ಬರಹಗಾರರು ಸಹನೆ-ತಾಳ್ಮೆ ಬೆಳೆಸಿಕೊಳ್ಳಲಿ: ಡಾ.ವಿಜಯಕುಮಾರ ಕಟಗಿ


Team Udayavani, Jun 10, 2024, 5:02 PM IST

ಬರಹಗಾರರು ಸಹನೆ-ತಾಳ್ಮೆ ಬೆಳೆಸಿಕೊಳ್ಳಲಿ: ಡಾ.ವಿಜಯಕುಮಾರ ಕಟಗಿ

ಉದಯವಾಣಿ ಸಮಾಚಾರ
ಬಾಗಲಕೋಟೆ: ಓದು ಮತ್ತು ಬರಹಗಳು ಮನುಷ್ಯನಲ್ಲಿ ಶ್ರದ್ಧೆ ಮತ್ತು ಜ್ಞಾನಸ್ತ ಮನೋಭಾವನೆಯನ್ನು ಬೆಳೆಸುತ್ತವೆ. ಹೊಸ
ತಲೆಮಾರಿನ ಬರಹಗಾರರು ಸಹನೆ, ಮತ್ತು ತಾಳ್ಮೆ ಯನ್ನು ಬೆಳೆಸಿಕೊಳ್ಳಬೇಕು. ಪ್ರತಿರೋಧಾತ್ಮಕ, ಪ್ರಚೋಧನಾತ್ಮಕ ಆರೋಗ್ಯಪರ ಚಿಂತನೆ ರೂಪಿಸಿಕೊಳ್ಳಬೇಕು ಎಂದು ಬಿವಿವಿ ಸಂಘದ ಆಡಳಿತಾ ಧಿಕಾರಿಗಳು ಹಾಗೂ ಹಿರಿಯ ಸಾಹಿತಿಗಳಾದ ಡಾ.ವಿಜಯಕುಮಾರ ಕಟಗಿ ಹಳ್ಳಿಮಠ ಹೇಳಿದರು.

ನಗರದ ಬಸವೇಶ್ವರ ಕಲಾ ಮಹಾ ವಿದ್ಯಾಲಯ, ಮೇಘಮೆೈತ್ರಿ ಕನ್ನಡ ಸಾಹಿತ್ಯ ಸಂಘ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಳ್ಳಲಾದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಆಧುನಿಕ ತಲೆಮಾರಿಗೆ ಹೊಸ ಚಿಂತನೆಗಳು ಬೇಕು. ಸಾಹಿತಿಯಾಗಲು ದೊಡ್ಡ ಕೃತಿಗಳನ್ನೇ ಬರೆಯಬೇಕಿಲ್ಲ ಸಮಾಜಕ್ಕೆ ಉಪ ಯುಕ್ತವಾಗುವ ಎರಡು ಸಾಲುಗಳನ್ನು ಬರೆದರೂ ಅವರು ಸಾಹಿತ್ಯದ ಪರಿಪಾಲಕರೆ. ಪ್ರಾಚಿನ ಕರ್ನಾಟಕ ಹೇಗಿತ್ತು ನಾವುಹೇಗಿದ್ದೇವೆ ಎಂದು ಮೌಲ್ಯಮಾಪನ ಮಾಡಿಕೊಳ್ಳಬೇಕಿದೆ ಎಂದರು.

ಬಾಗಲಕೋಟೆ ಪ್ರಾಚಿನ ಕಾಲದಿಂದಲೂ ವಿಧ್ವತ್ಮಯದಿಂದ ಕೂಡಿದ ಸ್ಥಳವಾಗಿದ್ದು, ಇಂದು 400ಕ್ಕೂ ಹೆಚ್ಚು ಲೇಖಕಕರನ್ನು ಪೋಷಿಸಿ ಬೆಳೆಸುತ್ತಿದೆ. ಓದುಗರನ್ನು ಸೆಳೆಯುವ ಸಾಹಿತ್ಯ ರೂಡಿಸಿಕೊಳ್ಳಬೇಕಿದೆ. ಓದುಗರನ್ನು ಸೃಷ್ಟಿಮಾಡಲು ಸಾಧ್ಯವಾಗದಿದ್ದಾಗ ಬರವಣಿಗೆಗೆ ಮಹತ್ವ ಇಲ್ಲ. ಹಳೆ ತಲೆಮಾರಿನ ಲೇಖಕರು ಮತ್ತು ಹೊಸ ತಲೆಮಾರಿನ ಸಾಹಿತಿಗಳನ್ನು
ಒಂದುಗೂಡಿಸಿ ಸಮ್ಮೇಳನಗಳನ್ನು ಮಾಡಬೇಕು. ಇದರಿಂದ ಯುವ ಜನಾಂಗಕ್ಕೆ ಸಾಹಿತ್ಯದ ಅರಿವು ಮೂಡಿಸಲು ಸಾಧ್ಯ. ಸಮಾಜದಲ್ಲಿ ಅರಾಜಕತೆ ತಲೆದೋರಿದ್ದು ಕಾಯಕದಲ್ಲಿ ಆಸಕ್ತಿ ಇಲ್ಲದ ಜನರನ್ನು ಬಡಿದೆಬ್ಬಿಸಲು ಇಂತಹ ಸಮ್ಮೇಳನ,
ಸಮಾವೇಶಗಳು ನಡೆಯುವುದು ಅವಶ್ಯಕವಾಗಿದೆ ಎಂದರು.

ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಬೈರಮಂಗಲ ರಾಮೇಗೌಡ ಉದ್ಘಾಟನಪರ ಮಾತುಗಳನ್ನಾಡಿ ಕನ್ನಡ ಸಾಹಿತ್ಯದಲ್ಲಿರುವ ಸಮಗ್ರತೆ ಬೇರೆ ಸಾಹಿತ್ಯದಲ್ಲಿಲ್ಲ. ಡಾ. ವಿಜಯಕುಮಾರ್‌ ಕಟಗಿಹಳ್ಳಿಮಠ ಅಪರೂಪದ ವ್ಯಕ್ತಿತ್ವ. ಅವರು ಸಾಹಿತಿಗಳಾಗಿ ಅಷೆrà ಅಲ್ಲದೇ ಒಬ್ಬ ನಿಷ್ಠಾವಂತ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸಾಧನೆ ಮಾಡಿದ್ದು ಕನ್ನಡ ಲೋಕಕ್ಕೆ ಅಪರೂಪದ ಕೊಡುಗೆಯಾಗಿದ್ದಾರೆ. ಬಸವೇಶ್ವರ ವಿದ್ಯಾವರ್ಧಕ ಸಂಘವು ಕೇವಲ ಉತ್ತರ ಕರ್ನಾಟಕಕ್ಕೆ ಸೀಮಿತವಾಗದೇ
ಕರ್ನಾಟಕದಾದ್ಯಂತ ಗುಣಮಟ್ಟದ ಶಿಕ್ಷಣ ಹಂಚುವ ಕೆಲಸ ಮಾಡಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಗಳಾದ ಡಾ| ಮಲ್ಲಿಕಾ ಘಂಟಿ ಮಾತನಾಡಿ, ಸಮಾಜದಲ್ಲಿ ಹೆಣ್ಣುಮಕ್ಕಳ ಪಾತ್ರ ದೊಡ್ಡದು. ಸಾಹಿತ್ಯಗಳನ್ನು ಗೌರವಿಸುವುದು ರಾಜಕೀಯದಲ್ಲಿ ಕಡಿಮೆಯಾಗುತ್ತಿರುವುದು ವಿಷಾದನಿಯ. ದೇಶದಲ್ಲಿ ಜಾತಿಯತೆ ತಲೆ ಎತ್ತಿ ನಿಂತಿದೆ. ಪ್ರಜಾಪ್ರಭುತ್ವದಲ್ಲಿ ಜಾತಿ ಸಂಘಟನೆಗಳು
ಹೆಚ್ಚುತ್ತಿದ್ದು ಪ್ರಭುದ್ಧತೆ ಕಡಿಮೆಯಾಗಿದೆ.

ಗಾಂಧೀಜಿಯವರ ಅಹಿಂಸೆಯ ತತ್ವದ ಮೂಲಕ ಭಾರತವನ್ನು ಮುನ್ನಡೆಸಬೇಕಿದೆ. ಯುವ ಬರಹಗಾರ ಸಂಖ್ಯೆ ಹೆಚ್ಚಾಗಿದ್ದು ಅವರು ಎಲ್ಲರ ಮನಸ್ಸು ತಟ್ಟಬೇಕಾಗಿದೆ. ಪುಸ್ತಕದ ಜೋತೆಗೆ ಸಾಹಿತ್ಯವನ್ನು ಓದುವ ಕೆಲಸ ಮಾಡಿ ಎಂದರು. ಕಾರ್ಯಕ್ರಮದಲ್ಲಿ ಕಮತಗಿಯ ಮೇಘಮೆೈತ್ರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಂ. ರಮೇಶ ಕಮತಗಿ ಪ್ರಾಸ್ತಾವಿಕವಾಗಿ
ಮಾತನಾಡಿದರು. ಕಮತಗಿಯ ಹೀರೆಮಠದ ಶ್ರಿ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಕನ್ನಡ ಸಾಹಿತ್ಯ ಪರಿಷತ್‌
ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ , ನಿವೃತ್ತ ಪ್ರಾಂಶುಪಾಲರಾದ ಚಂದ್ರಶೇಖರ ನಾದೂರು, ವಿಜಯ ಸಂಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಶಾಂತರಾಜು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ. ವಿ.ಎಸ್‌ ಕಟಗಿಹಳ್ಳಿ ಮಠ ಅವರ ಷವ್ಯಕ್ರಿಚಿತ್ರ ಸಂಪದಷ ಮತ್ತು ಡಾ| ಶಾಂತರಾಜು ಅವರ ಷಅಂತರ್ಶೋಧಷ ಕೃತಿ ಬಿಡುಗಡೆ ಮಾಡಲಾಯಿತು. ನಿವೃತ್ತ ಪ್ರಾಂಶುಪಾಲರಾದ ಪ್ರೊ. ಚಂದ್ರಶೇಖರ ನಾದೂರು
ಅಂತರ್ಶೋಧ ಕೃತಿ ಹಾಗೂ ಡಾ. ಶಾಂತರಾಜು ವ್ಯಕ್ತಿಚಿತ್ರ ಸಂಪದ ಕುರಿತು ವಿಮರ್ಶೆ ಮಾಡಿದರು. ಬಳಿಕ ವಿಚಾರಗೋಷ್ಠಿ ಮತ್ತು
ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾಯಿತು.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

14-mudhol-2

Mudhol: ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ‌ ಖಂಡನೆ; ಮನವಿ ಸಲ್ಲಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.