ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ


Team Udayavani, Mar 16, 2024, 6:18 PM IST

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಉದಯವಾಣಿ ಸಮಾಚಾರ
ಮುಧೋಳ: ಕಳೆದ ತಿಂಗಳು ವಾಯವ್ಯ ರಸ್ತೆ ಸಾರಿಗೆ ನಿಮಗದಲ್ಲಿ ಕಾರ್ಯಾರಂಭ ಮಾಡಿದ್ದ ಯುಪಿಐ ವಹಿವಾಟಿನಲ್ಲಿ ಮುಧೋಳ ಘಟಕದ ಸಿಬ್ಬಂದಿ ಅದ್ವಿತೀಯ ಸಾಧನೆಗೈಯುವ ಮೂಲಕ ಸಾರ್ವಜನಿಕರಲ್ಲಿ ಯುಪಿಐ ವಹಿವಾಟಿಗೆ ಪ್ರೇರೇಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ ಒಟ್ಟು 50 ಘಟಕಗಳಲ್ಲಿ ಯುಪಿಐ ವಹಿವಾಟು ಕಾರ್ಯಾರಂಭ ಮಾಡಿದ್ದು, ಇದೀಗ ಎಲ್ಲ ಘಟಕಗಳ ವಹಿವಾಟಿನ ಮೊದಲ 10 ಸ್ಥಾನದಲ್ಲಿ ಮುಧೋಳ ಘಟಕವು ನಾಲ್ಕನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆಗೈದಿದೆ.

ಫೆ.13ರಂದು ಯುಪಿಐಯನ್ನು ಆಯ್ದ ಘಟಕಗಳಲ್ಲಿ ಕಾರ್ಯಗತಗೊಳಿಸಲಾಗಿತ್ತು. ಡಿಜಿಟಲ್‌ ಇಂಡಿಯಾ ಯೋಜನೆ ಹಾಗೂ
ನಿರ್ವಾಹಕ ಮತ್ತು ಪ್ರಯಾಣಿಕರ ಮಧ್ಯದಲ್ಲಿ ಚಿಲ್ಲರೆ ವ್ಯವಹಾರದ ಕಿರಿಕಿರಿ ತಪ್ಪಿಸುವುದು, ಕ್ಯಾಶ್‌ಲೆಸ್‌ ವ್ಯವಹಾರ ವೃದ್ಧಿಯ ಉದ್ದೇಶದಿಂದ ಆರಂಭಗೊಂಡ ಯುಪಿಐ ವಹಿವಾಟಿಗೆ ಸಾರ್ವಜನಿಕರಿಂದ ಆರಂಭದಲ್ಲಿಯೇ ಉತ್ತಮ ಸ್ಪಂದನೆ ದೊರೆಯಿತು. ಇದೀಗ ಸಾರಿಗೆ ಬಸ್‌ ಗಳಲ್ಲಿ ಒಂದು ತಿಂಗಳಿನ ಅಂತರದಲ್ಲಿ ಲಕ್ಷಾಂತರ ರೂ. ಯುಪಿಐ ವಹಿವಾಟು ನಡೆಯುತ್ತಿದೆ. ಹೀಗೆ ಆರಂಭಗೊಂಡಿರುವ ಯುಪಿಐನಿಂದ ಇದೀಗ ಮುಧೋಳ ಘಟಕ ಮಹತ್ತರ ಸಾಧನೆ ಮಾಡಿದೆ.

ಟಾಪ್‌ ಹತ್ತರಲ್ಲಿ ಜಿಲ್ಲೆಯ ಮೂರು ಘಟಕಗಳು:
ಅಧಿಕಾರಿಗಳು ನೀಡುವ ಮಾಹಿತಿ ಪ್ರಕಾರ  ಮಾ. 3ರಿಂದ ಮಾ.13ರವರೆಗಿನ ಯುಪಿಐ ವಹಿವಾಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ
ಸಾರಿಗೆ ನಿಗಮದಲ್ಲಿ ಗುರುತಿಸಿರುವ ಟಾಪ್‌ 10ರಲ್ಲಿ ಜಿಲ್ಲೆಯ ಮುಧೋಳ, ಬಾಗಲಕೋಟೆ ಹಾಗೂ ಗುಳೇದಗುಡ್ಡ ಘಟಕಗಳು ಸ್ಥಾನ ಪಡೆದುಕೊಂಡಿವೆ. ಮೊದಲ ಹತ್ತರ ಸ್ಥಾನದಲ್ಲಿ ಕ್ರಮವಾಗಿ ಗೋಕಾಕ, ಹುಬ್ಬಳ್ಳಿ-1, ಬೆಳಗಾವಿ, ಮುಧೋಳ, ಹುಬ್ಬಳ್ಳಿ-2, ಬಾಗಲಕೋಟೆ, ಬೆಟಗೇರಿ, ಗುಳೇದಗುಡ್ಡ, ಅಥಣಿ, ಸಂಕೇಶ್ವರ ಘಟಕಗಳು ಸ್ಥಾನ ಪಡೆದುಕೊಂಡಿವೆ.

