌ ಸಂಖ್ಯೆ ಹೆಚ್ಚಿಸಲು ಮೇಲಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ.
ಎಸ್‌.ಆರ್‌. ಮುಜಾವರ,
ಪ್ರಭಾರಿ ಪ್ರಾಚಾರ್ಯರು, ಸರ್ಕಾರಿ ಐಟಿಐ ಕಾಲೇಜು.

ಜನಪ್ರತಿನಿಧಿಗಳ ಆಸಕ್ತಿಯಿಂದ ಮಂಜೂರಾದ ಈ ಸಂಸ್ಥೆ ಸದ್ಬಳಕೆಯಾಗಬೇಕು. ವಿದ್ಯಾರ್ಥಿಗಳು ವೃತ್ತಿಪರ ವ್ಯಾಸಂಗ ಮಾಡಿ ಬದುಕು ರೂಪಿಸಿಕೊಳ್ಳುವಲ್ಲಿ ಕಾಲೇಜು ಸಿಬ್ಬಂದಿ ಆಸಕ್ತಿ ತೋರಬೇಕು.
ಸಂಗಮೇಶ ಬಾವಿಕಟ್ಟಿ,
ವಿಕಲಚೇತನ ಸಂಘದ ಮುಖಂಡ

*ವೀರೇಶ ಕುರ್ತಕೋಟಿ

ಟಾಪ್ ನ್ಯೂಸ್

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.