ನಂದೀಶ್ವರದಲ್ಲಿ ಜನರ ನರಳಾಟ: ಎಲ್ಲಿದೆ ಅಭಿವೃದ್ಧಿ?


Team Udayavani, May 2, 2023, 8:34 AM IST

ನಂದೀಶ್ವರದಲ್ಲಿ ಜನರ ನರಳಾಟ: ಎಲ್ಲಿದೆ ಅಭಿವೃದ್ಧಿ?

ಬಾಗಲಕೋಟೆ: ಕ್ಷೇತ್ರದ ನಾಯಕತ್ವ ಬದಲಾವಣೆ ಮಾಡುವಂತಹ ಅನಿವಾರ್ಯ ಬಂದೊದಗಿದೆ. ಆಟೋರಿಕ್ಷಾ ಗುರುತಿಗೆ ತಮ್ಮ ಮತವನ್ನು ನೀಡುವ ಮೂಲಕ ಬದಲಾವಣೆ ಮಾಡಬೇಕು ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಮನವಿ ಮಾಡಿದರು.

ವಿದ್ಯಾಗಿರಿಯ ಬಿಟಿಡಿಎ ಹತ್ತಿರದ ನಂದೀಶ್ವರ ನಗರ, ಜ್ಯೋತಿ ಕಾಲೋನಿ, ರೂಪಲ್ಯಾಂಡ, ಬಸವನಗರ ಸೇರಿದಂತೆ ವಿವಿಧೆಡೆ ಮನೆ ಮನೆಗೆ ತೆರಳಿ ಮತಯಾಚಿಸಿದರು. ನಂದೀಶ್ವರ ಓಣಿಯ ಪ್ರತಿಯೊಂದು ಮನೆಯೊಳಗೆ ಸೇರುತ್ತಿರುವ ಕೊಳಚೆ ನೀರಿನಿಂದ ಮನೆಗಳೆಲ್ಲವೂ ಗಟಾರಗಳಾಗಿ ಪರಿವರ್ತಣೆಗೊಂಡಿವೆ. ಕೊಳಚೆಯಲ್ಲಿ ಜನ ಬದುಕುತ್ತಿರುವುದು ನೋಡುತ್ತಿದ್ದರೆ ಆಶ್ಚರ್ಯವಾಗುತ್ತದೆ. ಮುಳುಗಡೆ ನಗರವೆಂದು ಪ್ರಖ್ಯಾತಗೊಂಡಿರುವ ಬಾಗಲಕೋಟೆಯ ಜನರ ಬದುಕು ನಿಜವಾಗಿಯೂ ಮುಳುಗಡೆಯಾಗಿದೆ. ಹಂದಿಗಳು ವಾಸವಾಗದಂತಹ ಸ್ಥಿಯಲ್ಲಿರುವ ಈ ಓಣಿಯಲ್ಲಿ ಜನರು ಬದುಕುತ್ತಿರುವುದು ನಿಜಕ್ಕೂ ಖೇದಕರ ಸಂಗತಿ. ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳುವ ನಾಯಕರು, ಇಲ್ಲೊಮ್ಮೆ ಬಂದು ನೋಡಲಿ. ಕ್ಷೇತ್ರ ಎಷ್ಟು ಬದಲಾವಣೆಯಾಗಿದೆ ಎಂಬುದನ್ನೇ ತಾವೇ ಕಣ್ಣಾರೆ ಕಾಣಲಿ. ಇಂತಹ ಸ್ಥಿತಿಯಲ್ಲಿರುವ ಜನರು ಬದಲಾವಣೆ ಬಯಸಿದ್ದಾರೆ ಎಂದು ಹೇಳಿದರು.

