ಕೆಸಿಸಿ ಯೋಜನೆಯಡಿ ಸಾಲ ಅಭಿಯಾನ: ಮುರಗಿ

ದಾಖಲೆಗಳನ್ನು ಸಲ್ಲಿಸಿ ದುಡಿಮೆ ಬಂಡವಾಳಕ್ಕೆ ಆರ್ಥಿಕ ನೆರವು ಪಡೆಯಬಹುದಾಗಿದೆ.

Team Udayavani, Nov 16, 2021, 6:10 PM IST

ಕೆಸಿಸಿ ಯೋಜನೆಯಡಿ ಸಾಲ ಅಭಿಯಾನ: ಮುರಗಿ

ಬಾಗಲಕೋಟೆ: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಚಟುವಟಿಕೆಗಳಿಗಾಗಿ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಒದಗಿಸಲು ಜಿಲ್ಲೆಯಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ (ಕೆಸಿಸಿ) ಸಾಲ ಅಭಿಯಾನ ಕಾರ್ಯಕ್ರಮವನ್ನು ವಾರದ ಪ್ರತಿ ಶುಕ್ರವಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾ ಧಿಕಾರಿ ಮಹಾದೇವ ಮುರಗಿ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಅಭಿಯಾನ ಹಮ್ಮಿಕೊಳ್ಳುವ ಕುರಿತು ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಹಾಗೂ ಜಿಲ್ಲಾ ಅಗ್ರಣಿ ಬ್ಯಾಂಕನ್‌ ಸಹಯೋಗದಲ್ಲಿ ವಾರದ ಪ್ರತಿ ಶುಕ್ರವಾರ ರೈತರಿಗೆ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಸಾಲ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಭಾರತ ಸರಕಾರದ ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆಯು ಹೈನುಗಾರಿಕೆ, ಕುರಿ-ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸಬುಗಳನ್ನು ಕೈಗೊಳ್ಳಲು ಅವಶ್ಯಕತೆ ಇರುವ ದುಡಿಮೆ ಬಂಡವಾಳವನ್ನು ಕಿಸಾನ್‌ ಕ್ರೆಡಿಟ್‌ ಕಾರ್ಡ ಯೋಜನೆಯಡಿ ಅರ್ಹ ರೈತರಿಗೆ ಆರ್ಥಿಕ ನೆರವು ಒದಗಿಸುವ ಅಭಿಯಾನವನ್ನು ಹಮ್ಮಿಕೊಳ್ಳಲು ಎಲ್ಲ ಬ್ಯಾಂಕ್‌ ಗಳಿಗೆ ನಿರ್ದೇಶನ ನೀಡಿದ್ದು, ಜಿಲ್ಲೆಯಲ್ಲಿ ಕೆಸಿಸಿ ಸಾಲ ಅಭಿಯಾನ ಪ್ರಾರಂಭಿಸಲಾಗಿದೆ ಎಂದರು.

ಹೈನುಗಾರಿಕೆ, ಕುರಿ-ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸಬುಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯಲ್ಲಿನ ರೈತರು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ದುಡಿಮೆ ಬಂಡವಾಳಕ್ಕೆ ಆರ್ಥಿಕ ನೆರವು ಪಡೆಯಬಹುದಾಗಿದೆ. ಈಗಾಗಲೇ ಕುರಿ-ಮೇಕೆ, ಹಂದಿ, ಕೋಳಿ  ಹೊಂದಿದವರಿಗೆ ಮಾತ್ರ ಅವಕಾಶವಿರುತ್ತದೆ ಎಂದು ತಿಳಿಸಿದರು.

ಈ ಕಿಸಾನ್‌ ಕ್ರೆಡಿಟ್‌ ಕಾಡ್‌‌ì ಯೋಜನೆಯಡಿ 2 ಲಕ್ಷ ರೂ. ವರೆಗಿನ ಸಾಲದ ಮೊತ್ತಕ್ಕೆ ಶೇ. 2 ರಷ್ಟು ಬಡ್ಡಿ ಸಹಾಯಧನ ಲಭ್ಯವಿದೆ. ಅಲ್ಲದೇ ಸಕಾಲದಲ್ಲಿ ಈ ಸಾಲವನ್ನು ಮರುಪಾವತಿ ಮಾಡಿದಲ್ಲಿ ವಾರ್ಷಿಕ ಶೇ.3ರಷ್ಟು ಹೆಚ್ಚುವರಿ ಬಡ್ಡಿ ಸಹಾಯಧನದ ಸೌಲಭ್ಯ ಪಡೆಯಬಹುದಾಗಿದೆ. ಆಸಕ್ತರು ರೈತರು ತಮ್ಮ ಅವಶ್ಯಕತೆಗೆ ಅನುಗುಣವಾಗಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಮಟ್ಟದಲ್ಲಿ 5 ಜನ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ ಎಂದರು.

ಜಿಲ್ಲಾ ಅಗ್ರಣಿ ಬ್ಯಾಂಕ್‌ ವ್ಯವಸ್ಥಾಪಕ ಗೋಪಾಲರೆಡ್ಡಿ, ನಬಾರ್ಡನ ಯಮುನಾ ಪೈ, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ|ಶಶಿಧರ ನಾಡಗೌಡರ, ಮೀನುಗಾರಿಕೆ ಉಪ ನಿರ್ದೇಶಕ ಇರ್ಪಾನ್‌ ಬಾಂಗಿ, ಭಾರತೀಯ ಸ್ಟೇಟ್‌ ಬ್ಯಾಂಕಿನ ಕ್ಷೇತ್ರೀಯ ವ್ಯವಸ್ಥಾಪಕ ನರಸಿಂಹಮೂರ್ತಿ, ಕೆವಿಜಿ ಬ್ಯಾಂಕಿನ ಕ್ಷೇತ್ರೀಯ ವ್ಯವಸ್ಥಾಪಕ ಶ್ರೀಧರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.