Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
Team Udayavani, Sep 30, 2024, 12:33 PM IST
ಮುಧೋಳ : ನಗರಸಭೆ ಕಚೇರಿಯಲ್ಲಿ ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ನಿಗಧಿತ ಸಮಯಕ್ಕಿಂತ ತಡವಾಗಿ ಆಗಮಿಸಿದ ಹಿನ್ನೆಲೆ ಸುಮಾರು ಎರಡು ಗಂಟೆಗಳವರೆಗೆ ಕಾದ ಬಿಜೆಪಿ ಸದಸ್ಯರು ಸಚಿವರ ನಡೆಯನ್ನು ಖಂಡಿಸಿ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ನಗರಸಭೆ ಕಚೇರಿಯಿಂದ ಹೊರನಡೆದರು.
ಈ ಕುರಿತು ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ, ಜಿಲ್ಲಾ ಉಸ್ತುವಾರಿ ಸಚಿವರು ನಿಗಧಿತ ಸಮಯಕ್ಕೆ ಸಭೆಗೆ ಆಗಮಿಸುವುದಿಲ್ಲ. ಈ ಬಗ್ಗೆ ನಾವು ಅಧಿಕಾರಿಗಳನ್ನು ಪ್ರಶ್ನಿಸಿದರೆ, ಉಸ್ತುವಾರಿ ಸಚಿವರು ಆಗಮಿಸುವವರೆಗೆ ಸಾಮಾನ್ಯ ಸಭೆ ನಡೆಸುವುದಿಲ್ಲ ಎಂದು ತಿಳಿಸುತ್ತಾರೆ. ಸಾರ್ವಜನಿಕರ ಸಮಸ್ಯೆ ಕುರಿತು ಚರ್ಚಿಸಬೇಕಾದ ಸಭೆಯ ಗಂಭಿರತೆ ಅರಿಯದ ಸಚಿವರು ತಮಗೆ ಮನಸ್ಸಿಗೆ ಬಂದಾಗ ಸಭೆಗೆ ಆಗಮಿಸುತ್ತಾರೆ. ಸಚಿವರ ನಡೆಯಿಂದ ಸಾಮಾನ್ಯ ಸಭೆಯಲ್ಲಿ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾವು ಸಭೆಯನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದರು.
ನಗರಸಭೆ ಸದಸ್ಯರಿಗೆ ಒಂದುವಾರಕ್ಕಿಂತ ಮುಂಚೆಯೇ ಸಾಮಾನ್ಯ ಸಭೆ ನಡೆಯುವ ಬಗ್ಗೆ ಲಿಖಿತವಾಗಿ ಮಾಹಿತಿ ನೀಡಲಾಗಿದೆ ಆದರೂ ಸಚಿವರೇ ಸಭೆಗೆ ತಡವಾಗಿ ಆಗಮಿಸುತ್ತಿರುವುದು ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯರಾದ ಕುಮಾರ ಪಮ್ಮಾರ, ಮಂಜು ಮಾನೆ, ಸ್ವಾತಿ ಕುಲಕರ್ಣಿ, ಲಕ್ಷ್ಮಿ ದಾಸರ, ಸುನೀಲ ನಿಂಬಾಳ್ಕರ ಸೇರಿದಂತೆ ಬಿಜೆಪಿ ಸಧಸ್ಯರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.
ಇದನ್ನೂ ಓದಿ: Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.