ಸಿಎಂ ಸ್ಪರ್ಧಿಸಿದರೆ ಗೆಲ್ಲಿಸ್ತೇನೆ


Team Udayavani, Apr 18, 2018, 6:20 AM IST

Dr.-Devaraj-Patil.jpg

ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನನಗೆ ಗಾಡ್‌ ಫಾದರ್‌. ಅವರ ಹೋರಾಟ, ಸಮಾಜ ಸೇವೆ, ರಾಜಕೀಯ ಮೂಲಕ ಜನರಿಗಾಗಿ ತೋರುವ ಕಾಳಜಿ ನೋಡಿಯೇ ನಾನೂ ರಾಜಕೀಯಕ್ಕೆ ಬಂದವನು. ನಾನು ನನ್ನ ರಾಜಕೀಯದಲ್ಲಿ ಗೌರವದಿಂದ ಕಾಣುವ ವ್ಯಕ್ತಿಗಳಲ್ಲಿ ಅವರು ಎತ್ತರದ ಸ್ಥಾನದಲ್ಲಿದ್ದಾರೆ ಎಂದು ಬಾದಾಮಿ ಕ್ಷೇತ್ರದ ಕಾಂಗ್ರೆಸ್‌ನ ಘೋಷಿತ ಅಭ್ಯರ್ಥಿ ಡಾ.ದೇವರಾಜ ಪಾಟೀಲ ಹೇಳಿದರು.

“ಉದಯವಾಣಿ’ ಜತೆ ಮಾತನಾಡಿದ ಅವರು, ಈ ಬಾರಿ ನನ್ನ ಟಿಕೆಟ್‌ ಬದಲಾವಣೆ ಆಗಲ್ಲ. ಬಿ ಫಾರಂ ತಡೆ ಹಿಡಿದಿರುವ ಕಾರಣ ನನಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದೇನೆ.

ನನ್ನ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ. 10 ವರ್ಷಗಳಿಂದ ಬಾದಾಮಿಯಲ್ಲೇ ವಾಸವಾಗಿದ್ದೇನೆ. ವೈದ್ಯಕೀಯ ವೃತ್ತಿ ಜತೆಗೆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ, ಕೈಲಾದಷ್ಟು ಬಡವರ ಸೇವೆ ಮಾಡುತ್ತಿದ್ದೇನೆ. ಕಪ್ಪು ಚುಕ್ಕೆ ಇಲ್ಲದ ನನಗೆ ಟಿಕೆಟ್‌ ತಪ್ಪಿಸಲು ಸಾಧ್ಯವಿಲ್ಲ ಎಂದರು.

ಸಿಎಂ ಬಂದರೆ ಸ್ವಾಗತ: 2013ರಲ್ಲಿ ನನಗೆ ಪಕ್ಷದ ಟಿಕೆಟ್‌ ಕೊಡಲಾಗಿತ್ತು. ಆದರೆ, ಎರಡು ಬಾರಿ ಸೋತಿದ್ದ ಬಿ.ಬಿ. ಚಿಮ್ಮನಕಟ್ಟಿ ಅವರು, ಇದು ನನ್ನ ಕೊನೆ ಚುನಾವಣೆ. ಈ ಬಾರಿ ನನಗೆ ಕೊಡಿ ಎಂದು ಪಟ್ಟು ಹಿಡಿದಿದ್ದರು. ಆಗ ಪರಮೇಶ್ವರ ಮತ್ತು ಸಿದ್ದರಾಮಯ್ಯ ಅವರು ಇದೊಂದು ಬಾರಿ ಚಿಮ್ಮನಕಟ್ಟಿಗೆ ಕೊಡೋಣ ಎಂದು ಮನವೊಲಿಸಿದ್ದರು. ನನ್ನ ನಾಯಕರು ಮತ್ತು ಪಕ್ಷದ ಹಿರಿಯರ ಮಾತಿಗೆ ಗೌರವ ನೀಡಿ ಟಿಕೆಟ್‌ ಬಿಟ್ಟುಕೊಟ್ಟಿದ್ದೆ. ಬಳಿಕ ಚಿಮ್ಮನಕಟ್ಟಿ ಅವರ ಗೆಲುವಿಗೆ ನಾನೂ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೆ. ಈ ಬಾರಿ ನಾನು
ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಟಿಕೆಟ್‌ ಬದಲಾವಣೆ ಸಾಧ್ಯವೇ ಇಲ್ಲ ಎಂಬ ವಿಶ್ವಾಸವಿದೆ. ಕೊನೆ ಗಳಿಗೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸಿಎಂ ಸ್ಪರ್ಧೆಗೆ ನಿರ್ಧರಿಸಿದರೂ ನಾನು ಅವರನ್ನು ಸ್ವಾಗತಿಸುತ್ತೇನೆ. ಅವರು ನಾಮಪತ್ರ ಸಲ್ಲಿಸಿದರೆ ಸಾಕು ಕ್ಷೇತ್ರದಲ್ಲಿ ಓಡಾಡಿ ನಾವು ಗೆಲ್ಲಿಸುತ್ತೇವೆ ಎಂದರು.

