ಮುಧೋಳದಲ್ಲಿಲ್ಲ ಕುಡಿಯುವ ನೀರಿನ ಸಮಸ್ಯೆ


Team Udayavani, Apr 13, 2021, 11:37 AM IST

Untitled-1

ಮುಧೋಳ: ತಾಲೂಕಿನ ಗ್ರಾಮೀಣ ಹಾಗೂ ನಗರದ ಪ್ರದೇಶಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಆಮೂಲಕ ತಾಲೂಕು ಆಡಳಿತ ಜನರಿಗೆ ಶುದ್ಧ ನೀರುಒದಗಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ.ತಾಲೂಕಿನ 68 ಹಳ್ಳಿಗಳಲ್ಲಿ 116, ನಗರಸಭೆವ್ಯಾಪ್ತಿಯಲ್ಲಿ 22 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ.

ಕೆಲವು ಖಾಸಗಿಯವರು ಸಹ ಘಟಕಗಳು ಕೂಡಾಆರಂಭಿಸಿದ್ದಾರೆ. ಬಹುತೇಕಹಳ್ಳಿ ಹಾಗೂ ಪಟ್ಟಣ, ನಗರದಲ್ಲಿ ಶಾಸಕರು, ವಿಧಾನಪರಿಷತ್‌ ಸದಸ್ಯರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಅನುದಾನದಲ್ಲಿ ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣವಾಗಿವೆ. ಅವುಗಳನ್ನು ಆಯಾ ಸ್ಥಳಿಯಸಂಸ್ಥೆಗಳ ಮೂಲಕ ನಿಭಾಯಿಸಲಾಗುತ್ತಿದೆ. ಗ್ರಾಮೀಣಕುಡಿಯುವ ನೀರು ಪೂರೈಕೆ ಯೋಜನೆಯಲ್ಲಿ 83 ಘಟಕಗಳನ್ನು ಗುತ್ತಿಗೆದಾರರ ಮೂಲಕ ನಿರ್ವಹಣೆ ಕೂಡಾ ಮಾಡಲಾಗುತ್ತಿದೆ.

ನಿರ್ವಹಣೆ ತಪ್ಪಿದರೆ ದಂಡ: ತಾಲೂಕಾಡಳಿತನಿಯಂತ್ರಣದಲ್ಲಿ ನಡೆಯುತ್ತಿರುವ ತಾಲೂಕಿನ 82ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವನ್ನು ಖಾಸಗಿಯವರಿಗೆ ವಹಿಸಲಾಗಿದೆ. ಶುದ್ಧ ಕುಡಿಯುವನೀರಿನ ಘಟಕ ನಿರಂತರವಾಗಿ ಸೇವೆ ಒದಗಿಸಬೇಕು.ಒಂದು ವೇಳೆ ಅವುಗಳು ದುರಸ್ತಿಗೆ ಬಂದರೆ ಕೂಡಲೇಆ ಬಗ್ಗೆ ಗಮನಹರಿಸಿ ಘಟಕ ಸರಿಪಡಿಸಬೇಕು. ಒಂದು ವೇಳೆ ಘಟಕ ದುರಸ್ತಿ ಕಾರ್ಯದಲ್ಲಿ ವಿಳಂಬನೀತಿ ಅನುಸರಿಸಿದರೆ ಗುತ್ತಿಗೆ ಪಡೆದವರಿಗೆ ದಿನದ ಲೆಕ್ಕದಲ್ಲಿ ದಂಡ ವಿಧಿಸಿ ಅವರಿಗೆ ಬಿಸಿ ಮುಟ್ಟಿಸುವ ಕಾರ್ಯವನ್ನು ತಾಲೂಕು ಆಡಳಿತ ಕೈಗೊಳ್ಳುತ್ತಿದೆ.ಸಾರ್ವಜನಿಕರಿಗೆ ಹೆಚ್ಚಿನ ನೀರಿನ ಸೌಲಭ್ಯ ಕಲ್ಪಿಸುವನಿಟ್ಟಿನಲ್ಲಿ ಇನ್ನು ಮೂರು ಶುದ್ಧ ಕುಡಿಯುವ ನೀರಿನಘಟಕಗಳು ಮಂಜೂರಾತಿ ಹಂತದಲ್ಲಿವೆ. ಅವುಗಳನಿರ್ಮಾಣಕ್ಕೆ ತಾತ್ಕಾಲಿಕ ಅನುಮತಿ ದೊರೆತಿದೆ. ಪ್ರತಿ20 ಲೀಟರ್‌ಗೆ 5 ರೂ.ದರದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

