Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ

1973ರಲ್ಲಿ ಠಾಣೆ ನಿರ್ಮಾಣಕ್ಕೆ ಆಗ್ರಹ; ಸ್ಪಂದಿಸದ ಇಲಾಖೆ, ಸರ್ಕಾರ

Team Udayavani, Jun 1, 2023, 8:06 PM IST

1-sdsadsad

ರಬಕವಿ-ಬನಹಟ್ಟಿ: ರಬಕವಿ-ಬನಹಟ್ಟಿ ಅವಳಿ ನಗರಗಳು ಒಂದೇ ನಗರಸಭೆಯ ವ್ಯಾಪ್ತಿಯಲ್ಲಿ ಬರುತ್ತವೆ. ಅದೇ ರೀತಿಯಾಗಿ ಸರ್ಕಾರ ಕೂಡಾ ರಬಕವಿ-ಬನಹಟ್ಟಿ ನಗರಗಳನ್ನು ಒಂದೇ ಎಂದು ಪರಿಗಣಿಸಿ ತಾಲ್ಲೂಕು ಎಂದು ಘೋಷಣೆ ಮಾಡಿವೆ. ತೇರದಾಳ ಕೂಡಾ ಪ್ರತ್ಯೇಕ ತಾಲ್ಲೂಕು ಆಗಿ ಘೋಷಣೆಯಾಗಿದೆ. ಆದರೆ ರಬಕವಿಯ ಜನರು ಪೊಲೀಸ್ ಠಾಣೆಯ ಕಾರ್ಯಗಳಿಗೆ ಒಂದೇ ಕಿ.ಮೀ ದೂರದಲ್ಲಿರುವ ಬನಹಟ್ಟಿಯ ಠಾಣೆಗೆ ಬರದೆ, ೧೦ ಕಿ. ಮೀ. ತೇರದಾಳ ಪೊಲೀಸ್ ಠಾಣೆಗೆ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.

ನಾಲ್ಕುವರೆ ದಶಕಗಳ ಹಿಂದಿನ ಬೇಡಿಕೆಯನ್ನು ಈಡೇರಿಸುವಲ್ಲಿ ಸರ್ಕಾರ ಮತ್ತು ಇಲಾಖೆಗಳು ಗಮನ ನೀಡುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ರಬಕವಿಯ ಜನರಲ್ಲಿ ಪೊಲೀಸ್ ಠಾಣೆಯ ಸ್ಥಾಪನೆಗೆ ಹೋರಾಟದ ಕೊರತೆಯಾಗಿದೆ. ಈ ಭಾಗಕ್ಕೆ ಬರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ, ಸಚಿವರಿಗೆ ಮತ್ತು ಶಾಸಕರಿಗೆ ಮನವಿ ಪತ್ರಗಳನ್ನು ನೀಡುವ ಕಾರ್ಯ ನಡೆದಿದೆ. ಆದರೆ ಠಾಣೆಯ ಸ್ಥಾಪನೆಗೆ ನಿರಂತರದ ಹೋರಾಟ ನಡೆಯದೆ ಇರುವುದು ವಿಳಂಬಕ್ಕೆ ಕಾರಣವಾಗಿದೆ.

ರಬಕವಿ ಬನಹಟ್ಟಿಯ ಪೊಲೀಸ್ ಠಾಣೆಯ ಮಧ್ಯದಲ್ಲಿ ಕೇವಲ ಒಂದು ಕಿ.ಮೀ ಅಂತರವಿದೆ. ಆದರೆ ರಬಕವಿಯ ಜನರು ಏಳೆಂಟು ಕಿ.ಮೀ ದೂರದ ತೇರದಾಳ ಪಟ್ಟಣಕ್ಕೆ ಹೋಗುವ ಅನಿವಾರ್ಯತೆ ಉಂಟಾಗಿದೆ.

ರಬಕವಿಯಲ್ಲಿ ಠಾಣೆಯ ನಿರ್ಮಾಣಕ್ಕಾಗಿ ಇಲ್ಲಿನ ದುರಡಿ ಸಹೋದರರು ಹೊಸ ಬಸ್ ನಿಲ್ದಾಣದ ಮಾರ್ಗದಲ್ಲಿ ಒಂದು ಎಕರೆಗಿಂತ ಹೆಚ್ಚಿನ ಭೂಪ್ರದೇಶವನ್ನು ದಾನವಾಗಿ ನೀಡಿದ್ದಾರೆ. ಸದ್ಯ ಇಲ್ಲಿ ರಬಕವಿ ಔಟ್ ಪೋಸ್ಟ್ ಸ್ಥಳ ಎಂದು ನಾಮಫಲಕ ಮಾತ್ರವಿದೆ. ಈ ಪ್ರದೇಶ ಗಿಡಗಂಟಿಗಳಿಂದ ತುಂಬಿದೆ. ಇದು ನಗರದ ಮಧ್ಯ ಭಾಗದಲ್ಲಿದೆ.

