![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 17, 2019, 3:27 PM IST
ಬನಹಟ್ಟಿ: ಪ್ರತಿಯೊಬ್ಬರು ಕಾನೂನು ಅರಿಯುವುದರ ಜತೆಗೆ ಪಾಲನೆಗೆ ಮುಂದಾಗಬೇಕು. ಇದರಲ್ಲ ಸಮಾಜದ ಶಾಂತಿ, ನೆಮ್ಮದಿ ಬದುಕು ಅಡಗಿದೆ ಎಂದು ಬನಹಟ್ಟಿ ಹಿರಿಯ ಶ್ರೇಣಿ ನ್ಯಾಯಾಲಯ ನ್ಯಾಯಾ ಧೀಶರಾದ ರೇಷ್ಮಾ ಗೋಣಿ ಹೇಳಿದರು.
ನಗರದ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಹಾಗೂ ಜನತಾ ನ್ಯಾಯಾಲಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರಲ್ಲಿಕಾನೂನು ಅರಿವಿನ ಕೊರತೆಯಿಂದಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಅನೇಕರು ಶಿಕ್ಷೆಗೆಗುರಿಯಾಗುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂಕಾನೂನು ಬಗ್ಗೆ ಅರಿವು ಅನಿವಾರ್ಯವಾಗಿದೆ. ಇಂದು ಅನೇಕ ವ್ಯಾಜ್ಯಗಳು ನ್ಯಾಯಾಲಯ ಮೆಟ್ಟಿಲೇರುತ್ತಿವೆ. ಜನರಲ್ಲಿ ಕಾನೂನು ಅರಿವಿನ ಕೊರತೆಯೇ ಇದಕ್ಕೆ ಮುಖ್ಯ ಕಾರಣವೆಂದರು. ಈಚೆಗೆ ಅತ್ಯಾಚಾರ, ಕೊಲೆಯಂತಹ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸಬೇಕು. ಕಾನೂನು ಯಾರೊಬ್ಬರ ಆಸ್ತಿಯಲ್ಲ. ಇದರ ಮುಂದೆ ಎಲ್ಲರೂ ಸಮಾನರು. ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ಸರ್ವರಿಗೂ ಸಮಬಾಳು, ಸರ್ವರಿಗೂಸಮನ್ಯಾಯವೆಂಬ ಘೋಷವಾಕ್ಯದೊಂದಿಗೆ ಗ್ರಾಮೀಣರಿಗೂ ಅರಿವು ಮೂಡಿಸುವ ಹಾಗೂ ನೊಂದವರಿಗೆ ಕಾನೂನು ಆಸರೆ ಇದೆ ಎಂಬ ಮಾಹಿತಿ ರವಾನಿಸುವ ಉದ್ದೇಶದಿಂದ ಕಾನೂನು ಅರಿವು ರಥ ಆಂದೋಲನ ನಡೆಯುತ್ತಿದೆ ಎಂದರು.
ತಹಶೀಲ್ದಾರ್ ಪ್ರಶಾಂತ ಚನಗೊಂಡ, ಗ್ರೇಡ್-2ತಹಶೀಲ್ದಾರ್ ಎಸ್.ಬಿ. ಕಾಂಬಳೆ, ಬಸವರಾಜ ತೆಲಸಂಗ, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪುಟಾಣಿ, ಎಂ.ಜಿ. ಕೆರೂರ, ರವೀಂದ್ರ ಸಂಪಗಾಂವಿ, ವೆಂಕಟೇಶ ನಿಂಗಸಾನಿ, ಎಸ್.ಎ. ಪಾಟೀಲ, ಜಿ.ಡಿ. ಪಾಟೀಲ, ಭೀಮು ಯಲ್ಲಟ್ಟಿ, ಮಹಾಂತೇಶ ಪದಮಗೊಂಡ, ಸುಜಾತಾ ನಿಡೋಣಿ, ಎಸ್.ಎಸ್. ಸಿದ್ದಾಪುರ, ತಾಳಿಕೋಟಿ ಸೇರಿದಂತೆ ಅನೇಕರಿದ್ದರು.
You seem to have an Ad Blocker on.
To continue reading, please turn it off or whitelist Udayavani.