ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧ

•ಕೃಷ್ಣಾ ನದಿಗೆ 1.17 ಲಕ್ಷ ಕ್ಯೂಸೆಕ್‌ ಒಳಹರಿವು•ಘಟಪ್ರಭಾ ನದಿಗೂ ಹೆಚ್ಚಿದ ನೀರಿನ ಒತ್ತಡ

Team Udayavani, Jul 31, 2019, 11:27 AM IST

bk-tdy-1

ಬಾಗಲಕೋಟೆ: ನಗರದಲ್ಲಿ ಪ್ರವಾಹ ನಿಯಂತ್ರಣ ಕುರಿತು ಜರುಗಿದ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಮಾತನಾಡಿದರು.

ಬಾಗಲಕೋಟೆ: ಜಿಲ್ಲೆಯಲ್ಲಿ ಮುಂಗಾರು ಮಾನ್ಸೂನ್‌ ತಡವಾಗಿ ಪ್ರಾರಂಭವಾಗಿದ್ದು, ಜಿಲ್ಲೆಯ ತ್ರಿವಳಿ ನದಿಗಳಾದ ಕೃಷ್ಣಾ, ಮಲಪ್ರಭೆ ಮತ್ತು ಘಟಪ್ರಭೆ ನದಿಗಳಿಗೆ ನೀರು ಬರುತ್ತಿದೆ. ಮುಂದಿನ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ, ಪ್ರವಾಹ ನಿಯಂತ್ರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಸೂಚಿಸಿದರು.

ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರವಾಹ ನಿಯಂತ್ರಣ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.

ಪ್ರವಾಹ ಉಂಟಾಗುವ ನದಿ ದಡದಲ್ಲಿರುವ ಹಾಗೂ ಮುಳುಗಡೆಯಾಗುವ ಪ್ರದೇಶಗಳಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು. ಆಯಾ ತಾಲೂಕಾ ತಹಶೀಲ್ದಾರ್‌ರು ಮುನ್ನಚ್ಚರಿಕೆ ಕ್ರಮವಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಕೃಷ್ಣಾ ನದಿಯಿಂದ ಪ್ರವಾಹ ಉಂಟಾದಲ್ಲಿ ಜಮಖಂಡಿ ತಾಲೂಕಿನಲ್ಲಿ 11 ಗ್ರಾಮಗಳು ಪೂರ್ತಿ ಬಾಧಿತಗೊಳ್ಳುತ್ತಿದ್ದರೆ, 16 ಗ್ರಾಮಗಳು ಬಾಗಶಃ ಬಾಧಿತಗೊಳಗಾಗುತ್ತವೆ. ನಾರಾಯಣಪುರ ಜಲಾಯಶದ ಪ್ರಭಾವದಿಂದ ಬಾಗಲಕೋಟೆ ತಾಲೂಕಿನಲ್ಲಿ 13 ಹಳ್ಳಿಗಳು ಭಾಗಶಃ ಬಾಧಿತಗೊಳಗಾಗುತ್ತವೆ. ಹುನಗುಂದ ತಾಲೂಕಿನಲ್ಲಿ 12 ಗ್ರಾಮಗಳು ಪೂರ್ತಿಯಾಗಿ, 23 ಗ್ರಾಮಗಳು ಭಾಗಶಃ ಬಾಧಿತಗೊಳ್ಳಲಿವೆ.

ಆಲಮಟ್ಟಿ ಜಲಾಶಯದಿಂದ ಮಂಗಳವಾರ 1,17,336 ಕ್ಯೂಸೆಕ್‌ ನೀರು ಹೊರಬಿಡಲಾಗುತ್ತಿದೆ. ಆಲಮಟ್ಟಿ, ನಾರಾಯಣಪುರ, ನವಿಲುತೀರ್ಥ ಹಾಗೂ ಹಿಪ್ಪರಗಿ ಜಲಾಶಯದ ಇಂಜಿನೀಯರ್‌ಗಳು ಜಲಾಶಯದ ಅಧಿಕಾರಿಗಳೊಡನೆ ಸತತ ಸಂಪರ್ಕವಿಟ್ಟುಕೊಂಡು ಹೊರಹರಿವು ಸ್ಥಿತಿಗತಿಗಳ ಮಾಹಿತಿ ಪಡೆಯುತ್ತಿರಬೇಕು.

ಪ್ರವಾಹ ಪರಿಸ್ಥಿತಿ ಬಗ್ಗೆ ಬಾಧಿತಗೊಳ್ಳುವ ಎಲ್ಲ ಗ್ರಾಮಗಳಿಗೆ ತಹಶೀಲ್ದಾರ್‌ ಹಾಗೂ ಉಪವಿಭಾಗಾಧಿಕಾರಿಗಳು ಭೇಟಿ ನೀಡಿ ಬಾಧಿತಗೊಳ್ಳುವ ಕುಟುಂಬ, ಜಾನುವಾರು ಹಾಗೂ ಹಾನಿಗೊಳಗಾಗಬಹುದಾದ ಕ್ಷೇತ್ರದ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸ್ಥಳದ ಆಯ್ಕೆ, ಆಹಾರ ಧಾನ್ಯ ಸಂಗ್ರಹಣೆ, ಗಂಜಿ ಕೇಂದ್ರಕ್ಕಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ನದಿಗಳ ದಡದಲ್ಲಿರುವ ಗ್ರಾಮಗಳಲ್ಲಿ ಈಗಾಗಲೇ ಕೆಲವು ಗ್ರಾಮಗಳಲ್ಲಿ ಯಾಂತ್ರಿಕ ಬೋಟ್ ಹಾಗೂ ನಾವೆಗಳು ಲಭ್ಯವಿದ್ದು, ಅವುಗಳನ್ನು ಪರಿಶೀಲಿಸುವುದು ಹಾಗೂ ಪ್ರವಾಹ ಪರಿಸ್ಥಿತಿ ತಕ್ಕಂತೆ ರಕ್ಷಣಾ ಸಾಮಗ್ರಿಗಳು ಹಾಗೂ ಉಪಕರಣ ಇಟ್ಟುಕೊಳ್ಳುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗಿರಮಾ ಪೋವಾರ, ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಚ್. ಜಯಾ, ಜಮಖಂಡಿ ಉಪ ವಿಭಾಗಾಧಿಕಾರಿ ಮೊಹಮ್ಮದ ಈಕ್ರಮ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.