ಕಾಳಿ ನದಿ ಜೋಡಣೆ; ಪರಿಸರಕ್ಕೆ ಇಲ್ಲ ಹಾನಿ

•ಕುಡಿಯುವ ನೀರಿಗಾಗಿ ಅಪಸ್ವರ ಬೇಡ•ಸಮುದ್ರ ಸೇರುವ ಶೇ.10 ನೀರು ಮಾತ್ರ ಕೇಳುತ್ತಿದ್ದೇವೆ

Team Udayavani, May 6, 2019, 2:49 PM IST

bagalkote-tdy-1..

ಬಾಗಲಕೋಟೆ: ಸಂಗಮೇಶ ನಿರಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಾಗಲಕೋಟೆ: ಉತ್ತರ ಕನ್ನಡ ಕರಾವಳಿ ಪ್ರದೇಶದ ಕಾಳಿ ನದಿಯನ್ನು ಬಯಲು ಸೀಮೆಯ ಘಟಪ್ರಭಾ, ಮಲಪ್ರಭಾ ನದಿಗೆ ಜೋಡಿಸುವುದರಿಂದ ಆ ಭಾಗದ ಪರಿಸರ ಅಥವಾ ವನ್ಯ ಜೀವಿಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಈ ಕುರಿತು ಸಮಗ್ರ ಅಧ್ಯಯನ ನಡೆಸಿಯೇ ಯೋಜನಾ ವರದಿ ಸಿದ್ಧಪಡಿಸಲಾಗಿದೆ ಎಂದು ಅಮತಧಾರೆ ಕಾಳಿ-ಘಟಪ್ರಭಾ-ಮಲಪ್ರಭಾ ನದಿ ಜೋಡಣೆಯ ನಿರಾಣಿ ಸಮಗ್ರ ನೀರಾವರಿ ವರದಿಯ ರೂವಾರಿ ಸಂಗಮೇಶ ನಿರಾಣಿ ಹೇಳಿದರು.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆ ಹಾಗೂ ಪರಿಸರದ ಮೇಲೆ ಪರಿಣಾಮವಾಗುವುದಿಲ್ಲ. ನಾವು ಬಯಲು ಸೀಮೆಯವರಾದರೂ ಪರಿಸರ, ವನ್ಯಜೀವಿಗಳು ಹಾಗೂ ಅರಣ್ಯದ ಬಗ್ಗೆ ಅಪಾರ ಕಾಳಜಿ ಇದೆ. ಕಾಡು ಬೆಳಿಸಿದಾಗ ಮಾತ್ರ ನಾಡು ಉಳಿಯುತ್ತದೆ ಎಂಬ ಪರಿಸರ ಕಾಳಜಿ ನಮ್ಮಲ್ಲೂ ಇದೆ. ಉತ್ತರ ಕನ್ನಡ ಜಿಲ್ಲೆಗೆ ಹಾಗೂ ನಮ್ಮ ನಾಡಿನ ಅರಣ್ಯಕ್ಕೆ ಕಾಳಿ ನದಿಯಿಂದ ಇರುವ ಮಹತ್ವತೆಯನ್ನು ಅರಿತು ಅರಣ್ಯ ಹಾಗೂ ಪರಿಸರದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾಗದಂತೆ ಸೌಹಾರ್ದತೆಯೊಂದಿಗೆ ದಟ್ಟವಾದ ಅರಣ್ಯಕ್ಕೆ ಹಾನಿ ಮಾಡದೇ, ರಸ್ತೆಯ ಇಕ್ಕೆಲಗಳಲ್ಲಿ ಪೈಪಲೈನ ಮೂಲಕ ನೀರನ್ನು ಘಟಪ್ರಭಾ-ಮಲಪ್ರಭಾ ನದಿಗಳಿಗೆ ಹರಿಸಬಹುದು ಎಂದು ತಿಳಿಸಿದರು.

