ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಕೆ
ಚುನಾವಣೆಯಿಂದ ಹೊರಗುಳಿದ ಬಿಜೆಪಿ
Team Udayavani, Aug 23, 2024, 12:34 PM IST
ಮಹಾಲಿಂಗಪುರ: ಭಾರಿ ಕುತೂಹಲ ಕೆರಳಿಸಿದ್ದ ಮಹಾಲಿಂಗಪುರ ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ಇಂದು (ಆಗಸ್ಟ್ 23) ಮುಂಜಾನೆ 10 ರಿಂದ 11 ರವರಗೆ ಇದ್ದ ನಾಮಪತ್ರ ಸಲ್ಲಿಕೆ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಯಲ್ಲನಗೌಡ ಪಾಟೀಲ್, ಉಪಾಧ್ಯಕ್ಷ ಸ್ಥಾನಕ್ಕೆ ಶೀಲಾ ರಾಜೇಶ ಭಾವಿಕಟ್ಟಿ ಅವರು ಚುನಾವಣಾಧಿಕಾರಿ ಗಿರೀಶ ಸ್ವಾದಿ ಅವರಿಗೆ ನಾಮಪತ್ರಗಳನ್ನು ಸಲ್ಲಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ರಜಾಕ್ ಬಾಗವಾನ, ಉಪಾಧ್ಯಕ್ಷ ಸ್ಥಾನಕ್ಕೆ ಬಲವಂತಗೌಡ ಪಾಟೀಲ್ ಸೂಚಕರಾಗಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭವಾಗಲಿದೆ. ಸಭೆಯ ಪ್ರಾರಂಭದ ನಂತರ ಚುನಾವಣಾ ಪ್ರಕ್ರೀಯೆಗಳು ಮುಗಿದು, ಅವಿರೋಧ ಆಯ್ಕೆಯ ಘೋಷನೆಯಾಗಲಿದೆ.
ಕಣದಿಂದ ಹಿಂದೆ ಸರಿದ ಬಿಜೆಪಿ : ಕಳೆದ ಬಾರಿ ಬಿಜೆಪಿ ಬೆಂಬಲಿಸಿದ್ದ ಪಕ್ಷೇತರ ಸದಸ್ಯ ಸಜನಸಾಬ ಪೆಂಡಾರಿ ಈ ಬಾರಿ ಬಿಜೆಪಿಗೆ ಬೆಂಬಲಿಸಿದ್ದರಿಂದ ಹಾಗೂ ಬಿಜೆಪಿ ಬಂಡಾಯ ಸದಸ್ಯರು ಮತ್ತೆ ಕಾಂಗ್ರೆಸ್ ಕೈ ಹಿಡಿದ ಕಾರಣದಿಂದಾಗಿ ಬಿಜೆಪಿ ಪಕ್ಷವು ಪುರಸಭೆ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯ ಕಣದಿಂದ ಹೊರಗುಳಿದಿದೆ. ಚುನಾಯಿತ 13 ಸದಸ್ಯರು (ಬಂಡಾಯ 3 ಸದಸ್ಯರು ), ಶಾಸಕರು, ಸಂಸದರು ಸೇರಿ 15 ಮತಗಳಿದ್ದರು ಸಹ, 3 ಬಂಡಾಯ ಸದಸ್ಯರು ಮತ್ತು ಪಕ್ಷೇತರ ಅಭ್ಯರ್ಥಿಯು ಕಾಂಗ್ರೆಸ್ ಗೆ ಬೆಂಬಲಿಸಿದ್ದರಿಂದ ಪ್ರಸಕ್ತ ಅವಧಿಯಲ್ಲಿ ಎರಡುವರೆ ವರ್ಷಗಳ ಇಬ್ಬರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಸಹ, ಪಕ್ಷದ ಸದಸ್ಯರಲ್ಲಿನ ಹೊಂದಾಣಿಕೆಯ ಕೊರತೆಯಿಂದ ಬಹುಮತವಿದ್ದರೂ ಕೈಯಲ್ಲಿನ ಅಧಿಕಾರ ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದರ ಕುರಿತು ಬಿಜೆಪಿ ಸದಸ್ಯರು, ಮುಖಂಡರು, ಶಾಸಕರು, ಸಂಸದರು ಆತ್ಮಾವಲೋಕನ ಮಾಡಿಕೊಳ್ಳುವುದು ಅಗತ್ಯವಿದೆ ಎಂಬುದು ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಅಳಲಾಗಿದೆ.
ಇದನ್ನೂ ಓದಿ: ಕೇಂದ್ರ ಸಚಿವರನ್ನು ಭೇಟಿಯಾದ ಗೋವಾ ಸಿಎಂ… ವಿಮಾನ ನಿಲ್ದಾಣದ ಮೂಲಸೌಕರ್ಯ ಹೆಚ್ಚಿಸಲು ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.