Lokapur: ರಾಘವೇಂದ್ರ ಸ್ವಾಮಿ ಸತ್ಯ-ಧರ್ಮದ ಸಂರಕ್ಷಕ

ಮಂಗಳರಾತಿ ಪುಷ್ಪಾರ್ಪಣೆ ಮಾಡುವ ಮೂಲಕ ರಾಯರ ಆರಾಧನೆ ಸಂಪನ್ನಗೊಂಡಿತು

Team Udayavani, Sep 4, 2023, 10:15 AM IST

Lokapur: ರಾಘವೇಂದ್ರ ಸ್ವಾಮಿ ಸತ್ಯ-ಧರ್ಮದ ಸಂರಕ್ಷಕ

ಲೋಕಾಪುರ: ರಾಘವೇಂದ್ರ ಸ್ವಾಮಿಗಳು ಸತ್ಯ, ಧರ್ಮದ ಸಂರಕ್ಷಕರಾಗಿದ್ದಾರೆ. ವಿಶ್ವದಲ್ಲಿ ಜಾತಿ, ಭಾಷೆ, ಅತೀತರಾದ
ಗುರುಗಳು ತಮ್ಮ ಯೋಗ ಶಕ್ತಿಯ ಮೂಲಕ ಭಕ್ತರ ಹೃದಯದಲ್ಲಿ ಆಸೀನರಾಗಿದ್ದಾರೆ ಎಂದು ಬಾಗಕೋಟೆಯ ಪಂ. ಬಿಂಧು
ಮಾಧವಾಚಾರ್ಯ ನಾಗಸಂಪಿಗಿ ಹೇಳಿದರು.

ಪಟ್ಟಣದ ರಾಘವೇಂದ್ರ ಸೇವಾ ಸಮಿತಿ, ಗುರುಸಾರ್ವಭೌಮ ಯುವಕ ಮಂಡಳ, ಗಾಯತ್ರಿ ಭಜನಾ ಮಂಡಳಿ ಆಶ್ರಯದಲ್ಲಿ
ನಡೆದ ಮೂರು ದಿನಗಳ ರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆ ನಿಮಿತ್ತ ನಡೆದ ಪ್ರವಚನದಲ್ಲಿ ಮಾತನಾಡಿದ ಅವರು, ರಾಘವೇಂದ್ರರೆಂಬ ಹೆಸರು ಮನುಕುಲದ ಮಹಾ ಉಸಿರು ಲೋಕದಲ್ಲಿ ಅನೇಕ ಗುರುಗಳಿದ್ದಾರೆ.

ಆದರೆ, ಗುರುರಾಯರಂಥ ಗುರುಗಳು ದೊರೆಯುವುದು ವಿರಳ. ಭಕ್ತರಲ್ಲಿನ ದುಗುಡ, ದುಮ್ಮಾನಗಳನ್ನು ನಿವಾರಿಸಿ ಸನ್ಮಾರ್ಗದಲ್ಲಿ ನಡೆಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಶಾಂತಿ, ಸೌಹಾರ್ದವನ್ನು ಸಾರಿ ರಾಯರು ಭಕ್ತರ ಹೃದಯದಲ್ಲಿ ಶಾಶ್ವತ ಸ್ಥಾನ
ಪಡೆದಿದ್ದಾರೆ ಎಂದರು. ನಿವೃತ್ತ ಶಿಕ್ಷಕ ಹಾಗೂ ವಿಪ್ರ ಸಮಾಜದ ಮುಖಂಡ ಗುರುರಾಜ ಜೋಶಿ ಮಾತನಾಡಿ, ಗುರು
ಸಾರ್ವಭೌಮರೆಂದೂ, ಕಲಿಯುಗದ ಕಲ್ಪತರು ಕಾಮಧೇನುಗಳೆಂದೂ ಆಸ್ತಿಕ ಭಕ್ತರದಲ್ಲಿ ಮನೆ ಮಾತಾಗಿರುವ ಶ್ರೀ ರಾಘವೆಂದ್ರ ಸ್ವಾಮಿಗಳ ಬಗ್ಗೆ ನೂರಾರು ಗ್ರಂಥಗಳಿವೆ ಎಂದರು. ಮಠದಲ್ಲಿ ಉತ್ತರಾಧನೆ ಮತ್ತು ರಥೋತ್ಸವ ಅಂಗವಾಗಿ ಮಠದಲ್ಲಿ ನೂರಾರು ಭಕ್ತರು ಸೇರಿಕೊಂಡು ಮಠದ ತೇರನ್ನು ಶೃಂಗಾರ ಮಾಡಿ ಅದನ್ನು ಭಕ್ತಿಯಿಂದ ಎಳೆದು ಕೃತಾರ್ಥರಾದರು.

ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ನಡೆಯಿತು. ಶ್ರೀವಿಷ್ಣು ಸಹ್ರಸನಾಮ ವೆಂಕಟೇಶ ಸ್ತೋತ್ರ ಹಾಗೂ ರಾಘವೇಂದ್ರ ಅಷ್ಟೋತ್ತರ ನಡೆಯಿತು. ನಂತರ ಮಹಾಮಂಗಳಾರತಿ ನೈವೇದ್ಯ ಅನ್ನ ಸಂತರ್ಪಣೆ ನಡೆಯಿತು. ವಿವಿಧ ಸಂಗೀತ, ದಾಸರ ಪದಗಳ ಮೂಲಕ ಹಾಡುತ್ತ ಕುಣಿಯುತ್ತ ವೃಂದಾವನ ಸುತ್ತು ಹಾಕಿ ಮಂಗಳರಾತಿ ಪುಷ್ಪಾರ್ಪಣೆ
ಮಾಡುವ ಮೂಲಕ ರಾಯರ ಆರಾಧನೆ ಸಂಪನ್ನಗೊಂಡಿತು. ಆರಾಧನಾ ಮಹೋತ್ಸವಕ್ಕೆ ವಿವಿಧ ಸೇವೆಗಳನ್ನು ಗೈದ
ಮಹನೀಯರಿಗೆ ಸನ್ಮಾನಿಸಲಾಯಿತು.

ವಿಪ್ರ ಸಮಾಜದ ಅಧ್ಯಕ್ಷ ವ್ಹಿ.ಎನ್‌. ಕುಲಕರ್ಣಿ, ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ, ಮುಖಂಡರಾದ ಬಿ.ಎಲ್‌.
ಬಬಲಾದಿ, ಆರ್‌.ಎಸ್‌.ಜೋಶಿ, ಬಿ.ಡಿ.ಚಿನಗುಂಡಿ, ಶ್ರೀನಿವಾಸ ಕುಲಕರ್ಣಿ, ಕೃಷ್ಣಾಜಿ ಕುಲಕರ್ಣಿ, ಭೀಮಣ್ಣ ಜೋಶಿ,
ಲಕ್ಷ್ಮೀಕಾಂತ ದೇಶಪಾಂಡೆ, ರಮೇಶ ಕುಲಕರ್ಣಿ, ಗೋಪಾಲಕೃಷ್ಣ ದೇಶಪಾಂಡೆ, ಸಂತೋಷ ದೇಶಪಾಂಡೆ, ಅರ್ಚಕ
ಆನಂದಚಾರ್ಯ ಜಂಬಗಿ, ಪವನ ಸೋಮಾಪುರ ರಾಹುಲ್‌ ಗೂಡುರ, ಗೋವಿಂದ ಕುಲಕರ್ಣಿ, ವಿಜಯ ದೇಶಪಾಂಡೆ, ಅಣ್ಣಾರಾವ ದೇಶಪಾಂಡೆ, ನಾಗರಾಜ ಕುಲಕರ್ಣಿ, ರಂಗನಾಥ ಮುರಗೋಡ, ಸಂತೋಷ ಕುಲಕರ್ಣಿ, ಸುಶೀಲೇಂದ್ರ ದೇಶಪಾಂಡೆ, ರಾಘವೇಂದ್ರ ಸೇವಾ ಸಮಿತಿ, ಗುರುಸಾರ್ವಭೌಮ ಯುವಕ ಮಂಡಳ, ಗಾಯತ್ರಿ ಭಜನಾ ಮಂಡಳಿ ಸರ್ವಸದಸ್ಯರು ಇದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.