ಮುಧೋಳ: ಅಪಘಾತಕ್ಕೆ ಆಹ್ವಾನ ನೀಡುವ ಜಾಲರಿ

ಎರಡೂ ಬದಿ ಓಡಾಡುವ ವಾಹನಗಳು ತೀರಾ ಹತ್ತಿರ ಬರುವವರೆಗೆ ಕಾಣಿಸಲ್ಲ.

Team Udayavani, Jul 5, 2023, 5:55 PM IST

ಮುಧೋಳ: ಅಪಘಾತಕ್ಕೆ ಆಹ್ವಾನ ನೀಡುವ ಜಾಲರಿ

ಮುಧೋಳ: ನಗರದ ಪ್ರಮುಖ ರಸ್ತೆಗಳಲ್ಲಿನ ಡಿವೈಡರ್‌ ನಲ್ಲಿ ಅಳವಡಿಸಿರುವ ಕಬ್ಬಿಣದ ಜಾಲರಿಯಿಂದಾಗಿ ಹಲವಾರು ಅಪಘಾತಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಸಾರ್ವಜನಿಕರಿಗೆ ಆಕ್ರೋಶಕ್ಕೆ ಕಾರಣವಾಗಿದೆ.

ನಗರದಲ್ಲಿ ಚತುಷ್ಪಥಗಳ ಮಧ್ಯೆ ನಿರ್ಮಿಸಿರುವ ಡಿವೈಡರ್‌ನಲ್ಲಿ ಎತ್ತರದ ಕಬ್ಬಿಣದ ಜಾಲರಿ ಅಳವಡಿಸಿರುವುದರಿಂದ ರಸ್ತೆ ಎರಡೂ ಬದಿ ವಾಹನಗಳು ಸಂಚರಿಸುವುದರಿಂದ ರಸ್ತೆ ದಾಟುವ ಪಾದಚಾರಿಗಳಿಗೆ, ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗಿದೆ.

ನಗರದ ಕೆ.ಆರ್‌. ಲಕ್ಕಂ ಶಾಲೆಯಿಂದ ರನ್ನ ವೃತ್ತದವರೆಗೆ, ಮಂಡಬಸಪ್ಪನ ದೇವಸ್ಥಾನದಿಂದ ರನ್ನ ವೃತ್ತದವರೆಗೂ ಅದೇ ರೀತಿ ಬಸ್‌ ಉತ್ತೂರು ಗೇಟ್‌ ನಿಂದ ಕೃಷಿ ಇಲಾಖೆ ಕಚೇರಿವರೆಗೆ ಅಳವಡಿಸಿರುವ ಕಬ್ಬಿಣದ ಜಾಲರಿ ಗ್ಯಾಲರಿ ಎತ್ತರ ಮಟ್ಟದಲ್ಲಿ ಇರುವುದರಿಂದ ಎರಡೂ ಬದಿ ಓಡಾಡುವ ವಾಹನಗಳು ತೀರಾ ಹತ್ತಿರ ಬರುವವರೆಗೆ ಕಾಣಿಸಲ್ಲ.

ಒಂದು ಕ್ಷಣ ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ. ಇಂಗಳಗಿ ರಸ್ತೆ ಹಾಗೂ ಕೆ.ಆರ್‌. ಲಕ್ಕಂ ಶಾಲೆ ರಸ್ತೆಯ ಎರಡೂ ಬದಿಯಲ್ಲಿ ತಹಸೀಲ್ದಾರ್‌ ಕಚೇರಿ ಗೇಟ್‌ಗಳು ಇರುವುದರಿಂದ ಈ ಮಾರ್ಗದಲ್ಲಿ ಹೆಚ್ಚು ಜನಸಂದಣಿಯಿರುತ್ತದೆ. ಇದೇ ಮಾರ್ಗದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿಸಿವೆ.

ರಸ್ತೆ ಸೌಂದರ್ಯೀಕರಣಕ್ಕಾಗಿ ಕಬ್ಬಿಣದ ಜಾಲರಿ ಹಾಕಿರುವುದರಿಂದ ಅವುಗಳನ್ನು ಪೂರ್ಣ ಪ್ರಮಾಣದಲ್ಲಿ ತೆರವುಗೊಳಿಸದಿದ್ದರೂ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಸಣ್ಣಪುಟ್ಟ ರಸ್ತೆಗಳು ವಿಲೀನವಾಗುವಲ್ಲಿ ಕನಿಷ್ಠ ಮೀಟರ್‌ವರೆಗೆ ಜಾಲರಿ ತೆರವುಗೊಳಿಸಿದರೆ ಅಪಘಾತ ತಡೆಗಟ್ಟಬಹುದು. ಅದೂ ಸಾಧ್ಯವಾಗದಿದ್ದರೆ ಅಂತಹ ಕಡೆಗಳಲ್ಲಿ ರೋಡ್‌ ಹಂಪ್‌ ಹಾಕಿದರೆ ಅಪಘಾತ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ರಸ್ತೆಯಲ್ಲಿನ ಡಿವೈಡರ್‌ ನಲ್ಲಿ ಅಳವಡಿಸಿರುವ ಕಬ್ಬಿಣದ ಜಾಲರಿಯಿಂದ ಎರಡೂ ಬದಿಯಲ್ಲಿ ಓಡಾಡುವ ವಾಹನಗಳು ತೀರಾ ಹತ್ತಿರ ಬರುವವರೆಗೆ ಕಾಣಲ್ಲ. ಇದರಿಂದಾಗಿ ರಸ್ತೆ ದಾಟುವಾಗ ಹೆಚ್ಚು ತೊಂದರೆಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಪ್ರಮುಖ ಕ್ರಾಸ್‌ಗಳಲ್ಲಿ ವಾಹನದ ವೇಗ ತಗ್ಗಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಿಕೊಡಬೇಕು.
*ಅಶೋಕ ಮುತ್ತೂರ,
ವಾಹನ ಸವಾರ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kaladgi:ಜೆಸಿಬಿಚಾಲಕನ ನಿರ್ಲಕ್ಷ್ಯ ಕಾಮಗಾರಿ;ಪೈಪ್ ಲೈನ್ ಒಡೆದು ಸಾಕಷ್ಟು ಪ್ರಮಾಣದ ನೀರುಪೋಲು

Mudhol: ಕಾರು ಅಪಘಾತ… ಜಾನಪದ‌ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ

Mudhol: ಕಾರು ಅಪಘಾತ… ಜಾನಪದ‌ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.