2009ರ ಅರಣ್ಯ ಕಾಯ್ದೆ ತಿದ್ದುಪಡಿಯನ್ವಯ ಕುಡಿಯುವ ನೀರು ಹಾಗೂ ಕೆರೆ ತುಂಬಲು ಯೋಜನೆ ಅನುಷ್ಠಾನಗೊಳಿಸುವಾಗ ಅರಣ್ಯ ಕಾಯ್ದೆ. ವನ್ಯಜೀವಿ ಕಾಯ್ದೆ, ಜೀವವೈವಿಧ್ಯ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ. ಈ ಕಾಯ್ದೆಯ ಅಡಿಯಲ್ಲಿ ಹೆಚ್ಚಿನ ವಿಚಾರಣೆ ಮಾಡದೇ ಅನುಮತಿ ನೀಡಬೇಕು ಎಂದು ತೀರ್ಪು ಹೇಳಿದೆ. ಹೀಗಾಗಿ ಈ ಯೋಜನೆಗೆ ಉತ್ತರ ಕನ್ನಡದ ಪರಿಸರವಾದಿಗಳು ಅಪಸ್ವರ ಎತ್ತಬಾರದು. ಈ ಕುರಿತು ಅವರೊಂದಿಗೆ ಚರ್ಚಿಸಲಾಗುವುದು ಎಂದರು.

ಜಲ ವಿದ್ಯುತ್‌ಗೂ ತೊಂದರೆ ಇಲ್ಲ: ಕಾಳಿನದಿಯ ಅಥವಾ ಸೂಪಾ ಜಲಾಶಯದ ಸಂಪೂರ್ಣ ನೀರನ್ನು ಘಟಪ್ರಭಾ-ಮಲಪ್ರಭಾ ನದಿಗೆ ಸೇರಿಸಿ ಕಾಳಿನದಿ ಪಾತ್ರವನ್ನು ಬರಿದಾಗಿಸುವ ದುರುದ್ದೇಶ ನಮ್ಮಲ್ಲಿ ಇಲ್ಲ. ಕಾಳಿ ನದಿಯು ವರ್ಷದ 12 ತಿಂಗಳು ಸಮೃದ್ದವಾಗಿ ಹರಿಯುವುದರಿಂದ ಸೂಪಾ ಜಲಾಶಯದಲ್ಲಿ ವಿದ್ಯುತ್‌ ಉತ್ಪಾದನೆಯಾದ ನಂತರ ಬಿಡುಗಡೆಯಾಗುವ ನೀರಿನಲ್ಲಿಯ ಸ್ವಲ್ಪ ಪ್ರಮಾಣದ ನೀರನ್ನು ಅಂದರೆ ವಾರ್ಷಿಕ 10 ರಿಂದ 20 ಟಿಎಂಸಿ ನೀರನ್ನು ಮಾತ್ರ ಏತ ನೀರಾವರಿ ಯೋಜನೆಯ ಮೂಲಕ ಘಟಪ್ರಭಾ, ಮಲಪ್ರಭಾ ನದಿಗಳಿಗೆ ಕೇಳುತ್ತಿದ್ದೇವೆ. ಹೀಗಾಗಿ ಚಾಲ್ತಿಯಲ್ಲಿರುವ ಜಲ ವಿದ್ಯುತ್‌ ಯೋಜನೆಗಳು ಸ್ಥಗಿತಗೊಳ್ಳುವ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕುಡಿಯುವ ಉದ್ದೇಶಕ್ಕೆ ಮಾತ್ರ: ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಧಾರವಾಡ ಗದಗ ಜಿಲ್ಲೆಗಳ ಜನರ ಕುಡಿಯುವ ನೀರಿನ ಬವಣೆ ತಪ್ಪಿಸಲು ಮತ್ತು ಕೆರೆ ತುಂಬುವ ಮೂಲಕ ಸಾಂಪ್ರದಾಯಕ ನೀರಿನ ಮೂಲಗಳ ಅಭಿವೃದ್ಧಿ ಹಾಗೂ ಪುನಶ್ಚೇತನದ ಉದ್ದೇಶಕ್ಕಾಗಿ ಮಾನವಿಯತೆಯ ದೃಷ್ಟಿಯಿಂದ ನೀರು ಕೇಳುತ್ತಿದ್ದೇವೆ. ವಾಣಿಜ್ಯೀಕರಣ, ವಿದ್ಯುತ್‌ ಉತ್ಪಾದನೆಯಂತಹ ಯೋಜನೆಗಳಿಗಿಂತ ಕುಡಿಯುವ ನೀರು, ಜನರ ನಿತ್ಯದ ಬಳಕೆಗಾಗಿ, ಮೂಲಭೂತ ಸೌಕರ್ಯ ಮತ್ತು ಕೆರೆ ತುಂಬುವ ಯೋಜನೆಗಳಿಗೆ ನದಿ ನೀರಿನ ಬಳಕೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಸುಪ್ರಿಂಕೋರ್ಟ್‌ ನಿರ್ದೇಶನವಿದೆ. ಹೀಗಾಗಿ ನಾವು ನೀರು ಕೇಳುತ್ತಿರುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು.

