MLA Siddu Savadi; ಸಾರ್ವಜನಿಕರ ಸಹಭಾಗಿತ್ವದಿಂದ ಸರಕಾರದ ಯೋಜನೆಗಳು ಯಶಸ್ವಿ

ಹಿಪ್ಪರಗಿ ಜಲಾಶಯ ಹಿನ್ನೀರನಲ್ಲಿ 4 ಲಕ್ಷ ಮೀನು ಮರಿ ಬೀಡುವ ಕಾರ್ಯಕ್ರಮ

Team Udayavani, Dec 24, 2023, 5:28 PM IST

MLA Siddu Savadi; ಸಾರ್ವಜನಿಕರ ಸಹಭಾಗಿತ್ವದಿಂದ ಸರಕಾರದ ಯೋಜನೆಗಳು ಯಶಸ್ವಿ

ರಬಕವಿ ಬನಹಟ್ಟಿ : ಸರ್ಕಾರದ ಯಾವುದೇ ಕೆಲಸಗಳಿದ್ದರೂ ಅದಕ್ಕೆ ಸಾರ್ವಜನಿಕರ ಸಹಭಾಗಿತ್ವವಿರಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯವೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.

ತಾಲೂಕಿನ ಹಿಪ್ಪರಗಿ ಜಲಾಶಯದ ಹಿನ್ನೀರಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಮೀನು ಮರಿ ಬಿಡುವ ಕಾರ್ಯಕ್ರಮದಲ್ಲಿ ಹಿಪ್ಪರಗಿ ಜಲಾಶಯದ ಹಿನ್ನೀರಿಗೆ ಮೀನು ಮರಿ ಬಿಟ್ಟು ಅವರು ಮಾತನಾಡಿದರು.

ಹಿಪ್ಪರಗಿ ಜಲಾಶಯ ಹಿನ್ನೀರ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಿರಂತರವಾಗಿ ನಡೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಮೀನುಗಳ ಸಂಖ್ಯೆ ಕಡಿಮೆಯಾಗಿತ್ತು. ಅಲ್ಲದೆ ಹರಿಯುವ ನೀರಿನಲ್ಲಿ ಮಾತ್ರ ಮೀನಿನ ಸಂತಾನೋತ್ಪತ್ತಿಯಾಗುತ್ತದೆ. ಹಿನ್ನೀರಿನಲ್ಲಿ ಮೀನಿನ ಸಂತಾನೋತ್ಪತ್ತಿ ಅಷ್ಟೊಂದು ಪ್ರಮಾಣದಲ್ಲಿ ಆಗಲ್ಲ. ಹೀಗಾಗಿ ಇಲಾಖೆಯಿಂದ ಬೇರಡೆಯಿಂದ ಮೀನಿನ ಮರಿಗಳನ್ನು ತಂದು ಬಿಡಲಾಗುತ್ತಿದೆ ಎಂದರು.

ಮೀನುಗಾರಿಕೆ ಇಲಾಖೆಯಿಂದ ಒಟ್ಟು 4 ಲಕ್ಷ ಮರಿಗಳನ್ನು ತರಲಾಗಿದ್ದು, ಪ್ರತಿಯೊಂದು ಮರಿಗಳು 1 ಇಂಚಿನ ಗಾತ್ರದಿಂದ 4ಇಂಚಿನವರೆಗೆ ಇದ್ದು 3 ರಿಂದ ನಾಲ್ಕು ತಿಂಗಳಲ್ಲಿ ಸುಮಾರು 6 ರಿಂದ 5 ಕೆಜಿ ತೂಕದವರೆಗೆ ಈ ಮರಿಗಳು ಬೆಳೆಯುತ್ತವೆ. ಇದರಿಂದ ಈ ಭಾಗದಲ್ಲಿ ಮೀನುಗಾರರು, ಮೀನು ತಿನ್ನುವವರಿಗೂ ಅನುಕೂಲವಾಗಲಿದೆ ಎಂದರು.

ಮೀನುಗಾರಿಕೆಯೂ ಈಗ ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ಜಲಾಶಯದ ಹಿನ್ನೀರಿನಲ್ಲಿ ಮೀನಿನ ಮರಿ ಬಿಡುವದರಿಂದ ಈ ಭಾಗದಲ್ಲಿ ಮೀನುಗಳ ಸಂಖ್ಯೆ ವೃದ್ಧಿಯಾಗಲಿದೆ. ಹಿಪ್ಪರಗಿ ಜಲಾಶಯದ ಹಿನ್ನೀರಿನ ಮೀನುಗಳಿಗೆ ಬೇಡಿಕೆಯೂ ಹೆಚ್ಚಿದೆ ಎಂದರು.

ಆನಂದ ಕಂಪು, ಗಂಗಯ್ಯ ಕುರಣಿ, ಚನ್ನಯ್ಯ ಮಠಪತಿ, ಮಹಾದೇವ ನಾಯಕ, ವೆಂಕಟೇಶ ಕೌಜಲಗಿ, ವರ್ಧಮಾನ ಕೋರಿ, ಪಾಂಡು ಸಾಲ್ಗುಡಿ, ಮುತ್ತುರಾಜ ಶಿರಹಟ್ಟಿ ಹಾಗು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.