ಇಲ್ಲಿಯ ಜನರು ಚಿಕ್ಕ ಪುಟ್ಟ ಕಾರ್ಯಗಳು, ಮೊಬೈಲ್ ಕಳವು, ಪಾಸ್ ಪೋರ್ಟ್ ಅರ್ಜಿ ಪರಿಶೀಲನೆ, ದಾಖಲೆಗಳ ಕಳುವಿನ ಕುರಿತು ದೂರು ಸೇರಿದಂತೆ ಪ್ರತಿಯೊಂದಕ್ಕೂ ತೇರದಾಳ ಪಟ್ಟಣಕ್ಕೆ ಹೋಗಬೇಕಾಗಿದೆ. ಇದರಿಂದಾಗಿ ಈ ಭಾಗದ ನೇಕಾರರಿಗೆ, ನದಿ ತೀರದ ರೈತರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ ಮತ್ತು ಮಹಿಳೆಯರಿಗೆ ಬಹಳಷ್ಟು ತೊಂದರೆಯಾಗಿದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟ ಸಿಬ್ಬಂದಿ ಇರದೆ ಇದ್ದರೆ ಮತ್ತೆ ಮರು ದಿವಸ ಹೋಗಬೇಕಾಗುತ್ತದೆ. ಇದು ಇಲ್ಲಿಯ ಜನರಿಗೆ ಆರ್ಥಿಕವಾಗಿ ಹೊರೆಯಾಗಿದೆ. ಇದರಿಂದಾಗಿ ಬಹುತೇಕ ಪ್ರಕರಣಗಳನ್ನು ದಾಖಲಿಸಲು ಇಲ್ಲಿಯ ಜನರು ತೇರದಾಳಕ್ಕೆ ಹೋಗುವುದೇ ಇಲ್ಲ. ರಬಕವಿ ನಗರದಲ್ಲಿ ಔಟ್ ಪೊಸ್ಟ್ ಠಾಣೆ ಇದ್ದರೂ ಯಾವುದೆ ಪ್ರಯೋಜನವಿಲ್ಲವಾಗಿದೆ ಎನ್ನುತ್ತಾರೆ ರಬಕವಿ-ಬನಹಟ್ಟಿ ನಗರಸಭೆ ಸದಸ್ಯ ಬಸವರಾಜ ಗುಡೋಡಗಿ

ರಬಕವಿಯ ಜನರು ಮನೆಯಂಗಳದಲ್ಲಿರುವ ಠಾಣೆಯ ಸೌಲಭ್ಯ ಪಡೆದುಕೊಳ್ಳದೆ ದೂರದ ತೇರದಾಳಕ್ಕೆ ಅಲೆಡಾಡುವಂತಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಗಮನ ಸೆಳೆಯುವುದು ಒಂದು ಕಡೆಯಾದರೆ, ಪ್ರತ್ಯೇಕವಾದ ಠಾಣೆಗಾಗಿ ನಿರಂತರ ಮತ್ತು ಗಟ್ಟಿ ಹೋರಾಟದ ಅವಶ್ಯಕತೆ ಇದೆ. ಹೋರಾಟದ ಕೊರತೆಯಿಂದಾಗಿ ಠಾಣೆ ಸ್ಥಾಪನೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸ್ಥಳೀಯ ಮುಖಂಡರು ಗಮನ ನೀಡಬೇಕಾಗಿದೆ.

ರಬಕವಿ ಬನಹಟ್ಟಿ ತಾಲ್ಲೂಕು ವ್ಯಾಪ್ತಿ ವಿಶಾಲವಾಗಿದೆ. ಆದ್ದರಿಂದ ರಬಕವಿಯಲ್ಲಿ ಗ್ರಾಮೀಣ ಪೊಲೀಸ್ ಠಾಣೆ ಸ್ಥಾಪನೆಗಾದರೂ ಕ್ರಮ ತೆಗೆದುಕೊಳ್ಳಬೇಕಾಗಿದೆ. ರಬಕವಿಯಲ್ಲಿ ಠಾಣೆ ನಿರ್ಮಾಣ ಮಾಡುವುದು ಸಾಧ್ಯವಾಗದೆ ಇದ್ದರೆ, ರಬಕವಿಯ ವ್ಯಾಪ್ತಿಯನ್ನು ಬನಹಟ್ಟಿ ಪೊಲೀಸ್ ಠಾಣೆಗೆ ಸೇರಿಸುವ ನಿಟ್ಟಿನಲ್ಲಿ ಗಮನ ನೀಡಬೇಕು. ರಬಕವಿಯಲ್ಲಿ ಠಾಣೆಯ ನಿರ್ಮಾಣದಿಂದ ಇಲ್ಲಿಯ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ. ತೇರದಾಳ ಠಾಣೆಯು ಬನಹಟ್ಟಿ ನ್ಯಾಯಾಲಯದ ವ್ಯಾಪ್ತಿಯಲ್ಲಿ ಬರುವುದರಿಂದ ವಕೀಲರಿಗೂ ಮತ್ತು ಕಕ್ಷಿದಾರರಿಗೂ ಅನುಕೂಲವಾಗಲಿದೆ.
-ವಿಜಯ ಹೂಗಾರ, ವಕೀಲರು ರಬಕವಿ

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.