ಜಗತ್ತಿನ ಒಂದು ಹೊತ್ತಿನ ಊಟಕ್ಕೆ ಬೇಕಾಗುವ ಎಲ್ಲ ಆಹಾರ ಪದಾರ್ಥಗಳನ್ನು ಬೆಳೆಯುವ ಶಕ್ತಿ ಇರುವುದು ಕೇವಲ ಬಯಲು ಸೀಮೆಯ ರೈತರಿಗೆ ಮಾತ್ರ. ಅವನು ಬೆಳೆಯುವ ಅಕ್ಕಿ, ಗೋದಿ, ಜೋಳ, ರಾಗಿಯನ್ನೇ ಇಡೀ ಜಗತ್ತು ನಿತ್ಯ ಸ್ಮರಿಸಿ ಊಟ ಮಾಡುತ್ತದೆ. ಅಂತಹ ರೈತನ ಬಗ್ಗೆ ಅಸಡ್ಡೆಯ ಮಾತುಗಳು ಬೇಡ. ಕಾಳಿ ನದಿ ಸಮೃದ್ಧವಾಗಿ ಹರಿಯುವ ನದಿಯಾಗಿದ್ದು, ಈ ನದಿ ಹರಿವಿನಲ್ಲಿಯ ಶೇ.5 ಅಥವಾ ಶೇ. 10ರಷ್ಟು ಪ್ರಮಾಣದ ಅಂದರೆ 10ರಿಂದ 20ಟಿಎಂಸಿ ನೀರನ್ನು ಮಾತ್ರ ನಾವು ಕೇಳುತ್ತಿದ್ದು, ಇದರಿಂದ ಕಾಳಿನದಿ ಹಾಗೂ ಅದರ ಜಲಾಶಯಗಳ ಒಳ ಹಾಗೂ ಹೊರ ಹರಿವಿನಲ್ಲಿ ಭಾರಿ ವ್ಯತ್ಯಾಸವಾಗುವುದಿಲ್ಲ. ಈ ಭಾಗದ ಅರಣ್ಯ, ವನ್ಯಜೀವಿ, ರಕ್ಷಿತ ಅಭಯಾರಣ್ಯ, ಜೀವ ವೈವಿಧ್ಯದ ಮೂಲಸೌಕರ್ಯಕ್ಕೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದರು.

