karnataka polls: ಕ್ಷೇತ್ರದಲ್ಲಿ ಬದಲಾವಣೆಗೆ ಜನರಿಂದಲೇ ಶಪಥ: ಮಲ್ಲಿಕಾರ್ಜುನ


Team Udayavani, Apr 29, 2023, 3:07 PM IST

karnataka polls: ಕ್ಷೇತ್ರದಲ್ಲಿ ಬದಲಾವಣೆಗೆ ಜನರಿಂದಲೇ ಶಪಥ: ಮಲ್ಲಿಕಾರ್ಜುನ

ಬಾಗಲಕೋಟೆ: ಕ್ಷೇತ್ರದ ಪ್ರತಿ ಹಳ್ಳಿ ಹಳ್ಳಿಯಲ್ಲೂ ಸ್ವಾಭಿಮಾನಿ ಆಟೋ ಹವಾ ಜೋರಾಗಿದೆ. ಇದು ಸ್ವಾಭಿಮಾನಿ ಕಾರ್ಯಕರ್ತರ ಶಕ್ತಿ. ಅವರಿಂದಲೇ ಇಂದು ಕ್ಷೇತ್ರದಲ್ಲಿ ಬದಲಾವಣೆಗೆ ಶಪಥ ಶುರುವಾಗಿದೆ.

ಪ್ರತಿ ಹಳ್ಳಿಯ ಜನರೂ ಈ ನಮ್ಮನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ಇಮ್ಮಡಿಯಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.

ತಾಲೂಕಿನ ಚಿಕ್ಕಗುಳಬಾಳ, ಗುಳಬಾಳ, ಮುತ್ತತ್ತಿ ಮುಂತಾದ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡು ಮಾತನಾಡಿದರು.

ಬಾಗಲಕೋಟೆ ಕ್ಷೇತ್ರದ ಸಾರ್ವಜನಿಕರ ಹಿತ ಕಾಪಾಡುವ ಹಾಗೂ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ಒಬ್ಬ ನಾಯಕ ಅವಶ್ಯವಿದೆ. ಇದನ್ನು ಮನಗಂಡ ನಮ್ಮ ಸ್ವಾಭಿಮಾನಿ ಗೆಳೆಯರ ಬಳಗ, ನಾವು ಸುಮಾರು 30 ವರ್ಷಗಳಿಂದ ಸಂಘಟನೆ-ಶ್ರಮ ಹಾಕಿ ಬೆಳೆಸಿದ ಪಕ್ಷದಿಂದ ಟಿಕೆಟ್‌ ಕೇಳಿದ್ದೇವು. ಆದರೆ, ಟಿಕೆಟ್‌ ಕೊಡಲಿಲ್ಲ. ಆದರೂ, ನಾವು ಯಾವುದೇ ಪಕ್ಷಕ್ಕೆ ಹೋಗದೇ ಸ್ವಾಭಿಮಾನದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇವೆ ಎಂದರು.

ಹೆಸರಿಗೆ ಮಾತ್ರ ನಾನು ಅಭ್ಯರ್ಥಿ. ಆದರೆ, ಕ್ಷೇತ್ರದ ಪ್ರತಿಯೊಬ್ಬ ಸ್ವಾಭಿಮಾನಿ ಕಾರ್ಯಕರ್ತನೇ ನಿಜವಾದ ಅಭ್ಯರ್ಥಿ ಎಂದು ಭಾವಿಸಿ, ಎಲ್ಲೆಡೆ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಕ್ಷೇತ್ರದ ಎಲ್ಲ ಹಳ್ಳಿಗಳಲ್ಲೂ ಒಂದು ಬಾರಿ ಪ್ರಚಾರ ಕೈಗೊಂಡು, ಜನರನ್ನು ಭೇಟಿ ಮಾಡಿದ್ದೇನೆ. ಎಲ್ಲ ಕಡೆಯೂ ನಮ್ಮ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಭಿಮಾನಿಗಳ ಆಟೋದ ವೇಗಕ್ಕೆ ವಿರೋಧಿಗಳು ವಿಚಲಿತರಾಗಿದ್ದಾರೆ. ಬರುವ ಮೇ 10ರಂದು ಚುನಾವಣೆಯಲ್ಲಿ ಸ್ವಾಭಿಮಾನದ ಮತದಾನ ನಮ್ಮ ಪರವಾಗಿ ಮಾಡಲಿದ್ದಾರೆ ಎಂದು ವಿಶ್ವಾಸವಿದೆ ಎಂದು ಹೇಳಿದರು.