ಚಿಮ್ಮನಕಟ್ಟಿ ನಮ್ಮ ಹಿರಿಯರು: ಹಾಲಿ ಶಾಸಕ ಚಿಮ್ಮನಕಟ್ಟಿ ಅವರು ಪಕ್ಷದ ಹಾಗೂ ನಮ್ಮ ಹಿರಿಯ ನಾಯಕರು. 40 ವರ್ಷದಿಂದ ಕಾಂಗ್ರೆಸ್‌ನಲ್ಲಿದ್ದು, ನಮಗೆಲ್ಲ ಮಾದರಿಯಾಗಿದ್ದಾರೆ. ನನಗೆ ಟಿಕೆಟ್‌ ಸಿಕ್ಕ ಹಿನ್ನೆಲೆಯಲ್ಲಿ ಅವರಿಗೆ ಸ್ವಲ್ಪ ಅಸಮಾಧಾನ ಆಗಿರಬಹುದು. ಆದರೆ, ನಾನು ಅವರ ಬಳಿಗೆ ಹೋಗಿ ಕಾಲು ಹಿಡಿದು, ನಾನೂ ನಿಮ್ಮ ಮಗನಂತೆ. ನನಗೆ ಆಶೀರ್ವಾದ ಮಾಡಿ ಎಂದು ಕೇಳುತ್ತೇನೆ. ಅವರು ಎಷ್ಟು ಕಠೊರವೋ, ಅಷ್ಟೇ ಮೃದು ಸ್ವಭಾವದವರು. ತಮಗೆ ಬೆಂಬಲ ಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಸ್ಪತ್ರೆ ಉದ್ಘಾಟಿಸಿ ರಾಜಕೀಯಕ್ಕೆ ಬಾ ಎಂದಿದ್ದ ಸಿಎಂ
ಡಾ.ದೇವರಾಜ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅತ್ಯಂತ ಆಪ್ತ.ಅಲ್ಲದೇ ಬಾಗಲಕೋಟೆಯ ಎಚ್‌.ವೈ. ಮೇಟಿ ಕೂಡ ಇವರ ಸಂಬಂಧಿ. ಸಿಎಂ ಮತ್ತು ಡಾ.ದೇವರಾಜಒಂದೇಸಮಾಜದವರಾಗಿದ್ದು, ಸುಮಾರು 20 ವರ್ಷಗಳಿಂದ ಸಿಎಂ ಶಿಷ್ಯರ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. 10 ವರ್ಷಗಳ ಹಿಂದೆ ಬಾಗಲಕೋಟೆಯಲ್ಲಿ ಡಾ.ದೇವರಾಜ ಪಾಟೀಲ, ಖಾಸಗಿ ಆಸ್ಪತ್ರೆಯನ್ನು ಸಿದ್ದರಾಮಯ್ಯ ಅವರೇ ಉದ್ಘಾಟಿಸಿದ್ದರು. ಆಗಲೇ ಡಾ.ದೇವರಾಜ ನಿನಗೂ ರಾಜಕೀಯದಲ್ಲಿ ಭವಿಷ್ಯ ಇದೆ. ಸಕ್ರಿಯನಾಗು ಎಂದು ಹೇಳಿದ್ದರು.

ನನ್ನ ತಂದೆ-ತಾಯಿ ಊರು ನಿಂಬಲಗುಂದಿ (ಹುನಗುಂದ ತಾಲೂಕು, ಮೊದಲು ಗುಳೇದಗುಡ್ಡ ಕ್ಷೇತ್ರದಲ್ಲಿತ್ತು). ಆದರೆ, ನಾನು ಹುಟ್ಟಿದ್ದು ಬಾದಾಮಿ ತಾಲೂಕು ಪಟ್ಟದಕಲ್ಲಿನಲ್ಲಿ. ಪಟ್ಟದಕಲ್ಲಿನ ಗುಡೂರ ಮನೆತನದಲ್ಲೇ ನಾನು ಬೆಳೆದವನು. ಗುಳೇದಗುಡ್ಡ, ಬಾಗಲಕೋಟೆಯಲ್ಲಿ ಆಸ್ಪತ್ರೆ ಇವೆ. ಬಾದಾಮಿಯಲ್ಲಿ ಸಹಕಾರಿ ಸಂಘ ಇದೆ. ಇಲ್ಲಿಯೇ ಹಲವು ವರ್ಷ ವೈದ್ಯಕೀಯ ವೃತ್ತಿ ಮಾಡಿದ್ದೇನೆ. ಹೀಗಾಗಿ ನಾನು ಹೇಗೆ ಹೊರಗಿನವನಾಗುತ್ತೇನೆ?
–  ಡಾ.ದೇವರಾಜ ಪಾಟೀಲ, ಬಾದಾಮಿ
ಕ್ಷೇತ್ರದ ಘೋಷಿತ ಕಾಂಗ್ರೆಸ್‌ ಅಭ್ಯರ್ಥಿ

ಸಂದರ್ಶನ – ಶಶಿಧರ ವಸ್ತ್ರದ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.