ರಸ್ತೆಗಿಲ್ಲ ತಡೆಗೋಡೆ: ಭಯದಲ್ಲೇ ಸಂಚಾರ


Team Udayavani, Dec 27, 2019, 2:52 PM IST

bk-tdy-1

ಕಲಾದಗಿ: ಮಹಾಪ್ರವಾಹಕ್ಕೆ ಕಿತ್ತು ಹೋಗಿದ್ದ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ಬಳಿಯ 200 ಮೀಟರ್‌ ರಸ್ತೆ ದುರಸ್ತಿ ಪೂರ್ಣಗೊಂಡಿದ್ದರೂ ರಕ್ಷಣಾ ಬ್ಯಾರಿಕೇಡ್‌ ಇಲ್ಲದೆ ವಾಹನ ಸವಾರರು ನಿತ್ಯ ಪ್ರಾಣ ಭಯದಲ್ಲೇ ಸಂಚಾರ ಮಾಡುವಂತಾಗಿದೆ.

ಮೂರು ತಾಲೂಕಿನ ಮೂವತ್ತು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕಲಾದಗಿ-ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ಬಳಿ ದಕ್ಷಿಣ ಭಾಗದ ಮಣ್ಣು ಏರು ರಸ್ತೆಗೆ ರಕ್ಷಣಾ ಬ್ಯಾರಿಕೇಡ್‌ ಅಳವಡಿಸಿಲ್ಲ. ಬಾಗಲಕೋಟೆ, ಬೀಳಗಿ, ಮುಧೋಳ ತಾಲೂಕಿನ ಹಲವು ಹಳ್ಳಿಗಳಿಗೆ ಸನಿಹ ಸಂಪರ್ಕ ರಸ್ತೆ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ರಸ್ತೆ ರೈತರಿಗೆ, ವ್ಯಾಪಾರಸ್ಥರಿಗೆ ನಿತ್ಯ ಉಪಯೋಗಿ ಸಂಚಾರ ರಸ್ತೆಯಾಗಿದೆ. ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚಾರ ಮಾಡುತ್ತಿವೆ. ಬ್ಯಾರೇಜ್‌ ಬಳಿಯ ರಸ್ತೆಗೆ ಎರಡೂ ಕಡೆ ರಕ್ಷಣಾ ಬ್ಯಾರಿಕೇಡ್‌ ಇಲ್ಲಗಳೇ ಇಲ್ಲ.

ಸವಾರರ ಆಕ್ರೋಶ: ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಉಂಟಾದ ಮಹಾಪ್ರವಾಹಕ್ಕೆ ಬ್ಯಾರೇಜ್‌ ಬಳಿಯ 200 ಮೀಟರ್‌ ರಸ್ತೆ ಸಮೇತ ಹಿಂದೆ ಅಳವಡಿಸಿದ್ದ ಕ್ರಾಸ್‌ ಬೇರಿಯರ್‌ ಕಿತ್ತು ಹೋಗಿದ್ದವು. ಪ್ರವಾಹ ಅಬ್ಬರ ಕಡಿಮೆಯಾದ ನಂತರ ತುರ್ತು ಕಾಮಗಾರಿಯಲ್ಲಿ ರಸ್ತೆ ದುರಸ್ತಿ ಮಾಡಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ರಸ್ತೆ ನಿರ್ಮಿಸಿ ನಾಲ್ಕು ತಿಂಗಳು ಕಳೆದರೂ ಇನ್ನೂ ಏರು ರಸ್ತೆಗೆ ಡಾಂಬರೀಕರಣ ಮಾಡಿಲ್ಲ, ಜೊತೆಗೆ ಸುರಕ್ಷತಾ ದೃಷ್ಟಿಯಿಂದ ಕ್ರಾಸ್‌ ಬ್ಯಾರಿಯರ್‌ ಜೋಡಣೆಯಾಗದಿರುವುದಕ್ಕೆ ಸಂಚಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಾದಗಿ ಭಾಗದ ನಾನಾ ಹಳ್ಳಿಗಳಿಂದ ಕುಂದರಗಿಯ ಶಾಲೆಗೆ ವಾಹನದಲ್ಲಿ ಮಕ್ಕಳು ತೆರಳುತ್ತಾರೆ. ರಸ್ತೆಗೆ ಅಗತ್ಯ ಭಾಗದಲ್ಲಿ ರಕ್ಷಣಾ ಬ್ಯಾರಿಕೇಡ್‌ ಅಳವಡಿಕೆ ಇಲ್ಲದಿರುವುದು ಪಾಲಕರ ಆತಂಕಕ್ಕೆ ಕಾರಣವಾಗಿದೆ.

15 ಅಡಿ ಆಳ: ಬ್ಯಾರೇಜ್‌ ಬಳಿ ಮಣ್ಣು ಏರು ರಸ್ತೆಯಲ್ಲಿ ನಿರ್ಮಿಸಲಾಗಿದೆ. ಎರಡೂ ಕಡೆ ಹದಿನೈದು ಅಡಿಯಿಂದ ಇಪ್ಪತ್ತು ಅಡಿ ಆಳ ಹೊಂದಿದೆ. ವಾಹನ ಸಂಚಾರ ವೇಳೆ ಅನಾಹುತ ಸಂಭವಿಸಿದಲ್ಲಿ ಅನಾಹುತ ಖಚಿತ ಎನ್ನುವ ಆತಂಕದ ಭಾವನೆ ಮೂಡಿದೆ. ಪ್ರಮುಖ ರಸ್ತೆಗೆ ಕೂಡಲೇ ಡಾಂಬರೀಕರಣ ಮತ್ತು ರಸ್ತೆ ಕ್ರಾಸ್‌ ಬ್ಯಾರಿಯರ್‌ ಜೋಡಣೆ ಮಾಡಬೇಕೆಂದು ವಾಹನ ಸವಾರು ಸಾರ್ವಜನಿಕರ ಆಗ್ರಹವಾಗಿದೆ.

ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ಬಳಿ ಕೈಗೊಂಡ ರಸ್ತೆ ದುರಸ್ತಿಗೆ ಡಾಬರೀಕರಣ ಮಾಡಬೇಕು ಮತ್ತು ರಸ್ತೆಗೆ ಕ್ರಾಸ್‌ ಬ್ಯಾರಿಯರ್‌ ಜೋಡಿಸಬೇಕು.ಬಸವರಾಜ ಬಳಲೋದ್‌, ಅಂಕಲಗಿ ಗ್ರಾಮಸ್ಥ

 

-ಚಂದ್ರಶೇಖರ ಆರ್‌.ಎಚ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.