Mudhol:ಯಾದವಾಡ ಸೇತುವೆ ಜಲಾವೃತ, ಗ್ರಾಮಗಳಿಗೆ ನುಗ್ಗಿದ ನೀರು;ಸಂತ್ರಸ್ಥರಲ್ಲಿ ಹೆಚ್ಚಿದ ಆತಂಕ
Team Udayavani, Jul 28, 2024, 11:37 AM IST
ಮುಧೋಳ: ಘಟಪ್ರಭಾ ನದಿ ಪ್ರವಾಹದ ಅಬ್ಬರಕ್ಕೆ ಮುಧೋಳ-ಯಾದವಾಡ ಸೇತುವೆ ಜಲಾವೃತಗೊಂಡಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಜು.27ರ ಶನಿವಾರ ಘಟಪ್ರಭಾ ನದಿಗೆ 80,000 ಕ್ಯುಸೆಕ್ ನೀರು ಹರಿದು ಬಿಡಲಾಗಿತ್ತು. ನದಿ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡ ಹಿನ್ನೆಲೆ ಶನಿವಾರ ರಾತ್ರಿ ಸೇತುವೆ ಜಲಾವೃತಗೊಂಡಿದೆ.
ಯಾದವಾಡ-ಮುಧೋಳ ಸೇತುವೆ ಜಲಾವೃತಗೊಂಡಿರುವುದರಿಂದ ಯಾದವಾಡ, ಮಿರ್ಜಿ, ಒಂಟಗೋಡಿ, ಉತ್ತೂರ, ಜಾಲಿಬೇರಿ, ರಂಜಣಗಿ ಸೇರಿದಂತೆ 15ಕ್ಕೂ ಹಳ್ಳಿಗಳ ಸಂಪರ್ಕ ಸ್ಥಗಿತಗೊಂಡಿದ್ದು, ಮುಧೋಳಕ್ಕೆ ಆಗಮಿಸಬೇಕಾದರೆ ಸುತ್ತಿ ಬಳಸಿ ಮಾರ್ಗವನ್ನು ಬಳಕೆ ಮಾಡಬೇಕಾಗಿದೆ.
ಗ್ರಾಮಗಳಿಗೆ ನುಗ್ಗಿದ ನೀರು; ಸಂತ್ರಸ್ಥರಲ್ಲಿ ಹೆಚ್ಚಿದ ಆತಂಕ
ಮುಧೋಳ: ಘಟಪ್ರಭೆಯ ರೌದ್ರನರ್ತನಕ್ಕೆ ತಾಲೂಕಿನ ಗ್ರಾಮೀಣ ಭಾಗದ ಜನರ ಜೀವನ ಅಯೋಮಯವಾಗುತ್ತಿದೆ.
ಇಲ್ಲಿಯವರೆಗೆ ಗ್ರಾಮದ ಸರಹದ್ದಿನಲ್ಲಿ ರೌದ್ರನರ್ತನ ತೋರುತ್ತಿದ್ದ ನದಿ ನೀರು ಜು.27ರ ಶನಿವಾರ ರಾತ್ರಿ ಹಲವು ಗ್ರಾಮಗಳಿಗೆ ನುಗ್ಗುವ ಮೂಲಕ ಅವಾಂತರ ಸೃಷ್ಟಿಸಿದೆ.
ತಾಲೂಕಿನ ಮಿರ್ಜಿ, ಮಳಲಿ ಗ್ರಾಮಗಳಿಗೆ ನುಗ್ಗಿರುವ ನೀರು ಹೆಚ್ಚಿನ ಆತಂಕ ಸೃಷ್ಟಿಸಿದೆ. ನದಿ ನೀರಿನಿಂದ ಮನೆಮಠ ತೊರೆದಿರುವ ಗ್ರಾಮದ ಹಲವು ಕುಟುಂಬಗಳು ಜಿಲ್ಲಾಡಳಿತ ನಿರ್ಮಿಸಿರುವ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿವೆ.
ನದಿ ನೀರಿನ ಮಟ್ಟ ಇನ್ನೂ ಹೆಚ್ಚಾಗಲಿದ್ದು, ಪ್ರವಾಹ ತಡೆಗೆ ಜಿಲ್ಲಾಡಳಿತ ಹಗಳಿರುಳು ಶ್ರಮಿಸುತ್ತಿದೆ. ಇಂದು (ಜು.28ರ ಭಾನುವಾರ) ಸಂಜೆ ಇನ್ನಷ್ಟು ಗ್ರಾಮಗಳಿಗೆ ನೀರು ಸುತ್ತುವರಿಯುವ ಆತಂಕವಿದ್ದು ಮುಂಜಾಗೃತ ಕ್ರಮವಾಗಿ ಸಂತ್ರಸ್ಥರನ್ನು ಕಾಳಜಿ ಕೇಂದ್ರಗಳತ್ತ ಕರೆದ್ಯೊಯುವ ಕೆಲಸ ಭರದಿಂದ ಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು
Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.