Escape; ಸೆರೆಸಿಕ್ಕ ಚಿರತೆ ತಪ್ಪಿಸಿಕೊಂಡಿತು!!: ಮತ್ತೆ ಬೋನಿಗೆ
Team Udayavani, Jul 22, 2024, 8:20 PM IST
ಮುಧೋಳ : ಸಮೀಪದ ಕಿಶೋರಿ ಭಾಗದಲ್ಲಿ ಕೆಲದಿನಗಳಿಂದ ಹಿಂದೆ ಓಡಾಡುತ್ತ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬಂದಿ ಸೋಮವಾರ ಯಶಸ್ವಿಯಾದರು. ಭಾರೀ ಕಾರ್ಯಾಚರಣೆ ನಡೆಸಿದ ಬಳಿಕ ಜನರು ನಿಟ್ಟುಸಿರು ಬಿಡಬೇಕು ಅನ್ನುವಷ್ಟರಲ್ಲಿ ಬೋನಿನಿಂದ ತಪ್ಪಿಸಿಕೊಂಡಿತು.
ಕಿಶೋರಿ ಹತ್ತಿರದ ಉಳ್ಳಾಗಡ್ಡಿ ಸ್ಟಾಪ್ ಹತ್ತಿರದ ಕಬ್ಬಿನ ಗದ್ದೆಯಲ್ಲಿದ್ದ ಚಿರತೆಯನ್ನು ಸಾರ್ವಜನಿಕರ ಸಹಕಾರದಿಂದ ಅರಣ್ಯ ಇಲಾಖೆ ಸಿಬಂದಿ ಸೆರೆಹಿಡಿದರಾದರೂ ಬೋನಿನಲ್ಲಿ ಸೂಕ್ತವಾಗಿ ಬಂಧಿಸಿಡಲಿಲ್ಲ. ಟ್ರ್ಯಾಕ್ಟರ್ ಗೆ ಏರಿಸಿ ಸುರಕ್ಷಿತ ಅರಣ್ಯಕ್ಕೆ ಬಿಡಲೆಂದು ಒಯ್ಯುತ್ತಿದ್ದಾಗ ಮತ್ತೆ ಕಬ್ಬಿನ ಗದ್ದೆಗೆ ಹಾರಿ ಪರಾರಿಯಾಯಿತು. ಮತ್ತೆ ಕಾರ್ಯಾಚರಣೆಗಿಳಿದ ರೈತರು, ಸ್ಥಳೀಯರು ಮತ್ತು ಅರಣ್ಯ ಸಿಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.
ಈಗಾಗಲೇ ಆತಂಕಕ್ಕೊಳಗಾಗಿದ್ದ ಜನತೆ ತಪ್ಪಿಸಿಕೊಂಡಾಗ ಮತ್ತಷ್ಟು ಆತಂಕಕ್ಕೊಳಗಾದರು. ಒಮ್ಮೆ ಸೆರೆ ಸಿಕ್ಕಿ ತಪ್ಪಿಸಿಕೊಂಡಿರುವ ಚಿರತೆಯನ್ನು ಮತ್ತೆ ಸೆರೆ ಹಿಡಿಯುವುದು ಮತ್ತಷ್ಟು ಸವಾಲಾಗಿ ಪರಿಣಮಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.