Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…


Team Udayavani, Aug 28, 2024, 9:08 PM IST

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

ಮಹಾಲಿಂಗಪುರ: ಆ.23ರಂದು ಜರುಗಿದ ಮಹಾಲಿಂಗಪುರ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಸಮಯದಲ್ಲಿ ಕ್ಷೇತ್ರದಲ್ಲಿರದೇ ಮೂರು ದಿನ ಮೊದಲು ಬೆಂಗಳೂರಿಗೆ ಹೋಗಿ, ರಾಷ್ಟ್ರೀಯ ಪಕ್ಷ ಬಿಜೆಪಿಯಿಂದ ಯಾವುದೇ ನಾಮಪತ್ರ ಸಲ್ಲಿಸಲು ಆಗದಂತೆ ನೋಡಿಕೊಂಡು, ಈಗ ಬಿಜೆಪಿ ಸದಸ್ಯರ ಮೇಲೆ ಪಕ್ಷದ್ರೋಹದ ಆರೋಪ ಮಾಡಿರುವ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿ ಪುರಸಭೆಯ 7 ಜನ ಸದಸ್ಯರು ಬುಧವಾರ ಸಂಜೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಅವರಿಗೆ ದೂರು ಸಲ್ಲಿಸಿದ್ದಾರೆ.

ಪುರಸಭೆಯಲ್ಲಿ ಬಿಜೆಪಿಯಿಂದ ಚುನಾಯಿತ 13 ಸದಸ್ಯರಿದ್ದು, ಅದರಲ್ಲಿ 3 ಬಂಡಾಯ ಸದಸ್ಯರು 2020 ರಿಂದ ಕಾಂಗ್ರೆಸ್ ಪಕ್ಷದೊಂದಿಗೆ ಇದ್ದಾರೆ. ಇದುವರೆಗೆ ಅವರಿಗೆ ಪಕ್ಷದಿಂದ ಯಾವುದೇ ಶಿಸ್ತುಕ್ರಮ ಜರುಗಿಸಿಲ್ಲ. ಸದ್ಯ 10 ಸದಸ್ಯರು, ಶಾಸಕರು ಸಂಸದರು ಸೇರಿ ಪುರಸಭೆಯಲ್ಲಿ 12 ಮತಗಳಿದ್ದವು. ಒಂದು ರಾಷ್ಟ್ರೀಯ ಪಕ್ಷವಾಗಿ ನಾವು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವುದು ಅವಶ್ಯವಾಗಿತ್ತು. ಅಂತಹದರಲ್ಲಿ ಪಕ್ಷದ ಮತ್ತು ತೇರದಾಳ ಮತಕ್ಷೇತ್ರದ ಜವಾಬ್ದಾರಿ ಸ್ಥಾನದಲ್ಲಿರುವ ಶಾಸಕರು ನಾಲ್ಕು ದಿನ ಮುಂಚಿತವಾಗಿ ಬೆಂಗಳೂರಿನಲ್ಲಿ ಹೋಗಿ ಕುಳಿತುಕೊಂಡಿರುತ್ತಾರೆ. ಚುನಾವಣೆಯ ಹಿಂದಿನ ದಿನ ನಾವು ಜಿಲ್ಲಾಧ್ಯಕ್ಷರಾದ ತಮ್ಮ ಗಮನಕ್ಕೆ ತಂದ ನಂತರ ಶಾಸಕರು ಸಿಟ್ಟಿನಿಂದ ಬೆಂಗಳೂರಿನಲ್ಲಿ ಕುಳಿತು ನಮ್ಮಲ್ಲಿಯ ಕೆಲವು ಸದಸ್ಯರಿಗೆ ಫೋನ್ ಮಾಡಿ ನೀವು ಕಾಂಗ್ರೆಸ್‌ಗೆ ಬುಕ್ ಆಗಿದ್ದಿರಿ ಎಂದು ಆರೋಪಿಸುತ್ತಾರೆ.

