Lokapur: ಸರ್ಕಾರಿ ಶಾಲೆ ಪಕ್ಕದಲ್ಲಿ ಕೊಳಚೆ ಪ್ರದೇಶ-ಸಾಂಕ್ರಾಮಿಕ ರೋಗ ಹರಡುವ ಭೀತಿ


Team Udayavani, Aug 25, 2024, 12:48 PM IST

6-lokapur

ಲೋಕಾಪುರ: ಪ.ಪಂ. ನಿರ್ಲಕ್ಷ್ಯತನದಿಂದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ತ್ಯಾಜ ವಸ್ತು, ಮಲೀನ ನೀರು ಮತ್ತು ಗಲೀಜು ಕೂಡಿದ್ದರಿಂದ ಅಲ್ಲಿಯ ಪ್ರದೇಶ ಈಗ ರೋಗ ಹರಡುವ ಭೀತಿಯಾಗಿ ಪರಿಣಿಮಿಸಿದೆ.

ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಜರತ ಅಮೀನಶಹಾ, ಹಯಾತಶಹಾ ದರ್ಗಾದ ಬಳಿ ಸಿಸಿ ರಸ್ತೆ ಪಕ್ಕದಲ್ಲಿ ಸರಿಯಾಗಿ ಚರಂಡಿ ನಿರ್ಮಿಸದೇ ಇರುವುದರಿಂದ ತ್ಯಾಜ ವಸ್ತು, ಮಲೀನ ನೀರು ರಸ್ತೆ ಪಕ್ಕವೇ ಹರಿಯುತ್ತಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ನಡೆದಾಡುವ ಪರಸ್ಥಿತಿ ನಿರ್ಮಾಣವಾಗಿದೆ.

ಕೊಳಚೆ ಪ್ರದೇಶದಲ್ಲಿ ಬಹಳ ಗಲೀಜು ಇರುವುದರಿಂದ ಹಂದಿಗಳ ಉಳಪಟ ಹೆಚ್ಚಾಗಿದೆ. ಸದ್ಯಕ್ಕೆ ಕೊಳಚೆ ಪ್ರದೇಶ ಸಂಪೂರ್ಣ ಮಲೀನ ನೀರಿನಿಂದ ತುಂಬಿ ಗಬ್ಬೆದ್ದು ನಾರುತ್ತಿವೆ.

ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಶಾಲೆ ಪಕ್ಕದಲ್ಲಿ ಮಕ್ಕಳು ನಡೆದಾಡುವ ಸಂದರ್ಭ ಅದರಲ್ಲಿ ಬಿದ್ದು ಗಾಯ ಮಾಡಿಕೊಂಡ ಘಟನೆಗಳು ಸಂಭವಿಸಿದರೂ ಇದಕ್ಕೆ ಪ.ಪಂ.ನ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕೊಳಚೆ ಪ್ರದೇಶ ನಿರ್ಮಾಣವಾಗಿರುವುದರಿಂದ ಡೆಂಗ್ಯೂ, ಮಲೇರಿಯಾದಂತಹ ಸಂಕ್ರಾಮಿಕ ರೋಗ ಹಬ್ಬುವ ಭೀತಿ ಇದೆ. ಶಾಲೆಯ ಪಕ್ಕದಲ್ಲಿ ಗಲೀಜು ಇರುವುದರಿಂದ ದುರ್ವಾಸನೆ ಬರುತ್ತಿದ್ದು, ಶಿಕ್ಷಕರಿಗೆ ಹಾಗೂ ವಿದ್ಯರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಬಹಳ ತೊಂದರೆಯಾಗಿದೆ.

ಈ ಕುರಿತು ಪ.ಪಂ. ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಲವಾರು ಬಾರಿ ವಿನಂತಿಸಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಪ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಣ್ಣುಮುಚ್ಚಿ ಕುಳಿತ್ತಿದ್ದಾರೆಂದು ಅಲ್ಲಿಯ ನಿವಾಸಿಗಳು ದೂರಿದ್ದಾರೆ.

ಮಲೀನ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ತೆಯಿಲ್ಲದ ಕಾರಣ ಶಾಲೆ ಪಕ್ಕದಲ್ಲಿ ಕೊಳಚೆ ಪ್ರದೇಶ ನಿರ್ಮಾಣವಾಗಿದೆ. ಪಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊಳಚೆ ಪ್ರದೇಶವನ್ನು ಸ್ವಚ್ಚತೆಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಎಂಸಿ ಸದಸ್ಯ ಶಬ್ಬೀರ ಅತ್ತಾರ ತಿಳಿಸಿದರು.

ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ  ಸಂಚರಿಸಲು ಬಹಳ ಕಷ್ಟಕರವಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಕಡೇ ಗಮನ ಹರಿಸಿ ಕೊಳಚೆ ಪ್ರದೇಶ ಸ್ವಚ್ಛಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.