ಮುಧೋಳ 4, ಬಾಗಲಕೋಟೆ 6 ಹಾಗೂ ಗುಳೇದಗುಡ್ಡ ಘಟಕ 8ನೇ ಸ್ಥಾನ ಪಡೆದುಕೊಂಡಿವೆ. ನಾಲ್ಕನೇ ಸ್ಥಾನದಲ್ಲಿರುವ
ಮುಧೋಳ ಘಟಕದ ವತಿಯಿಂದ ಒಟ್ಟು 11534 ಯುಪಿಐ ವಹಿವಾಟು ನಡೆದಿದೆ. ಒಟ್ಟು 7,67,431 ರೂ. ಸಂಗ್ರಹವಾಗಿದೆ.

ನಿರ್ವಾಹಕನ ಸಾಧನೆ: ಇನ್ನು ಯುಪಿಐ ವಹಿವಾಟಿನಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಅತಿ ಹೆಚ್ಚು ವಹಿವಾಟು
ನಡೆಸುವ ಮೂಲಕ ಮುಧೋಳ ಘಟಕದ ಡಿ.ಆರ್‌. ಬಾಗೇವಾಡಿ ವಿಶೇಷ ಸನ್ಮಾನಕ್ಕೆ ಪಾತ್ರರಾಗಿದ್ದಾರೆ. ಬಾಗೇವಾಡಿ ಮಾ. 6ರಂದು ಒಟ್ಟು 157 ಪ್ರಯಾಣಿಕರಿಂದ ಯುಪಿಐ ವಹಿವಾಟು ನಡೆಸುವ ಮೂಲಕ ಉತ್ತಮ ಕಾರ್ಯನಿರ್ವಹಿಸಿದ್ದಾರೆ.

ನಿರ್ವಾಹಕನ ಕಾರ್ಯವೈಖರಿ ಮೆಚ್ಚಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್‌ ಎಸ್‌.
ಪ್ರಶಂಸನಾ ಪತ್ರ ನೀಡುವ ಮೂಲಕ ನಿರ್ವಾಹಕನ ಬೆನ್ನುತಟ್ಟುವ ಕೆಲಸ ಮಾಡಿದ್ದಾರೆ.

ಚಿಲ್ಲರೆ ಸಮಸ್ಯೆ ಹಾಗೂ ಕ್ಯಾಶ್‌ಲೆಸ್‌ ವ್ಯವಹಾರದ ಉದ್ದೇಶದಿಂದ ಜಾರಿಗೆ ತಂದಿರುವ ಯುಪಿಐ ವ್ಯವಸ್ಥೆ ಇಂದು ಹೆಚ್ಚು ಜನಪ್ರಿಯವಾಗಿದೆ. ಈ ವಿಭಾಗದಲ್ಲಿ ಮುಧೋಳ ಘಟಕ ಸಲ್ಲಿಸುತ್ತಿರುವ ಸೇವೆ ನಮಗೆ ತೃಪ್ತಿ ತಂದಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಯುಪಿಐ ವಹಿವಾಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳುವ ಮೂಲಕ ವ್ಯವಹಾರ ಸರಳೀಕರಣ
ಮಾಡಿಕೊಳ್ಳಬೇಕು.
ಸಂಗಮೇಶ ಮಾಟೊಳ್ಳಿ, ಮುಧೋಳ ಘಟಕ ವ್ಯವಸ್ಥಾಪಕ 

ಯುಪಿಐನಿಂದ ಚಿಲ್ಲರೆ ಸಮಸ್ಯೆಗೆ ಮುಕ್ತಿ ದೊರೆತಿದೆ. ಸಾರಿಗೆ ಬಸ್‌ನಲ್ಲಿ ಆನ್‌ಲೈನ್‌ ಪೇಮೆಂಟ್‌ ಮಾಡುವ ಮೂಲಕ ಕ್ಯಾಶ್‌ಲೆಸ್‌
ವ್ಯವಹಾರವೂ ಸರಳವಾಗಿದೆ. ಬಸ್‌ನಲ್ಲಿ ಮೊದಲಿಗಿಂತ ಈಗಿನ ಪ್ರಯಾಣ ಹೆಚ್ಚು ಅನುಕೂಲವಾಗಿದೆ.
ಬಸವರಾಜ ಕೋಲೂರ,ಪ್ರಯಾಣಿಕ

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.