ಮೇಲಿಂದ ಮೇಲೆ ಪರೀಕ್ಷೆ: ಪ್ರತಿಯೊಂದು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಣೆ ಜತೆ ಗಡಸುತನ ಬರುವ ನೀರಿನ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮೇಲಿಂದ ಮೇಲೆ ಹದಿನೈದುದಿನಕ್ಕೊಮ್ಮೆ ನೀರಿನ ಪರಿಶೀಲನೆ ನಡೆಸಲಾಗುತ್ತಿದೆ.ಸಾರ್ವಜನಿಕರ ನೀಡುವ ದೂರಿನನ್ವಯ ಕೆಲವುಮಾರ್ಪಾಡು ಸಹ ಮಾಡಲಾಗಿದೆ. ಟಿಡಿಎಸ್ ‌ಟೆಸ್ಟ್‌ ಅಂತಾ ಮಾಡಿ ಮರಳಿ ನೀರಿನ ಪ್ರಮಾಣಕ್ಕೆಸೂಕ್ತವಾಗಿ ಶುದ್ಧೀಕರಣ ಮಾಡುವ ಪ್ರಯತ್ನ ನಡೆದಿದೆ. ಸಾರ್ವಜನಿಕರ ನಿತ್ಯ ಬಳಕೆಯಿಂದ ಕೆಲವುಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಮೇಲಿಂದ ಮೇಲೆ ಶುದ್ಧ ನೀರಿನ ರಿಪೇರಿಗೆ ಬರುವುದು ಸಾಮಾನ್ಯವಾಗಿದೆ.

ತಾಲೂಕಿನ ಮಿರ್ಜಿ, ಒಂಟಗೋಡಿ, ಉತ್ತೂರ,ಮಳಲಿ, ಕುಳಲಿ, ಶಿರೋಳ, ದಾದನಟ್ಟಿ,ಮುಗಳಖೋಡ, ಬುದ್ನಿ, ಬೊಮ್ಮನಬುದ್ನಿ, ಆಲಗುಂಡಿ, ಮಾಚಕನೂರ, ಇಂಗಳಗಿ, ಯಡಹಳ್ಳಿ,ಮಂಟೂರ, ಹಲಗಲಿ, ಲಕ್ಷಾನಟ್ಟಿ, ಲೋಕಾಪುರ,ಕಿಲ್ಲಾ ಹೊಸಕೋಟಿ, ಮೆಟಗುಡ್ಡ ಗ್ರಾಮಗಳ ಪೈಕಿಹಲವು ಗ್ರಾಮಗಳಲ್ಲಿ ಈ ಹಿಂದೆ ಇದ್ದ ಕುಡಿಯುವ ಸಮಸ್ಯೆಯಂತು ಸದ್ಯಕ್ಕಿಲ್ಲ.

ನಗರದ ವಿವಿಧ ವಾರ್ಡ್‌ಗಳಲ್ಲಿ ನಗರಸಭೆ ಹಾಗೂಶಾಸಕರು, ವಿಧಾನ ಪರಿಷತ್‌ ಸದಸ್ಯರ ಅನುದಾನದಲ್ಲಿಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಅವುಗಳನ್ನು ಕೆಲವನ್ನು ಖಾಸಗಿ ಹಾಗೂ ಕೆಲವನ್ನು ನಗರಸಭೆ ವತಿಯಿಂದಲೇ ನಿರ್ವಹಿಸಲಾಗುತ್ತಿದೆ.

