Mudhol: ಹೊಟ್ಟೆ ತುಂಬಿಸದ ಕಾಳಜಿ‌ ಕೇಂದ್ರ… ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ

ಮಿರ್ಜಿ ಗ್ರಾಮದ ಕಾಳಜಿ ಕೇಂದ್ರದಲ್ಲಿ‌ ಸಿಲಿಂಡರ್ ಪತ್ತೆ

Team Udayavani, Aug 1, 2024, 12:56 PM IST

Mudhol: ಹೊಟ್ಟೆ ತುಂಬಿಸದ ಕಾಳಜಿ‌ ಕೇಂದ್ರ… ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ

ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿ‌ನ ಆಹಾರ ತಯಾರಿಸುತ್ತಿದ್ದಾರೆ.

ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ‌ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ ಮಾತ್ರ ರಟ್ಟಿ‌ಗಟ್ಟಿಯಾಗುತ್ತದೆ. ಆದರೆ ಸದ್ಯ ಕಾಳಜಿ‌‌ ಕೇಂದ್ರದಲ್ಲಿ ಉದಯವಾಣಿ ತಂಡ ರಿಯಾಲಿಟಿ ಚೆಕ್ ಗಾಗಿ ತೆರಳಿದಾಗ ಕೇವಲ ಎರಡು ಚಪಾತಿ ನೀಡುತ್ತದ್ದಾರೆ ಎಂಬ ಸಂತ್ರಸ್ಥರು ಅಸಾಹಯಕತೆಯ ಮಾತುಗಳು ಕೇಳಿಬಂದವು.

ಎರಡು ಚಾಪತಿಯೊಂದಿಗೆ ಹೊಟ್ಟೆ ತುಂಬಾ ಅನ್ನ ನೀಡುತ್ತಾರೆ ಆದರೆ ನಮಗೆ ಅನ್ನ ಒಗ್ಗಲ್ಲ. ಕೃಷಿ ಕಾರ್ಯದಲ್ಲಿ ತೊಡಗುವುದರಿಂದ ಮತ್ತೆ ಹಸಿವಾಗುತ್ತದೆ‌. ಅದಕ್ಕೆ ಗ್ಯಾಸ್ ನಲ್ಲಿ ನಮಗೆ ನೇಕಾದ ಆಹಾರ ತಯಾರಿಸಿಕೊಳ್ಳುತ್ತೇವೆ ಎನ್ನುತ್ತಾರೆ ಸಂತ್ರಸ್ಥರು.

ಬೆಳಗ್ಗೆ ಉಪಹಾರ, ಮಧ್ಯಾಹ್ನ ಎರಡು ಚಪಾತಿ ಅನ್ನ ಸಾಂಬರ್ ನೀಡುತ್ತಿದ್ದಾರೆ ಸಂಜೆಯೂ ಅದೇ ರೀತಿಯ ಆಹಾರ ಕೊಡುತ್ತಾರೆ. ಹೊಲಮನೆಯಲ್ಲಿ‌ ಕೃಷಿ‌ಕಾರ್ಯ ಮಾಡುವ ನಮಗೆ ಇಲ್ಲಿನ ಆಹಾರ ಹೊಟ್ಟೆ ತುಂಬಿಸುತ್ತಿಲ್ಲ ಆದ್ದರಿಂದ ನಮಗೆ ನೀಡಿರುವ ಕೊಠಡಿಯಲ್ಲಿಯೇ ಗ್ಯಾಸ್ ನಿಂದ ನಮಗೆ ಬೇಕಾದ ಹೆಚ್ಚಿನ ಆಹಾರ ತಯಾರಿಸಿಕೊಳ್ಳುತ್ತೇವೆ ಎಂದು ಧೈರ್ಯದಿಂದ ನುಡಿಯುತ್ತಾರೆ ಸಂತ್ರಸ್ಥರು.

ಮಕ್ಕಳಿಗಾಗಿ‌ ವಿಷೇಶ ಆಹಾರ ಪದ್ದತಿ : ಇನ್ನು ಕಾಳಜಿ‌ ಕೇಂದ್ರದಲ್ಲಿನ ಎಲ್ಲ ಜನರಿಗೂ ಏಕರೂಪದ ಆಹಾರ ನೀಡಲಾಗುತ್ತಿದೆ. ಆದರೆ ಅಲ್ಲಿನ ಮಕ್ಕಳು ಹಾಗೂ ಕೂಸುಗಳಿಗೆ ಇಂತಹ ಆಹಾರ ಒಗ್ಗುತ್ತಿಲ್ಲ. ಇದರಿಂದ ಮಕ್ಕಳ ತರಹೇವಾರಿ‌ ಅಡುಗೆಗಾಗಿ‌ ಒಲೆ ಬಳಕೆ ಮಾಡಿಕೊಳ್ಳುತ್ತೇವೆ ಎನ್ನುತಾರೆ‌ ಅಲ್ಲಿನ ಜನರು.

