ಬಹಿರಂಗ ಪ್ರಚಾರಕ್ಕೆ ತೆರೆ: ಜನತೆ ನಿರಾಳ


Team Udayavani, Apr 22, 2019, 11:53 AM IST

bag-
ಬಾಗಲಕೋಟೆ: 17ನೇ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ರವಿವಾರ ಸಂಜೆ ತೆರೆ ಬಿದ್ದಿದೆ. ಹದಿನೈದು ದಿನಗಳಿಂದ ರಾಜಕೀಯ ನಾಯಕರ, ಜಾತಿ-ಧರ್ಮ ಹಾಗೂ ವ್ಯಕ್ತಿಗತ ಟೀಕೆ-ನಿಂದನೆಯ ಮಾತು ಕೇಳಿ ಬೇಸರಿಸಿದ್ದ ಬಹುತೇಕರು, ನಿರಾಳರಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ನಿಜ, ಕಳೆದ ಮಾರ್ಚ್‌ 28ರಿಂದ ಜಿಲ್ಲೆಯಲ್ಲಿ ಬಹುತೇಕ ಪ್ರಚಾರ ನಡೆದಿತ್ತು. ಮೊದಲ ವಾರ ಆಯಾ ತಾಲೂಕು ಕೇಂದ್ರಗಳಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರ, ಪ್ರಮುಖರ ಸಭೆ ನಡೆಸುತ್ತಿದ್ದ ಪಕ್ಷದ ನಾಯಕರು, ನಾಮಪತ್ರ ಸಲ್ಲಿಸುವ ಕೊನೆ ದಿನ ಮುಗಿದ ಬಳಿಕ ಬಹಿರಂಗ ಪ್ರಚಾರಕ್ಕೆ ಅತಿಹೆಚ್ಚು ಆದ್ಯತೆ ಕೊಟ್ಟರು.
ಪ್ರಚಾರಕ್ಕೆ ತಮ್ಮ ತಮ್ಮ ಪಕ್ಷಗಳ ಹಲವು ನಾಯಕರು ಬಂದು ಹೋದರೂ,ಯಾರೂ ಸ್ಥಳೀಯ ಗಂಭೀರ ಸಮಸ್ಯೆಗಳ ಬಗ್ಗೆ ಚಕಾರವೆತ್ತಲಿಲ್ಲ. ಕಾಂಗ್ರೆಸ್‌ನವರು ಮೋದಿ, ಶಾ, ಯಡಿಯೂರಪ್ಪ, ಅಭ್ಯರ್ಥಿ ಗದ್ದಿಗೌಡರ ವಿರುದ್ಧ ಮಾತನಾಡಿದರೆ, ಬಿಜೆಪಿಯವರು, ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ರಾಹುಲ್‌ ಗಾಂಧಿ ಬಗ್ಗೆ ಮಾತನಾಡಿದರು. ಯಾವ ನಾಯಕರ ಬಾಯಲ್ಲೂ, ಬಾಗಲಕೋಟೆ ಕ್ಷೇತ್ರದಲ್ಲಿ ಸಮಸ್ಯೆಗಳೇನು, ಅದಕ್ಕೆ ನಾವು ಪರಿಹಾರ ಹೇಗೆ ಕಂಡುಕೊಳ್ಳುತ್ತೇವೆ, ಗೆದ್ದರೆ ಮುಂದಿನ ಐದು ವರ್ಷ ನಮ್ಮ ಆಡಳಿತ ಹೇಗಿರುತ್ತದೆ ಎಂದು ಹೇಳಲಿಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 14 ಜನ ಅಭ್ಯರ್ಥಿಗಳು ಕಣದಲ್ಲಿದ್ದರೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ನಡುವೆ ನೇರ ಪೈಪೋಟಿ ನಡೆದಿದೆ.
ಈ ಅಭ್ಯರ್ಥಿಗಳು ತಮ್ಮ ಸಾಧನೆ, ಮುಂದಿನ ಕಾರ್ಯವೈಖ್ಯರಿ ಬಗ್ಗೆ ಜನರಿಗೆ ನೇರವಾಗಿ ಹೇಳುವ ಪ್ರಯತ್ನ ಮಾಡಲಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ವೀಣಾ, ಜಿಪಂ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಮಾಡಿದ ಕಾರ್ಯಗಳು ಹೇಳಿಕೊಂಡರೆ, ಬಿಜೆಪಿ ಅಭ್ಯರ್ಥಿ ಗದ್ದಿಗೌಡರ, 15 ವರ್ಷ ಜಿಲ್ಲೆಯಲ್ಲಿ ಏನು ಮಾಡಿದೆ ಎಂದು ಕೆಲವೊಮ್ಮೆ ಹೇಳಿಕೊಂಡರು. ವಿಶೇಷ ಅಂದರೆ, ಕಾಂಗ್ರೆಸ್‌ನವರು ಮಾಧ್ಯಮಗಳ ಬಳಕೆಯಲ್ಲಿ ಹೆಚ್ಚು ಮುಂದಿದ್ದರೆ, ಬಿಜೆಪಿಯ ಅಭ್ಯರ್ಥಿ ಗದ್ದಿಗೌಡರ, ಒಂದೇ ಒಂದು ಸುದ್ದಿಗೋಷ್ಠಿಯನ್ನೂ ನಡೆಸದೇ, ಇಡೀ ಬಹಿರಂಗ ಪ್ರಚಾರ ಮುಗಿಸಿದರು ಎಂಬ ಮಾತು ಕೇಳಿಬಂತು.
ಈ ಬಾರಿ, ನೇರಾನೇರ ಪೈಪೋಟಿ ಎದುರಿಸುತ್ತಿರುವ ಅಭ್ಯರ್ಥಿಗಳು ಲಿಂಗಾಯತ ಸಮುದಾಯಕ್ಕೆ ಸೇರಿದ್ದರಿಂದ, ಇಬ್ಬರೂ ಅಭ್ಯರ್ಥಿಗಳ ಉಪ ಪಂಗಡಗಳ ಹೆಸರಿನಲ್ಲಿ ಜಾತಿ ರಾಜಕೀಯ ಜೋರಾಗಿ ನಡೆದಿದೆ. ಒಟ್ಟಾರೆ, ಪ್ರಸ್ತುತ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿದರೆ ಸಾಕಪ್ಪಾ ಎಂಬ ಮನಸ್ಥಿತಿಗೆ ಅಭ್ಯರ್ಥಿಗಳೂ ಬಂದಂತಿತ್ತು. ಕಾರಣ, ಬಿಸಿಲಿನ ಝಳಕ್ಕೆ ಬೆಂಡಾಗಿದ್ದರು. ಕಾರ್ಯಕರ್ತರೂ, ನಿತ್ಯ ಪ್ರಚಾರ, ಓಡಾಟ, ಜನ ಸೇರಿಸಲು ಹೈರಾಣಾಗಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.