ಇನ್ನಷ್ಟು ಘಟಕ: ಜನಸಂಖ್ಯೆ ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಘಟಕಗಳ ಬೇಕೆ ಬೇಕು. ಅಲ್ಲದೇ ನಗರದಕೆಲವು ವಾರ್ಡ್‌ಗಳಲ್ಲಿ ಚಿಕ್ಕದಾಗಿದ್ದರೂ ಶುದ್ಧಕುಡಿಯುವ ನೀರಿನ ಘಟಕಗಳನ್ನು ಮಂಜೂರಾತಿನೀಡುವುದು ಅಗತ್ಯವಿದೆ ಎನ್ನುತ್ತಾರೆ ನಿವಾಸಿಗಳು.ನಗರದ ಆಶ್ರಯ ಕಾಲೋನಿ, ಜನತಾಪ್ಲಾಟ್‌, ಸಾಯಿನಗರ, ವಿನಾಯಕ ನಗರ, ಜಯನಗರ ಭಾಗದಲ್ಲಿ ನಿರ್ಮಿಸುವುದು ಅಗತ್ಯವಿದೆ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. ಕೆಲವು ಭಾಗದಲ್ಲಿ ಸಣ್ಣಪುಟ್ಟ ಲೋಪದೋಷ ಹೊರತುಪಡಿಸಿ ಉಳಿದಂತೆ ನಿರ್ವಹಣೆ ನಡೆದಿವೆ ಎನ್ನುತ್ತಾರೆ ನಿವಾಸಿಗಳು.

ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರುಒದಗಿಸುವುದು ನಮ್ಮ ಜವಾಬ್ದಾರಿ. ಈನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದೇವೆ.ತಾಲೂಕುಡಳಿತ ವ್ಯಾಪ್ತಿಯ 112 ಶುದ್ಧಕುಡಿಯುವ ನೀರಿನ ಘಟಕಗಳಲ್ಲಿ ಬಹುತೇಕ ಎಲ್ಲ ಘಟಕಗಳು ಕಾರ್ಯನಿರ್ವಹಿಸುತ್ತಿವೆ.ಒಂದು ವೇಳೆ ದುರಸ್ತಿಗೆ ಬಂದರೂ ಅವುಗಳನ್ನುಶೀಘ್ರಸರಿಪಡಿಸಿ ಜನರಿಗೆ ನೀರು ಒದಗಿಸಲು ಬದ್ಧ.- ಕಿರಣ ಘೋರ್ಪಡೆ, ತಾಪಂ ಕಾರ್ಯನಿರ್ವಹಣಾಧಿಕಾರಿ ಮುಧೋಳ

ಗ್ರಾಮದಲ್ಲಿ ದಶಕದ ಹಿಂದೆ ನೀರಿನ ಸಮಸ್ಯೆ ಹೇಳತೀರದಾಗಿತ್ತು. ಸದ್ಯ ಮನೆಬಾಗಿಲಿಗೆ ನಿರಂತರ ನೀರು ವ್ಯವಸ್ಥೆ ಕಲ್ಪಿಸಲಾಗಿದೆ. ಇದರೊಂದಿಗೆ ಗ್ರಾಮದಲ್ಲಿ ಎರಡು ಶುದ್ಧಕುಡಿಯುವ ನೀರಿನ ಘಟಕವಿದ್ದು, ಎಲ್ಲ ರೀತಿಯಅನುಕೂಲವಿದೆ. ಹಿಂದಿನಂತೆ ನಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ.  –ಸದಪ್ಪ ಜಡಗನ್ನವರ, ಹಲಗಲಿ ಗ್ರಾಮಸ್ಥ

 

ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.