ಕೆರೂರ: ಹೆದ್ದಾರಿ ಮೇಲೂ ಬಿಡಾಡಿ ದನಗಳ ಹಾವಳಿ

ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದೆ.

Team Udayavani, Aug 26, 2024, 5:46 PM IST

ಕೆರೂರ: ಹೆದ್ದಾರಿ ಮೇಲೂ ಬಿಡಾಡಿ ದನಗಳ ಹಾವಳಿ

ಉದಯವಾಣಿ ಸಮಾಚಾರ
ಕೆರೂರ: ರಾಷ್ಟ್ರೀಯ ಹೆದ್ದಾರಿ ಮೇಲೆ ಬಿಡಾಡಿ ದನಗಳು ಗುಂಪು ಹಾವಳಿ ಹೆಚ್ಚಾಗಿದ್ದು ರಸ್ತೆ ಸಂಚಾರಕ್ಕೆ ಅಡೆತಡೆ ಉಂಟಾಗಿ ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ. ನಗರದ ಹಿರೇಮಠ ಹೈಸ್ಕೂಲ್‌ ಮುಂಭಾಗ ಸರ್ಕಾರ ಆಸ್ಪತ್ರೆ ಹತ್ತಿರ, ಪೊಲೀಸ್‌ ಠಾಣೆ ಬಳಿ ಹೆದ್ದಾರಿ ರಸ್ತೆ ಮೇಲೆ ಮತ್ತಿತರೆ ಕಡೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಳವಾಗಿದೆ.

ರಾಸುಗಳು ಎಲ್ಲೆಂದರಲ್ಲಿ ರಸ್ತೆಗೆ ಅಡ್ಡಲಾಗಿ ನಿಂತು ಬಿಡುತ್ತಿದ್ದು, ವಾಹನಗಳ ಸವಾರರು ಹಾರ್ನ್ ಮಾಡಿದರೂ ಅವು ಜಗ್ಗಲ್ಲ. ಇದರಿಂದ ಸವಾರರು ಮುಂದೆ ಸಾಗಲು ತೊಂದರೆ ಅನುಭವಿಸುವಂತಾಗಿದೆ.

ಪಟ್ಟಣದಲ್ಲಿ ಹಾದು ಹೋಗಿರುವ ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ-218 ಸದಾ ವಾಹನ ದಟ್ಟಣೆಯಿಂದ ಕೂಡಿದೆ. ಇಲ್ಲಿ ನಿತ್ಯ ಸರ್ಕಾರಿ ಬಸ್‌ ಗಳು ಭಾರಿ ಖಾಸಗಿ ವಾಹನಗಳು ಸೇರಿದಂತೆ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹೆದ್ದಾರಿಯಾದ್ದರಿಂದ ವಾಹನಗಳು ತುಸು ವೇಗವಾಗಿಯೇ ಚಲಿಸುತ್ತಿರುತ್ತವೆ. ಹೆದ್ದಾರಿಯಲ್ಲಿ ಹಗಲು-ರಾತ್ರಿ ಬಿಡಾಡಿ ದನಗಳು ಹಿಂಡು ಹಿಂಡಾಗಿ ಠಿಕಾಣಿ ಹೂಡುತ್ತಿವೆ. ಸವಾರರು ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಸಂಭವಿಸುವುದು ನಿಶ್ಚಿತ.

