Mahalingapur: ತಾಯಿ ಮಗಳ ಸಜೀವ ದಹನ ಪ್ರಕರಣ… ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಗಂಭೀರ ಗಾಯಗೊಂಡಿದ್ದ ಸುಭಾನ ಆಸ್ಪತ್ರೆಯಲ್ಲಿ ಮೃತ್ಯು

Team Udayavani, Jul 18, 2024, 12:34 PM IST

Mahalingapur: ತಾಯಿ ಮಗಳ ಸಜೀವ ದಹನ ಪ್ರಕರಣ… ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಮಹಾಲಿಂಗಪುರ: ನೆರೆಯ ರನ್ನಬೆಳಗಲಿ ಪಟ್ಟಣದಲ್ಲಿ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ್ದ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹೆಚ್ಚಿದ ಪ್ರಕರಣದಲ್ಲಿ ತಾಯಿ – ಮಗಳ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗನೂ ಮೃತಪಟ್ಟಿದ್ದು ಇದರೊಂದಿಗೆ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ ತಾಯಿ ಜೈಬಾನು, ಮಗಳು ಶಬಾನಾ ಸಜೀವ ದಹನವಾಗಿದ್ದರು. ತಂದೆ ದಸ್ತಗೀರಸಾಬ ಪೆಂಡಾರಿ, ಸುಭಾನ ಪೆಂಡಾರಿ (27) ಗಾಯಾಳುಗಳಾದ್ದರಿಂದ ಮಹಾಲಿಂಗಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗಿತ್ತು.

ಸುಭಾನ ಪೆಂಡಾರಿಗೆ ಶೇ.75 ಕ್ಕಿಂತ ಹೆಚ್ಚಿಗೆ ಗಾಯವಾದ್ದರಿಂದ ಸುಭಾನ ಅವರನ್ನು ಮಂಗಳವಾರ ಮಧ್ಯಾಹ್ನವೇ ಬೆಳಗಾವಿಯ ಸಿವ್ಹೀಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಮಧ್ಯಾಹ್ನ ಗಾಯಾಳು ಸುಭಾನ ಪೆಂಡಾರಿ ಅವರು ಚಿಕಿತ್ಸೆಗೆ ಸ್ಪಂದಿಸದೇ, ಆರೋಗ್ಯ ಸ್ಥಿತಿಯು ಗಂಭೀರವಾದ್ದರಿಂದ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈಗಾಗಲೇ ತೇರದಾಳ ಮತ್ತು ಲೋಕಾಪುರ ಎಸ್ಐ ಇಬ್ಬರು ಬೆಳಗಾವಿ ಆಸ್ಪತ್ರೆಗೆ ತೆರಳಿದ್ದಾರೆ. ಸುಭಾನ ಮೃತದೇಹವನ್ನು ನೇರವಾಗಿ ಮುಧೋಳ ತಾಲೂಕು ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡಿಸಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ಮಹಾಲಿಂಗಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಸ್ತಗೀರಸಾಬ ಪೆಂಡಾರಿ ಅವರ ಆರೋಗ್ಯದಲ್ಲಿ ಚೇತರಿಕೆ ಇದ್ದು ಗುಣಮುಖರಾಗುತ್ತಾರೆ ಎಂಬ ಮಾಹಿತಿ ಇದೆ.