ಮತದಾರರು ನೀಡುವ ಅಧಿಕಾರವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳದೇ, ಜನರ ಸೇವೆ ಬಳಸಿಕೊಳ್ಳಬೇಕು ಎಂಬುದು ನನ್ನ ಅಭಿಲಾಸೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಗೆದ್ದುಬಂದಲ್ಲಿ ಐದು ವರ್ಷ ನಿಮ್ಮ ಸೇವಕನಾಗಿ ಕೆಲಸ ಮಾಡುವೆ. ಮತದಾರರ ಕಷ್ಟ-ನೋವು ಆಲಿಸಿ, ಸಾಂತ್ವನ ಹೇಳುವ ಜತೆಗೆ ಅವರಿಗೆ ಸ್ಪಂದಿಸುವ ಕಾರ್ಯ ಮಾಡಬೇಕು. ಅದಕ್ಕಾಗಿಯೇ ಮತದಾರರ, ಜನಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ. ಈ ಪ್ರಜ್ಞೆಯೂ ಇಲ್ಲದವರು, ಜನರೊಂದಿಗೆ ದುರಂಹಕಾರದಿಂದ ವರ್ತಿಸಿ, ಜನರ ಮನಸ್ಸಿನಿಂದ ದೂರಾಗಿದ್ದಾರೆ ಎಂದರು.

ಮುಳುಗಡೆ ಕ್ಷೇತ್ರ ಬಾಗಲಕೋಟೆಯಲ್ಲಿ ಒಂದು ಕೈಗಾರಿಕೆ ಕೂಡ ಇಲ್ಲ. ಜನ ಉದ್ಯೋಗವಿಲ್ಲದೇ
ಎದುರಿಸುತ್ತಿರುವ ಸಂಕಷ್ಟ ಅರಿತುಕೊಳ್ಳಲೂ ಯಾರೂ ಹೋಗಿಲ್ಲ. ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಚರಂಡಿ ಸಹಿತ ಮೂಲಭೂತ ಸೌಲಭ್ಯ ಕಲ್ಪಿಸುವುದು ಅಷ್ಟೇ ಅಲ್ಲ.

ಜನರ ಬದುಕು ಬದಲಾಗಬೇಕು, ನೆಮ್ಮದಿಯ ಜೀವನ ನಡೆಸಬೇಕು. ಅದಕ್ಕೆ ಬೇಕಾದ ಪೂರಕ ವಾತಾವರಣ
ಕ್ಷೇತ್ರದಲ್ಲಿ ನಿರ್ಮಿಸಬೇಕು. ಆಗ ಒಬ್ಬ ಜನಪ್ರತಿನಿಧಿ, ಜನ ನಾಯಕನಾಗಲು ಸಾಧ್ಯ ಎಂದು ಹೇಳಿದರು. ಮುಖಂಡರಾದ ಶಂಭುಗೌಡ ಪಾಟೀಲ, ಸಂಗನಗೌಡ ಗೌಡರ, ಸಂತೋಷ ಹೊಕ್ರಾಣಿ, ಗುರು ಅನಗಾವಡಿ,
ಬಸವರಾಜ ಸೊಕನಾದಗಿ, ಅರುಣ ಲೋಕಾಪುರ ಪಾಲ್ಗೊಂಡಿದ್ದರು.

ವಿದ್ಯಾಗಿರಿಯಲ್ಲಿ ಬಿರುಸಿನ ಪ್ರಚಾರ: ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಮತ್ತು ಯುವ
ಮುಖಂಡ ಸಂತೋಷ ಹೊಕ್ರಾಣಿ ವಿದ್ಯಾಗಿರಿಯ 14ನೇ ಕ್ರಾಸ್‌ನಲ್ಲಿ ಪ್ರಚಾರ ನಡೆಸಿದರು. ಪ್ರತಿ ಮನೆ ಮನೆಗೂ
ತೆರಳಿ, ಬಾಗಲಕೋಟೆಯಲ್ಲಿ ಬದಲಾವಣೆಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಹೆಸರಿಗೆ ಮಾತ್ರ ನಾನು ಅಭ್ಯರ್ಥಿ. ಆದರೆ, ಕ್ಷೇತ್ರದ ಪ್ರತಿಯೊಬ್ಬ ಸ್ವಾಭಿಮಾನಿ ಕಾರ್ಯಕರ್ತನೇ ನಿಜವಾದ ಅಭ್ಯರ್ಥಿ ಎಂದು ಭಾವಿಸಿ, ಎಲ್ಲೆಡೆ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಕ್ಷೇತ್ರದ ಎಲ್ಲ ಹಳ್ಳಿಗಳಲ್ಲೂ ಪ್ರಚಾರ ಕೈಗೊಂಡು
ಜನರನ್ನು ಭೇಟಿ ಮಾಡಿದ್ದೇನೆ. ಎಲ್ಲ ಕಡೆಯೂ ನಮ್ಮ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ.
-ಮಲ್ಲಿಕಾರ್ಜುನ ಚರಂತಿಮಠ,
ಪಕ್ಷೇತರ ಅಭ್ಯರ್ಥಿ

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.