ಕ್ಷೇತ್ರದ ಜನರು ಮೂರು ಬಾರಿ ನಾಯಕನನ್ನಾಗಿ ಆರಿಸಿ ತಂದರೂ ಒಂದು ಓಣಿಗೆ ಬೇಕಾಗಿರುವ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಸಮಸ್ಯೆ ಹೊತ್ತು ಬಂದವರಿಗೆ ಪ್ರತಿಕ್ರಿಯೇ ನಿಡದಂತಹ ವಿಫಲ ನಾಯಕನ್ನು ಕ್ಷೇತ್ರದಿಂದ ಶಾಶ್ವತವಾಗಿ ಮಾಜಿಗೊಳಿಸಬೇಕು. ಈ ಬಾರಿ ಸ್ವಾಭಿಮಾನಿ ಕಾರ್ಯಕರ್ತರ ಶಕ್ತಿಯಾಗಿರುವ ಆಟೋರಿಕ್ಷಾ ಚಿನ್ಹೆಗೆ ಮತ ನೀಡಿ ಎಂದು ಕೇಳಿಕೊಂಡರು. ಜನನಾಯಕನಾದವನು ಸೌಮ್ಯ ಸ್ವಭಾವ ಹೊಂದಿರಬೇಕು. ತಮ್ಮ ಬಳಿ ಬರುವ ಜನರ ಕಷ್ಟಗಳನ್ನು ಅರಿತುಕೊಳ್ಳುವ ಗುಣ ಇರಬೇಕು. ಆದರೆ, ಇಂತಹ ನಾಯಕರು ನಮ್ಮ ಕ್ಷೇತ್ರದಲ್ಲಿಲ್ಲ. ಈ ಬಾರಿ ಸ್ವಾಭಿಮಾನಿ ಕಾರ್ಯಕರ್ತರು ಒಟ್ಟುಗೂಡಿ ಬಾಗಲಕೋಟೆ ಅಭಿವೃದ್ಧಿ ಪಡೆಯಾಗಿ ಸಿದ್ಧಗೊಂಡಿದೆ. ಸ್ವಾಭಿಮಾನಿ ಕಾರ್ಯಕರ್ತರ ಹೋರಾಟ ಏನೆಂದು ಜನರಿಗೆ ತಿಳಿದಿದೆ ಎಂದರು.

ಮುಖಂಡರಾದ ಸಂತೋಷ ಹೊಕ್ರಾಣಿ, ಬಸವರಾಜ ಕಟಗೇರಿ, ರವಿ ಕುಮಟಗಿ, ಅಶೋಕ ಮುತ್ತಿನಮಠ, ಅಶೋಕ ಮಹೇಂದ್ರಕರ, ನಾಗರಾಜ ಕೆರೂರ, ಸಚಿನ ಮರಿಶೆಟ್ಟಿ, ಸಂಜೀವ ಡಿಗ್ಗಿ, ಶ್ರೀಶೈಲ ಅಂಗಡಿ, ರಾಜು ಗೌಳಿ, ಅರುಣ ಲೋಕಾಪುರ, ಗುರು ಅನಗವಾಡಿ, ಶಂಕರ ಮಗಜಿ, ವಿಶಾಲ ಮಾಂಡಗಿ, ಪುಟ್ಟು ಅಜ್ಜೋಡಿ, ಬಿ.ಎಂ. ಪಾಟೀಲ, ಶಶಿರೇಖಾ ಶಿಗ್ಲಿಮಠ, ಗೋನಿಬಾಯಿ ಮುಂತಾದವರು ಪಾಲ್ಗೊಂಡಿದ್ದರು.

ಜಿಲ್ಲಾ ಕೇಂದ್ರವಾದ ನಂದೀಶ್ವರ ನಗರದಲ್ಲಿ ಕೊಳಚೆ ಸ್ಥಿತಿ ನಿರ್ಮಾಣವಾಗಿದ್ದು, ಕ್ಷೇತ್ರ ಎಷ್ಟು ಅಭಿವೃದ್ಧಿಯಾಗಿದೆ ಎಂಬುದನ್ನು ಅಭಿವೃದ್ಧಿ ಹರಿಕಾರರು ನೋಡಲಿ. ಇದರಿಂದ ಜನರು ರೋಸಿದ್ದಾರೆ. ಇದಕ್ಕಾಗಿಯೇ ಜನ ಬದಲಾವಣೆ ಬಯಸಿದ್ದಾರೆ. ಜನರೆಲ್ಲರೂ ಸ್ವಾಭಿಮಾನಿ ಕಾರ್ಯಕರ್ತರಿಗೆ ಬೆಂಬಲ ಸೂಚಿಸುತ್ತಿದ್ದು, ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಚರಂತಿಮಠರ ಗೆಲವು ನಿಶ್ಚಿತ. ಸಂತೋಷ ಹೊಕ್ರಾಣಿ, ಯುವ ಮುಖಂಡ

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.