ಸಂಜೆ ವೇಳೆಗೆ ಅಪರಾಧಿಗಳ ಪತ್ತೆ? : ಕಳೆದ ಮೂರು ದಿನಗಳಿಂದ 8 ತಂಡಗಳ ಮೂಲಕ ಆರೋಪಿಗಳ ಪತ್ತೆಗಾಗಿ ತೀವೃ ಕಾರ್ಯಾಚರಣೆ ನಡೆಯುತ್ತಿದೆ. ಬಹುಶಃ ಗುರುವಾರ ಸಂಜೆ ವೇಳೆಗೆ ಅಪರಾಧಿಗಳ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಪೋಲಿಸ್ ಇಲಾಖೆಯ ಅಧಿಕಾರಿಯೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಧೋಳಕ್ಕೆ ಎಸ್ ಪಿ ಆಗಮನ : ಮಹಾಲಿಂಗಪುರ ಠಾಣೆಗೆ ತಂದಿದ್ದ ಶಂಕಿತರನ್ನು ವಿಚಾರಣೆಗಾಗಿ ಮುಧೋಳ ಠಾಣೆಗೆ ಕರೆದೊಯ್ಯಲಾಗಿದೆ. ವಿಚಾರಣೆಗಾಗಿ ಬಾಗಲಕೋಟೆ ಎಸ್ ಪಿ ಅಮರನಾಥ ರೆಡ್ಡಿ ಅವರು ಮುಧೋಳ ಠಾಣೆಗೆ ಆಗಮಿಸಿದ್ದಾರೆ.

ಇದನ್ನೂ ಓದಿ: Facebook, ಇನ್‌ಸ್ಟಾಗೂ ದೃಢೀಕರಣ ಸೌಲಭ್ಯ: ತಿಂಗಳಿಗೆ 639 ರೂ. ಶುಲ್ಕ

ಟಾಪ್ ನ್ಯೂಸ್

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

CCb

CCB Police: ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿ: ಬೃಹತ್‌ ಜಾಲ ಪತ್ತೆ

GRUHA

Congress Government Scheme: ಬಡವರ ನಂದಾದೀಪ ಗೃಹಲಕ್ಷ್ಮಿಗೆ ವರ್ಷದ ಹರ್ಷ

Omar Abdulla

Omar Abdullah ವಿಚ್ಛೇದನ ಕೇಸು: ಮಧ್ಯಸ್ಥಿಕೆಗೆ ಕರೆದ ಸುಪ್ರೀಂ ಕೋರ್ಟ್‌

1-kP

Tamil film industry; ಬಾಲ ನಟಿಯಾಗಿದ್ದಾಗ ಲೈಂಗಿಕ ಕಿರುಕುಳ:ಕುಟ್ಟಿ ಪದ್ಮಿನಿ

She-Box

Central Government: ಉದ್ಯೋಗಸ್ಥ ಮಹಿಳೆಯರಿಗೆ ಸರಕಾರದಿಂದ ಸುರಕ್ಷೆಯ ಅಭಯ

Wayanad

Wayanad;ಮೃತರ ಭಾಗ ಒಂದೊಂದೆಡೆ ಅಂತ್ಯಕ್ರಿಯೆ: 73 ದೇಹಗಳಿಗೆ ಹೊಂದಾಣಿಕೆಯಾದ ಡಿಎನ್‌ಎ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CCb

CCB Police: ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿ: ಬೃಹತ್‌ ಜಾಲ ಪತ್ತೆ

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

Congress-Symbol

AICC: ರಾಜ್ಯಕ್ಕೆ ಕಾಂಗ್ರೆಸ್‌ನಿಂದ ನಾಲ್ವರು ಕಾರ್ಯದರ್ಶಿಗಳ ನೇಮಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

mamata

Mamata Banerjee ಅವರಿಗೆ ಮಕ್ಕಳಿಲ್ಲ, ಹಾಗಾಗಿ ದುಃಖ ತಿಳಿಯದು: ಟ್ರೈನಿ ವೈದ್ಯೆ ತಾಯಿ

CCb

CCB Police: ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿ: ಬೃಹತ್‌ ಜಾಲ ಪತ್ತೆ

GRUHA

Congress Government Scheme: ಬಡವರ ನಂದಾದೀಪ ಗೃಹಲಕ್ಷ್ಮಿಗೆ ವರ್ಷದ ಹರ್ಷ

1-aaaannn

Paralympics;ನಿರಾಶ್ರಿತ ತಂಡದ ಪರ ಮೊದಲ ಪದಕ ಗೆದ್ದ ಅಫ್ಘಾನ್‌ ಕ್ರೀಡಾಪಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.