ಕೃತಜ್ಞಾಭಾವದಲ್ಲಿ ಸಂತ್ರಸ್ಥರು : ಇಷ್ಟೆಲ್ಲ ಸಮಸ್ಯೆಗಳ‌ ನಡುವೆಯೂ ಕಾಳಜಿ ಕೇಂದ್ರದಲ್ಲಿ ವಾಸಿಸುವ ಜನರು ಮಾತ್ರ ಅಧಿಕಾರಿಗಳಿಗೆ ಕೃತಜ್ಞತೆಭಾವದಿಂದ ನೋಡುತ್ತಿದ್ದಾರೆ. ಮುಳುಗುವವನಿಗೆ ಹುಲ್ಲುಕಡ್ಡಿ ಆಸರೆಯೆಂಬಂತೆ ನಾವು ಅಸಹಾಯಕರಾಗದಾಗ ನಮಗೆ ಆಸರೆ ನೀಡಿದ್ದಾರೆ. ಇರುವುದರಲ್ಲಿಯೇ ತೃಪ್ತರಾಗುತ್ತೇವೆ ಎನ್ನುವ ಮಾತುಗಳನ್ನಾಡುತ್ತಾರೆ. ಆದರೆ ಕೆಲ ಅಧಿಕಾರಿ ವರ್ಗ ಮಾತ್ರ ಸಂತ್ರಸ್ಥರ ಅಸಹಾಯಕತೆಯನ್ನೆ ಬಂಡವಾಳವನ್ನಾಗಿಸಿಕೊಂಡಂತೆ ಕಾಣುತ್ತಿದೆ.

ಹಸುಗೂಸು ಎರೆಯಲು ನೆರೆಮನೆಯ ನೆರವು : ಮಿರ್ಜಿಯ ಒಂದು ಕಾಳಜಿ ಕೇಂದ್ರಲ್ಲಿರುವ ನಾಲ್ಕು ತಿಂಗಳ‌ ಹಸುಗೂಸು ಎರೆಯಲು‌ ಬಿಸಿ ನೀರು ಸಿಗದೆ ಪಕ್ಕದ ಹೊಲದಲ್ಲಿನ ನೆರೆ ಮನೆಯಲ್ಲಿ‌ನ ನೀರು ಬಳಸುವಂತಾಗಿದೆ. ಕಾಳಜಿ ಕೇಂದ್ರಲ್ಲಿನ ಸಂತ್ರಸ್ಥರಿಗೆ ಸಣ್ಣಮಟ್ಟದ ಅನಾರೋಗ್ಯ ಬಂದರೂ ಕುಡಿಯಲು ಬಿಸಿ ನೀರು ದೊರೆಯುವುದಿಲ್ಲ. ಅದಕ್ಕಾಗಿಯೂ ಗ್ಯಾಸ್ ಒಲೆ ಬಳಕೆ ಮಾಡುವುದಾಗಿ ಹೇಳುತ್ತಾರೆ ಸಂತ್ರಸ್ಥರು.

ಪ್ರವಾಹದ ಪ್ರಕೋಪಕ್ಕೆ ಸಿಲುಕಿ‌‌ ಮನೆಮಠ ಕಳೆದುಕೊಂಡು ತಮ್ಮ ಸ್ವಾಭಿಮಾನವನ್ನು ಬದಿಗೊತ್ತಿ ಸರ್ಕಾರದ ನೆರವು ಅರಸಿ ಬಂದವರಿಗೆ ಅಷ್ಟೇ ಅಕ್ಕರೆಯಿಂದ ನೋಡಿಕೊಳ್ಳುವುದು ಅಧಿಕಾರಿ ವರ್ಗದ ಕರ್ತವ್ಯ ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಂತ್ರಸ್ಥರಿಗೆ ಅಗತ್ಯ ನೆರವು ನೀಡಬೇಕು ಎಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.

ಕಾಳಜಿ ಕೇಂದ್ರದಲ್ಲಿ‌‌ ಸಂತ್ರಸ್ಥರಿಗೆ ಇಂತಿಷ್ಟೆ ಪ್ರಮಾಣದಲ್ಲಿ ಆಹಾರ ನೀಡಬೇಕು ಎನ್ನುವ ಮಾರ್ಗೋಪಾಯಗಳಿವೆ. ಆದರೂ ಹೆಚ್ಚಿನ ಚಪಾತಿ ಬೇಕಾದರೆ ಕೇಳಿ ಪಡೆದುಕೊಳ್ಳಬಹದು. ಮಿರ್ಜಿ ಕಾಳಜಿ ಕೇಂದ್ರದಲ್ಲಿ ಆಹಾರ ಕ್ರಮದ ಬಗ್ಗೆ ನನ್ನ ಗಮನಕ್ಕಿಲ್ಲ ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ.
– ಶ್ವೇತಾ ಬೀಡಿಕರ ಉಪವಿಭಾಗಾಧಿಕಾರಿ ಜಮಖಂಡಿ

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

puಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.