ವಾರ ಸಂತೆಯಲ್ಲೂ ಹಾವಳಿ:
ಹೊಸಪೇಟೆಯ ಪತ್ತಾರ್‌ ಕಟ್ಟಿ ಬಳಿ ಪ್ರತಿ ಮಂಗಳವಾರ ನಡೆವ ವಾರದ ಕಾಯಿಪಲ್ಲೆ ಸಂತೆಯಲ್ಲಿ ಜಾನುವಾರು ಓಡಾಡಿ
ವ್ಯಾಪಾರಸ್ಥರ ಅಕ್ಕಡಿ ಕಾಳು, ತರಕಾರಿಗಳಿಗೆ ಬಾಯಿ ಹಾಕುತ್ತ ಮುಂದೆ ಬಂದವರನ್ನು ಕೊಂಬಿನಿಂದ ತಿವಿಯುತ್ತವೆ. ಬನಶಂಕರಿ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಸಂತೆಯಲ್ಲೂ ಇದೇ ಗೋಳು. ಬಿಡಾಡಿ ಜಾನುವಾರುಗಳಿಂದ ಮುಕ್ತಿ ನೀಡುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ದನ ಗೋಶಾಲೆಗೆ ಬಿಡುವುದು ಸೂಕ್ತ ಕ್ರಮ:
ಬಿಡಾಡಿ ದನಗಳ ಹಾವಳಿ ಹೆಚ್ಚಿರುವುದು ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ಬಂದ ಬಳಿಕ ಸಾಕಷ್ಟು ಬಾರಿ ಜಾನುವಾರು ಮಾಲೀಕರಿಗೆ ಹೊರಗಡೆ ಬಿಡದಂತೆ ಸೂಚಿಸಲಾಗಿದೆ. ಆದರೂ ದನಗಳ ಮಾಲೀಕರು ಅವುಗಳನ್ನು ಮನೆಯಲ್ಲಿ ಸುರಕ್ಷಿತವಾಗಿ ಕಟ್ಟದೆ. ಬೇಜವಾಬ್ದಾರಿಯಿಂದ ರಸ್ತೆಗೆ ಬಿಡುತ್ತಿರುವುದು ಸರಿಯಲ್ಲ. ಹಾಗೆ ಹೊರಗಡೆ ಬಿಡುವ ದನಗಳ ಮಾಲೀಕರಿಗೆ ದಂಡ ಹಾಕುವುದು ಅಥವಾ ಅಂತಹ ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸುವ ಕ್ರಮ ಸೂಕ್ತ, ಸಂಬಂಧಿಸಿದ ಅಧಿಕಾರಿಗಳು ಅಂತಹ ಕ್ರಮ ಕೈಗೊಂಡಿದ್ದೇ ಆದಲ್ಲಿ ಬಿಡಾಡಿ ದನಗಳ ಹಾವಳಿ ತಡೆಗಟ್ಟಲು ಸಾಧ್ಯ.

ರಾಷ್ಟ್ರೀಯ ಹೆದ್ದಾರಿ ಮೇಲೆ ದನಗಳು ನಿಲ್ಲುತ್ತಿದು, ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದೆ. ರಾತ್ರಿ ವೇಳೆ
ಅವುಗಳಿಂದ ಅಪಘಾತಗಳು ಸಂಭವಿಸಬಹುದು. ಹೆದ್ದಾರಿ ಮೇಲೆ ಮತ್ತು ಸಂತೆಗಳಲ್ಲಿ ದನಗಳ ಹಾವಳಿ ತಪ್ಪಿಸಬೇಕು.
●ರಾಚೋಟೇಶ್ವರ ಕುದುರಿ, ಸಾಮಾಜಿಕ ಕಾರ್ಯಕರ್ತ

ಕೆರೂರ ಪಟ್ಟಣ ಪಂಚಾಯಿತಿಗೆ ವರ್ಗಾವಣೆಗೊಂಡು ಇದೀಗ ಬಂದಿದ್ದೇನೆ. ಈ ಕುರಿತು ಸಮಗ್ರ ಮಾಹಿತಿ ಪಡೆದು ಬಿಡಾಡಿ ದನಗಳ ಹಾವಳಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.
●ರಮೇಶ ಮಾಡಬಾಳ, ಪಪಂ ಮುಖ್ಯಾಧಿಕಾರಿ

ಶ್ರೀಧರ ಚಂದರಗಿ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.