200 ದಿನಗಳನ್ನು ಪೂರೈಸಿದ ಮಹಾಲಿಂಗಪುರ ತಾಲೂಕು ಹೋರಾಟ!

ತಾಲೂಕು ಆಗುವರೆಗೂ ಹೋರಾಟ ನಿರಂತರ : ತಾಲೂಕು ಘೋಷಣೆ ಯಾವಾಗ?

Team Udayavani, Oct 30, 2022, 5:24 PM IST

8

ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಕಳೆದ ಏಪ್ರೀಲ್ 14 ರಂದು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ವೇದಿಕೆ ನಿರ್ಮಿಸಿ, ತಾಲೂಕು ಹೋರಾಟ ವೇದಿಕೆಯ ನೇತೃತ್ವದಲ್ಲಿ ಪ್ರಾರಂಭಿಸಿರುವ ಅನಿರ್ಧಿಷ್ಟಾವಧಿ ಹೋರಾಟವು ಅ.30ರ ರವಿವಾರ 200 ದಿನಗಳನ್ನು ಪೂರೈಸಿದೆ.

ಮೊದಲು ಮುಧೋಳ ತಾಲೂಕಿನಲ್ಲಿದ್ದ ಮಹಾಲಿಂಗಪುರ ಪಟ್ಟಣವನ್ನು 2018ರಲ್ಲಿ ಹಿಂದಿನ ಕಾಂಗ್ರೆಸ್ ಸರಕಾರ ನೂತನ ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆ ಮಾಡಿತ್ತು. ಇದರಿಂದ ಪಟ್ಟಣದ ಜನತೆಗೆ ಮುಧೋಳಕ್ಕಿಂತ ನೂತನ ರಬಕವಿ-ಬನಹಟ್ಟಿ ತಾಲೂಕು ಮತ್ತೇ 10 ಕೀ.ಮಿ ಸಮೀಪವಾಯಿತು.

30 ವರ್ಷಗಳ ಬೇಡಿಕೆ:     

ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂಬುದು ಕಳೆದ 30 ವರ್ಷಗಳ ನಿರಂತರ ಬೇಡಿಕೆಯಾಗಿದೆ. ಈ ಹಿಂದೆ ತಾಲೂಕಿಗಾಗಿ 2003ರಲ್ಲಿ ಪಟ್ಟಣದ ಬಸವವೃತ್ತದಲ್ಲಿ ಒಂದು ತಿಂಗಳ ಕಾಲ ಪ್ರತಿಭಟನೆ ಮಾಡಲಾಗಿತ್ತು. ಅಂದು ನಡೆದ ತಾಲೂಕು ಹೋರಾಟದ ಫಲವಾಗಿ ಟಿ.ಎಂ.ಹುಂಡೆಕಾರ ವರದಿಯು ನಿಯೋಜಿತ ನಕ್ಷೆಯೊಂದನ್ನು ಸಿದ್ದಪಡಿಸಿ ಸರಕಾರಕ್ಕೆ ಶಿಪಾರಸ್ಸು ಮಾಡಿತ್ತು. ಅದರಂತೆ ಅಂದಿನ ಕಂದಾಯ ಸಚಿವ ಬಿ.ಎಂ.ಶ್ರೀಕಂಠಯ್ಯ ಅವರು ಏಪ್ರೀಲ್ 1ರಂದು ಮಹಾಲಿಂಗಪುರಕ್ಕೆ ಉಪತಹಶೀಲ್ದಾರ ಹುದ್ದೆಯ ಮಂಜೂರಿಯ ಆದೇಶ ಪತ್ರವನ್ನು ಕಳಿಸಿದ್ದರಿಂದ ಹೋರಾಟವನ್ನು ಮೊಟಕುಗೊಳಿಸಲಾಗಿತ್ತು. ಮುಂದೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಹೋರಾಟ ಮುಂದುವರೆಯಲಿಲ್ಲ, ತಾಲೂಕು ಆಗಲೇ ಇಲ್ಲ.

ಉದ್ಘಾಟನೆಗೆ ಮಾತ್ರ ಸೀಮಿತ ? : 

ತೇರದಾಳ ಮತಕ್ಷೇತ್ರದ ಅಂದಿನ ಶಾಸಕಿ, ಸಚಿವೆ ಉಮಾಶ್ರೀ ಅವರು 9-2-2018ರಂದು ಅಧಿಕೃತವಾಗಿ ರಬಕವಿ-ಬನಹಟ್ಟಿ ತಾಲೂಕಾ ಪ್ರಾರಂಭೋತ್ಸವ ಸಮಾರಂಭವನ್ನು ಮಾಡಿದ್ದರು. ಆದರೆ ನೂತನ ತಾಲೂಕು ಘೋಷಣೆಯಾಗಿ 4 ವರ್ಷ 8 ತಿಂಗಳು ಕಳೆದರು ಸಹ, ಇದುವರೆಗೆ ಎಲ್ಲಾ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಮನೆ-ಹೊಲ ಖರೀದಿಗಾಗಿ ಮುಧೋಳಕ್ಕೆ, ತಹಶೀಲ್ದಾರ ಕೆಲಸಗಳಿಗಾಗಿ ರಬಕವಿ-ಬನಹಟ್ಟಿಗೆ, ಮಾಶಾಸನ, ಜಾತಿ-ಆದಾಯ ಪತ್ರಗಳಿಗಾಗಿ ತೇರದಾಳಕ್ಕೆ ಸೇರಿದಂತೆ ಇಂದಿಗೂ ಮೂರು ಕಡೆಗೆ ಅಲೆದಾಡುವದು ತಪ್ಪಿಲ್ಲ.