ಕಾಳಿ ನದಿ ತಿರುವು ಯೋಜನೆಯಿಂದ ಸಮುದ್ರದಲ್ಲಿ ನಿರ್ದಿಷ್ಟ ಪ್ರಮಾಣದ ಸಿಹಿನೀರು ಸಮುದ್ರಕ್ಕೆ ಸೇರದೇ ಲವಣಾಂಶ ಪ್ರಮಾಣದಲ್ಲಿ ವ್ಯತ್ಯಾಸ ಅಥವಾ ಜಲಚರಗಳಿಗೆ ಹಾನಿಯಾಗುವುದಿಲ್ಲ. ಬಯಲು ಸೀಮೆಯ ಕುಡಿಯುವ ನೀರು ಹಾಗೂ ಕೆರೆ ತುಂಬಲು ಪಡೆಯುವ 10-20 ಟಿಎಂಸಿ ನೀರಿನಿಂದಾಗಿ ಕಾಳಿ ನದಿ ಬರಿದಾಗುವುದಿಲ್ಲ ಮತ್ತು ಸಮುದ್ರಕ್ಕೆ ಸೇರುವ ದೊಡ್ಡ ಪ್ರಮಾಣದ ನೀರಿನಲ್ಲಿ ವ್ಯತ್ಯಾಸವಾಗುವುದಿಲ್ಲ. ಪಶ್ಚಿಮ ಘಟ್ಟಗಳಲ್ಲಿ ಕರ್ನಾಟಕದಲ್ಲಿ ಪ್ರತಿವರ್ಷ ಬೀಳುವ ಮಳೆಯಿಂದಾಗಿ ವಾರ್ಷಿಕ 3600 ಟಿಎಂಸಿ ನೀರು ಲಭಿಸುತ್ತದೆ. ಅದರಲ್ಲಿ 1600 ಟಿಎಂಸಿಯಷ್ಟು ನೀರನ್ನು ಮಾತ್ರ ಕೃಷಿ, ಕುಡಿಯುವ ನೀರು, ಕೈಗಾರಿಕೆ, ನೀರಾವರಿ ಯೋಜನೆಗಳಿಗೆ ಬಳಸಿ 2000 ಟಿಎಂಸಿ ನೀರು ಸಮುದ್ರ ಸೇರುತ್ತದೆ ಎಂದು ವರದಿಯ ಪ್ರಮುಖ ಅಂಶಗಳನ್ನು ಪ್ರಸ್ತುತಪಡಿಸಿದರು.

ಅಲ್ಲದೇ ಕೃಷ್ಣಾ, ನರ್ಮದಾ, ಕಾವೇರಿ ಸೇರಿದಂತೆ ದೇಶದ ದೊಡ್ಡ ನದಿಗಳಿಗೆ ಬೃಹತ್‌ ಯೋಜನೆ ರೂಪಿಸಿ ಅಣೆಕಟ್ಟಿನಲ್ಲಿ ನೀರನ್ನು ಸಂಗ್ರಹಿಸಿದ್ದಾರೆ. ಕೇವಲ ಕಾಳಿ ನದಿ ನೀರಿನಿಂದ ಮಾತ್ರ ಸಮುದ್ರದ ಲವಣಾಂಶ ಪ್ರಮಾಣದಲ್ಲಿ ವ್ಯತ್ಯಾಸವಾಗುವುದಿಲ್ಲ. ಸಮುದ್ರದ ಉಪ್ಪಿನಾಂಶ ನಿರ್ವಹಣೆಗೆ ತನ್ನದೆಯಾದ ಮಾನದಂಡಗಳಿವೆ. ಅಲ್ಲದೇ ಸಾಗರವು ಸದಾ ತನ್ನ ಸಮತೋಲನ ಕಾಯ್ದುಕೊಳ್ಳುತ್ತಿರುತ್ತದೆ ಎಂದು ತಿಳಿಸಿದರು. ಪ್ರಗತಿಪರ ರೈತ ಮುಖಂಡ ಈಶ್ವರ ಕತ್ತಿ, ಪ್ರಮುಖರಾದ ಲಕ್ಷ್ಮಣ ದೊಡಮನಿ, ನಾಗೇಶ ಗೋಲಶೆಟ್ಟಿ, ಹಿಪ್ಪರಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.