ಮಹಾಲಿಂಗಪುರ: ಅಕ್ರಮ ನಾಡಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಬಂಧನ
Team Udayavani, Jul 27, 2023, 10:05 PM IST
ಮಹಾಲಿಂಗಪುರ: ಸರ್ಕಾರದ ಪರವಾಣಿಗೆ ಇಲ್ಲದೇ ಅಕ್ರಮವಾಗಿ ನಾಡಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಮನೆ ಮೇಲೆ, ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿ ನಾಡಪಿಸ್ತೂಲ್ ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸುವಲ್ಲಿ ಮಹಾಲಿಂಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಮೀಪದ ಮಾರಾಪೂರ ಗ್ರಾಮದ ಅವ್ವಪ್ಪ ಹಣಮಂತ ತಂಬೂರಿ ಬಂಧಿತ ವ್ಯಕ್ತಿ. ಸರ್ಕಾರದ ಪರವಾನಿಗೆ ಇಲ್ಲದೇ ತನ್ನ ಮನೆಯಲ್ಲಿ ಕಂಟ್ರಿ ಪಿಸ್ತೂಲ್ ಇಟ್ಟುಕೊಂಡಿದ್ದ ಖಚಿತ ಮಾಹಿತಿಯಂತೆ ಬಾಗಲಕೋಟೆ ಎಸ್ಪಿ, ಜಮಖಂಡಿ ಡಿವೈಎಸ್ಪಿ ಶಾಂತವೀರ.ಇ ಹಾಗು ಬನಹಟ್ಟಿ ಸಿಪಿಆಯ್ ಆಯ್.ಎಂ.ಮಠಪತಿ ಅವರ ಮಾರ್ಗದರ್ಶನದಲ್ಲಿ ಮಹಾಲಿಂಗಪುರ ಠಾಣಾಧಿಕಾರಿ ಪ್ರವೀಣ ಬೀಳಗಿ ಅವರು ತಮ್ಮ ಸಿಬಂದಿಯೊಂದಿಗೆ ಮಾರಾಪೂರ ಗ್ರಾಮದಲ್ಲಿನ ಅವ್ವಪ್ಪ ಹಣಮಂತ ತಂಬೂರಿ ಮನೆಯ ಮೇಲೆ ದಾಳಿ ಮಾಡಿ, ವಿಚಾರಣೆಗೆ ಒಳಪಡಿಸಿದಾಗ 3-4 ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ರಾಯಭಾಗ ರೇಲ್ವೆ ಸ್ಷೇಷನ್ ಹೊರಗೆ ಯಾರೋ ಒಬ್ಬನಿಂದ ಖರೀದಿ ಮಾಡಿಕೊಂಡು ಬಂದಿರುವದಾಗಿ ತಿಳಿದು ಬಂದಿದೆ.
ದಾಳಿಯ ವೇಳೆ ಅವ್ವಪ್ಪ ಹಣಮಂತ ತಂಬೂರಿ ಮನೆಯಲ್ಲಿದ್ದ ಒಂದು ನಾಡ ಪಿಸ್ತೂಲ್, ಎರಡು ಜೀವಂತ ಗುಂಡುಗಳು, ಒಂದು ಏರಗನ್ ನಮೂನೆಯದು, ಒಂದು ಪೋಲ್ಡೇಬಲ್ ಲಾಂಗ್, ಕಟ್ಟಿಗೆ ಹಿಡಿಕೆ ಇರುವ ಮತ್ತೊಂದು ಲಾಂಗ್, ಪಿಸ್ತೂಲು ಹಾಗೂ ಗುಂಡುಗಳನ್ನು ಹಾಕಿಟ್ಟ ಪ್ಲಾಸ್ಟಿಕ್ ಚೀಲ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ನಾಡಪಿಸ್ತೂಲ್ ಹೊಂದಿದ ಆರೋಪಿ ಬಂಧನ ಮತ್ತು ಪಿಸ್ತೂಲ್ ವಶಪಡಿಸಿಕೊಂಡ ಕಾರ್ಯಾಚರಣೆಯಲ್ಲಿ ಮಹಾಲಿಂಗಪುರ ಠಾಣಾಧಿಕಾರಿ ಪ್ರವೀಣ ಬೀಳಗಿ ಅವರ ಜೊತೆಗೆ ಎಎಸ್ಆಯ್ ಎಸ್.ಬಿ.ಜೈನರ್, ಜೆ.ಜಿ.ಪಾಟೀಲ, ಎಸ್.ಡಿ.ಬಾರಿಗಿಡದ, ಆರ್.ಎನ್.ತೋಳಮಟ್ಟಿ, ಬಿ.ಜಿ.ದೇಸಾಯಿ, ಬಿ.ಪಿ.ಹಡಪದ, ಎಂ.ಎಸ್.ಕನಶೆಟ್ಟಿ ಅವರ ಕಾರ್ಯವನ್ನು ಮೆಚ್ಚಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.