Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
ಕಂಬೋಗಿ ಮೇಲಿನ ಸ್ವಯಂಪ್ರೇರಿತ ಪ್ರಕರಣಕ್ಕೆ ಖಂಡನೆ
Team Udayavani, Oct 1, 2024, 9:39 PM IST
ಮುಧೋಳ: ಇತ್ತೀಚೆಗೆ ನಗರದಲ್ಲಿ ಹಿಂದೂ ಒಕ್ಕೂಟಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ದಲಿತ ಮುಖಂಡ ಸುನೀಲ ಕಂಬೋಗಿ ಅವರು ಮಾತನಾಡಿರುವ ಭಾಷಣ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತದೆ ಎಂಬ ನೆಪವನ್ನು ಮುಂದಿಟ್ಟಕೊಂಡು ಕಂಬೋಗಿ ಅವರ ಮೇಲೆ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಕ್ರಮವನ್ನು ಹಿಂದೂ ಸಮಾಜ ಖಂಡಿಸುತ್ತದೆ ಎಂದು ಹಿಂದೂ ಪರ ಮುಖಂಡರು ತಿಳಿಸಿದ್ದಾರೆ.
ಗಣೇಶೋತ್ಸವದ ವೇಳೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಗರದಲ್ಲಿ ಭಾಷಣ ಮಾಡಿರುವ ಕ್ರಮವನ್ನು ಖಂಡಿಸಿ ಅನ್ಯಕೋಮಿನವರು ಯತ್ನಾಳರ ವಿರುದ್ದ ಪ್ರತಿಭಟನೆ ನಡೆಸಿದ್ದರು. ನಂತರ ಹಿಂದೂ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಯತ್ನಾಳರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಅನ್ಯಕೋಮಿನವರ ಪ್ರತಿಭಟನೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ದಲಿತ ಮುಖಂಡ ಸುನೀಲ ಕಂಬೋಗಿಯವರು ಪರ್ಷಿಯನ್ ದಾಳಿಕೋರ ಔರಂಗಜೇಬನ ಕುರಿತ ಇತಿಹಾಸ ತಿಳಿಸುವ ಭಾಷಣ ಮಾಡಿದ್ದರು. ಇದನ್ನೆ ನೆಪವಾಗಿಟ್ಟುಕೊಂಡ ಪೊಲೀಸರು ಕಂಬೋಗಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ದೇಶದಲ್ಲಿ ಇತಿಹಾಸದ ಬಗ್ಗೆ ಮಾತನಾಡಲು ಸರ್ವರಿಗೂ ಸಾಂವಿಧಾನಿಕ ಹಕ್ಕಿದೆ. ಓರ್ವ ದಾಳಿಕೋರನ ಬಗ್ಗೆ ಹೇಳಿದರೆ ಮತ್ತೊಂದು ಕೋಮಿಗೆ ನೋವುಂಟಾಗುತ್ತದೆ ಎಂಬ ಇಲಾಖೆ ನಿರ್ಧಾರ ಸಂವಿಧಾನಕ್ಕೆ ವಿರೋಧವಾಗಿದೆ. ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸುವುದು ಇಲಾಖೆಗೆ ಶೋಭೆ ತರುವುದಿಲ್ಲ. ಕೂಡಲೇ ಕಂಬೋಗಿ ಅವರ ಮೇಲೆ ದಾಖಲಿಸಿರುವ ಪ್ರಕಣವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಜಿಲ್ಲೆಯಾದ್ಯಂತ ಹಿಂದು ಸಂಘಟನೆಗಳ ಒಕ್ಕೂಟ ಉಗ್ರ ಹೋರಾಟ ನಡೆಸುತ್ತದೆ ಎಂದು ಹಿಂದುಪರ ಸಂಘಟನೆಗಳ ಮುಖಂಡರಾದ ಸದಾ ಜಾಧವ, ಗುರುಪಾದ ಕುಳಲಿ, ಆನಂದ ಬನ್ನೂರ, ಶಿವು ಬೆಟಗೇರಿ, ವೆಂಕಣ್ಣ ಕಳ್ಳಿಗುದ್ದಿ, ಆಕಾಶ ಪೂಜಾರಿ, ಶ್ರೀಶೈಲ ಪಾಟೀಲ, ಪುಂಡಲೀಕ ಮೋಹಿತೆ, ಪರಸು ನಿಗಡೆ, ಕೇದಾರಿ ಕದಂ ಅವರು ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.