ಸರ್ಕಾರದಿಂದ ಯೋಜನೆಗಳ ಹೊಳೆಯೇ ಹರಿಯುತ್ತಿದೆ: ಸವದಿ


Team Udayavani, Feb 26, 2023, 6:09 PM IST

tdy-21

ರಬಕವಿ-ಬನಹಟ್ಟಿ: ಸಸಾಲಟ್ಟಿ ಏತ ನೀರಾವರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಾರಣ. ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳೊಂದಿಗೆ ಕ್ಷೇತ್ರದ ಚಿತ್ರಣ ಬದಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಾಕಷ್ಟು ಅನುದಾನ ನೀಡುವ ಮೂಲಕ ಕ್ಷೇತ್ರ ಅಭಿವೃದ್ಧಿಗೆ ಸಹಕರಿಸಿ ಯೋಜನೆಗಳ ಹೊಳೆಯೇ ಹರಿಸಿದ್ದಾರೆಂದು ತೇರದಾಳ ಶಾಸಕ ಸಿದ್ದು ಸವದಿ ಪ್ರಶಂಸೆ ವ್ಯಕ್ತಪಡಿಸಿದರು.

ಅವರು ಭಾನುವಾರ ಬನಹಟ್ಟಿಯ ಎಸ್‌ಆರ್‌ಎ ಮೈದಾನಲ್ಲಿ ನಡೆದ ಸಸಾಲಟ್ಟಿ ಏತ ನೀರಾವರಿ ಶಂಕು ಸ್ಥಾಪನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಸ್ತೆಗಾಗಿ ಕ್ಷೇತ್ರದಲ್ಲಿ 600 ಕೋಟಿ ರೂ.ಗಳಷ್ಟು ಅನುದಾನ ಬಳಕೆಯಾಗಿದೆ. 41 ಕೋಟಿ ರೂ.ಗಳಲ್ಲಿ ಕಿನಾಲ್ ರಸ್ತೆ, 60 ಕೋಟಿ ರೂ.ಗಳಲ್ಲಿ ರೈತರ ಜಮೀನು ರಸ್ತೆ ಸುಧಾರಣೆ, 180 ಕೋಟಿ ರೂ.ಗಳಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ 187 ಕಾಮಗಾರಿ ಮೂಲಕ ನೇಕಾರ ಕ್ಷೇತ್ರವಾಗಿರುವ ತೇರದಾಳಕ್ಕೆ ನೇಕಾರ ಸಮ್ಮಾನ್ ಯೋಜನೆಯಡಿ 60 ಕೋಟಿ ರೂ.ಗಳಷ್ಟು 1.5 ಲಕ್ಷ ನೇಕಾರರಿಗೆ ತಲಾ 5 ಸಾವಿರ ರೂ.ಗಳಷ್ಟು ಖಾತೆಗೆ ನೇರವಾಗಿ ಜಮೆಯಾಗಿದೆ ಎಂದರು.

ರಬಕವಿ ನಗರದ ಐಟಿಐ ಕಾಲೇಜಿನ ಟ್ರೇನಿಂಗ್ ಸೆಂಟರ್ ಕಟ್ಟಡ ಮತ್ತು ಮೂಲಭೂತ ಸೌಕರ್ಯಕ್ಕಾಗಿ ರೂ. 30.00 ಕೋಟಿ ಅನುದಾನ ಸೇರಿದಂತೆ ತೇರದಾಳ ನಗರದಲ್ಲಿ ರೂ. 20.00 ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣ, ರೂ. 22.46 ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಹಾಲಿಂಗಪೂರ (ತೇರದಾಳ) ಕಟ್ಟಡ ನಿರ್ಮಾಣ, ಮಹಾಲಿಂಗಪೂರ ತೇರದಾಳ ವಿದ್ಯಾರ್ಥಿ ವಸತಿ ನಿಲಯಗಳು, ಶಾಲಾಕಾಲೇಜುಗಳ ಕಟ್ಟಡಗಳು ಸೇರಿದಂತೆ ಸುಮಾರು 80.70 ಕೋಟಿ ವೆಚ್ಚದಲ್ಲಿ 309 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಹಾಗೂ ರಬಕವಿ ಮತ್ತು ಮಹಾಲಿಂಗಪೂರ ನಗರದಲ್ಲಿ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯ ಮುಂಜೂರು, ಚಿಮ್ಮಡ, ಕುಲಹಳ್ಳಿ, ಢವಳೇಶ್ವರ,  ಪದವಿ ಪೂರ್ವ ಕಾಲೇಜುಗಳು, ಯರಗಟ್ಟಿ ಮತ್ತು ಕಲಹಳ್ಳಿ ಪ್ರೌಢ ಶಾಲೆಗಳನ್ನು ಮುಂಜೂರಿಸಲಾಗಿದೆ. ರಾಜ್ಯ ಸರ್ಕಾರವು ಬಾಗಲಕೋಟೆ ಜಿಲ್ಲೆಗೆ ವಿಶ್ವ ವಿದ್ಯಾಲಯವನ್ನು ಘೋಷಣೆ ಮಾಡಿದ ಪ್ರಯುಕ್ತ ತೇರದಾಳ ಮತಕ್ಷೇತ್ರದ ಪಕ್ಕದಲ್ಲೇ ಇರುವ ಜಮಖಂಡಿ ನಗರದಲ್ಲಿ ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹಾಕಿ ಯಶಸ್ವಿಯಾಗಿರುತ್ತೇನೆ. ಇದರಿಂದ ತೇರದಾಳ ಮತಕ್ಷೇತ್ರದ ವಿದ್ಯಾರ್ಥಿಗಳು ಸ್ಥಳಿಯವಾಗಿ ಉನ್ನತ ವ್ಯಾಸಂಗ ಮಾಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಅಲ್ಲದೆ ಉಚಿತ ವಿದ್ಯುತ್, 2 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೇಕಾರರಿಗೆ ಸಹಕಾರಿಯಾಗಿದ್ದು, ಇದೀಗ ಜವಳಿ ಪಾರ್ಕ್ ಜೊತೆಗೆ ನೇಕಾರರಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಅತ್ಯಂತ ಸ್ವಾಗತಾರ್ಹ ಎಂದು ಸವದಿ ಸಂತಸಪಟ್ಟರು.

ಕ್ಷೇತ್ರಾದ್ಯಂತ ದೇವಸ್ಥಾನ ಹಾಗು ಸಮುದಾಯ ಭವನಗಳ ನಿರ್ಮಾಣಕ್ಕೆ 37.5 ಕೋಟಿ ರೂ.ಗಳಷ್ಟು ಹಣ ಬಿಡುಗಡೆಗೊಳಿಸಿ ಶೇ.೯೦ ರಷ್ಟು ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ಬೊಮ್ಮಾಯಿ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ಸವದಿ ಹೇಳಿದರು.

ಮುಂದಿನ ವಾರದಲ್ಲಿ ಕುಲಹಳ್ಳಿ-ಹುನ್ನೂರ ಹಾಗು ವೆಂಕಟೇಶ್ವರ ಏತ ನೀರಾವರಿಗೆ ಸಚಿವ ಗೋವಿಂದ ಕಾರಜೋಳರಿಂದ ಉದ್ಘಾಟನೆಗೊಳ್ಳಲಿದೆ ಎಂದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.