2019ರಿಂದ ಮತ್ತೇ ಹೋರಾಟ ತೀವೃ:             ‌‌

ಮಾಜಿ ಸಿಎಂ ಕುಮಾರಸ್ವಾಮಿಯವರು 2018 ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ನಾನು ಸಿಎಂ ಆದರೆ ತೇರದಾಳ ತಾಲೂಕಾ ಕೇಂದ್ರ ಮಾಡುವುದಾಗಿ ಘೋಷಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ ಸಿಎಂ ಖುರ್ಚಿ ಅಲಂಕರಿಸಿದ ನಂತರ ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್‍ನಲ್ಲಿ ತೇರದಾಳನ್ನು ನೂತನ ತಾಲೂಕು ಘೋಷಿಸಿದರು.

ತೇರದಾಳ ತಾಲೂಕು ಘೋಷಣೆ ನಂತರ 2019ರಿಂದ ಮಹಾಲಿಂಗಪುರ ತಾಲೂಕು ಹೋರಾಟ ತೀವ್ರ ಸ್ಪರೂಪ ಪಡೆದುಕೊಂಡು, 2019ರಿಂದ 2021ರವರೆಗೆ ಹಲವು ಬಾರಿ ಬೆಂಗಳೂರು ನಿಯೋಗ ತೆರಳಿ ಮುಖ್ಯಮಂತ್ರಿ, ಕಂದಾಯ ಮಂತ್ರಿಗಳಿಗೆ ಮನವಿ ಸಲ್ಲಿಸಿ, ತಾಲೂಕು ಕೇಂದ್ರಕ್ಕಾಗಿ ಒತ್ತಾಯಿಸಲಾಗಿತ್ತು.

ಅಂತಿಮವಾಗಿ ಅನಿರ್ಧಿಷ್ಟಾವಧಿ ಹೋರಾಟ : 

ಮೂರು ತಾಲೂಕಿಗೆ ಅಲೆದಾಡುವ ತ್ರಿಶಂಕು ಸ್ಥಿತಿಯಲ್ಲಿ ಸಿಕ್ಕಿ ಒದ್ದಾಡುವಂತಿರುವಾಗಲೇ ಈ ಮೊದಲು ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆಯಾಗಿದ್ದ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ನೂತನ ತೇರದಾಳ ತಾಲೂಕಿಗೆ ಸೇರ್ಪಡೆ ಮಾಡಿದ್ದ 2022ರ ಏಪ್ರೀಲ್‍ನಲ್ಲಿ ತಾಲೂಕು ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿ, ತೇರದಾಳ ತಾಲೂಕಿಗೆ ಸೇರಿಸಿದ್ದನ್ನು ವಿರೋಧಿಸಿ ರಬಕವಿ-ಬನಹಟ್ಟಿ ತಾಲೂಕಿನಲ್ಲಿಯೇ ಉಳಿಸಿಕೊಂಡು ಮಹಾಲಿಂಗಪುರ ತಾಲೂಕಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ಆರಂಭಿಸಲಾಯಿತು.

ಅಭೂತಪೂರ್ವ ಬೆಂಬಲ :

ಕಳೆದ ಏಪ್ರೀಲ್ 14ರಂದು ಪ್ರಾರಂಭವಾದ ತಾಲೂಕು ಹೋರಾಟಕ್ಕೆ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 14 ಗ್ರಾಮಗಳ ಜನತೆಯು ಪಕ್ಷಾತೀತ ಮತ್ತು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪಕ್ಷಗಳ ಹಾಲಿ, ಮಾಜಿ ಶಾಸಕರು, ಸಚಿವರು, ಪಕ್ಷದ ಮುಖಂಡರು ಹೋರಾಟ ವೇದಿಕೆಗೆ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಕಳೆದ ಸೆಪ್ಟೆಂಬರ್ 15ರಂದು ತಾಲೂಕು ಹಾರಾಟ ವೇದಿಕೆ ಹಾಗೂ ಸರ್ವಪಕ್ಷಗಳ ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲೇ ಸಿಹಿಸುದ್ದಿ ನೀಡುವ ಭರವಸೆ ಕೊಟ್ಟಿರುವ ಕಾರಣ, ಮಹಾಲಿಂಗಪುರ ತಾಲೂಕು ಹೋರಾಟವು 200 ದಿನಗಳ ನಂತರವು ಮುಂದುವರೆಯಲಿದೆ.‌ ‌‌‌‌‌‌‌

ಜನಪ್ರತಿನಿಧಿಗಳ ಮೇಲೆ ಹೆಚ್ಚಿದ ಒತ್ತಡ :    ‌        ‌‌‌‌‌‌‌‌‌‌       ‌‌‌‌‌‌‌‌

ಈಗಾಗಲೇ ತಾಲೂಕು ಹೋರಾಟ 200 ದಿನಗಳನ್ನು ಪೂರೈಸಿದ್ದು ಮತ್ತು ಇನ್ನು 5-6 ತಿಂಗಳಲ್ಲೇ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿರುವ ಕಾರಣ, ಅಂತಿಮವಾಗಿ 2023ರ ಫೆಬ್ರುವರಿ ತಿಂಗಳಲ್ಲಿ ನಡೆಯಬಹುದಾದ ಚುನಾವನೆಯ ಬಜೆಟ್ ಅಧಿವೇಶನದಲ್ಲಿಯಾದರೂ, ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಮಹಾಲಿಂಗಪುರ ಪಟ್ಟಣವನ್ನು ಶತಾಯಗತಾಯ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕಾದ ಬಹುದೊಡ್ಡ ಜವಾಬ್ದಾರಿ, ಒತ್ತಡ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ, ಮುಧೋಳ ಶಾಸಕರು, ಸಚಿವರಾದ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ ಅವರ ಹೆಗಲ ಮೇಲಿದೆ.

-ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.