ನಮ್ಮ ಒಬ್ಬ ಸದಸ್ಯರು ನಾನು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸಿದ್ದನಿದ್ದೇನೆ. ನೀವು ಬಂದು ಸೂಚಕರಾಗಬೇಕು ಬನ್ನಿ ಎಂದು ಕರೆದಾಗ, ಶಾಸಕರು ಮರಳಿ ಪೋನ್ ಕರೆ ಸ್ವೀಕರಿಸದ ಕಾರಣ, ಶಾಸಕರಿಗೆ ವಾಟ್ಸ್ ಆಪ್ ಸಂದೇಶವನ್ನು ಕಳಿಸಿರುತ್ತಾರೆ. ಈ ಎಲ್ಲ ಘಟನೆಗಳಿಂದ ಶಾಸಕರು ಯಾವುದೇ ಆತಂಕ ಇಲ್ಲದೇ ಕಾಂಗ್ರೆಸ್ ಪಕ್ಷವು ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸದಂತೆ ನೋಡಿಕೊಂಡು ನಮ್ಮ ಮೇಲೆ ಪಕ್ಷ ದ್ರೋಹ ಆರೋಪ ಮಾಡಿರುವ ಶಾಸಕರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕೆಂದು ಒತ್ತಾಯಿಸಿ 7 ಸದಸ್ಯರು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಅವರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ಬಿಜೆಪಿಯ ಸದಸ್ಯ ಪ್ರಲ್ಹಾದ ಸಣ್ಣಕ್ಕಿ ಮಾತನಾಡಿ 2020ರಲ್ಲಿ ಕಾಂಗ್ರೆಸ್‌ ನೊಂದಿಗೆ ಹೋದ ಮೂವರು ಬಿಜೆಪಿ ಸದಸ್ಯರ ಮೇಲೆಯೇ ಶಾಸಕರು ಇದುವರೆಗೆ ಯಾವುದೇ ಕ್ರಮವನ್ನು ಜರುಗಿಸಿಲ್ಲ. ಪಕ್ಷಕ್ಕೆ ಬದ್ದ ಇರುವ ಮತ್ತು ಯಾವುದೇ ಪಕ್ಷದ್ರೋಹ ಮಾಡದ ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಶಾಸಕರಿಂದ ಪಕ್ಷಕ್ಕೆ ದ್ರೋಹವಾಗಿದೆ. ಶಾಸಕರು ಕೇವಲ ಕಿವಿ ಕಚ್ಚುವ ಸದಸ್ಯರು, ಮುಖಂಡರ ಮಾತು ಕೇಳಿ ಬಿಜೆಪಿ ಪಕ್ಷದ ಸ್ಥಿತಿಯನ್ನು ಅದೋಗತಿಗೆ ತರುತ್ತಿದ್ದಾರೆ. ನಮ್ಮ ಮೇಲಿನ ಆರೋಪ ಸಾಬಿತು ಮಾಡಬೇಕು ಇಲ್ಲವೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.

ಜಿಲ್ಲಾಧ್ಯಕ್ಷರಿಗೆ ದೂರು ಸಲ್ಲಿಸುವ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಬಸವರಾಜ ಹಿಟ್ಟಿನಮಠ, ಸದಸ್ಯರಾದ ರವಿ ಜವಳಗಿ, ಬಸವರಾಜ ಚಮಕೇರಿ, ಬಿಜೆಪಿ ಮುಖಂಡರಾದ ಪ್ರಕಾಶ ಕೋಳಿಗುಡ್ಡ, ಮಹಾಲಿಂಗ ಮುದ್ದಾಪೂರ, ಚನ್ನಪ್ಪ ರಾಮೋಜಿ, ಸತೀಶ ಜುಂಝರವಾಡ, ತೇರದಾಳ ಮತಕ್ಷೇತ್ರ ಯುವ ಮೊರ್ಚಾ ಉಪಾಧ್ಯಕ್ಷ ಶಿವಾನಂದ ಹುಣಶ್ಯಾಳ ಇದ್ದರು.

ತೇರದಾಳ ಶಾಸಕ ಸಿದ್ದು ಸವದಿ ವಿರುದ್ದ ಮಹಾಲಿಂಗಪುರ ಪುರಸಭೆಯ ಏಳು ಸದಸ್ಯರು ನೀಡಿರುವ ದೂರನ್ನು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮತ್ತು ಬಿಜೆಪಿ ಪಕ್ಷದ ರಾಜ್ಯ ಶಿಸ್ತು ಸಮಿತಿಗೆ ಕಳಿಸಲಾಗುವದು. ಶಾಸಕರ ವಿರುದ್ಧದ ಮುಂದಿನ ಕ್ರಮವನ್ನು ರಾಜ್ಯಾಧ್ಯಕ್ಷರು ಮತ್ತು ಪಕ್ಷದ ರಾಜ್ಯ ಶಿಸ್ತು ಸಮಿತಿಯು ನಿರ್ಧರಿಸಲಿದೆ.
– ಶಾಂತಗೌಡ ಪಾಟೀಲ. ಬಿಜೆಪಿ ಜಿಲ್ಲಾಧ್ಯಕ್ಷರು. ಬಾಗಲಕೋಟೆ.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ವಿರುದ್ಧ 3ನೇ ದೋಷಾರೋಪ ಪಟ್ಟಿ

Prajwal Revanna ವಿರುದ್ಧ 3ನೇ ದೋಷಾರೋಪ ಪಟ್ಟಿ

High Court ಅನುಕಂಪದ ಆಧಾರದಲ್ಲಿ ಸೊಸೆ ಉದ್ಯೋಗಕ್ಕೆ ಅರ್ಹಳಲ್ಲ

High Court ಅನುಕಂಪದ ಆಧಾರದಲ್ಲಿ ಸೊಸೆ ಉದ್ಯೋಗಕ್ಕೆ ಅರ್ಹಳಲ್ಲ

BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ

BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ

HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?

HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.