ಎಪ್ಪಾ ಸಾಹೇಬ್ರ.. ನಮಗ್‌ ಮನಿ ಕಟ್ಟಿ ಕೊಡ್ರಿ…


Team Udayavani, Nov 6, 2019, 12:11 PM IST

bk-tdy-2

ಮುಧೋಳ: ಯಪ್ಪಾ ಸಾಹೇಬ್ರ. ಹೊಳಿ ನೀರ್‌ ಬಂದು ಮನಿ ಬಿದ್ದಾವು. ಮೂರು ತಿಂಗ್ಳ ಆಯಿತು. ಬಿದ್ದ ಮನಿ ಕಟ್ಟಾಕ್‌ ಆಗಿಲ್ಲ. ನಾವು ಬಡೂರು. ಜಲ್ದ ನಮಗ್‌ ಮನಿ ಕಟ್ಟಿಕೊಡ್ರಿ…

ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ವಸತಿ ಸಚಿವ ವಿ. ಸೋಮಣ್ಣ ಅವರೊಂದಿಗೆ ಪ್ರವಾಹದಿಂದ ಬಿದ್ದ ಮನೆಗಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ದಲಿತ ಕೇರಿಯ ಮಹಿಳೆಯರಿಬ್ಬರು ಮನವಿ ಮಾಡಿದರು.

ಗ್ರಾಮದ ದಲಿತ ಕಾಲೋನಿಯಲ್ಲಿ ಮನೆಗಳ ಪರಿಸ್ಥಿತಿ ಅವಲೋಕಿಸಲು ತೆರಳಿದ ಕಾರಜೋಳ ಅವರಿಗೆ ಎದುರಾದ ಮಹಿಳೆ ಪ್ರೇಮವ್ವ ಮ್ಯಾಗೇರಿ ಹಾಗೂ ಸುಶೀಲವ್ವ ಮ್ಯಾಗೇರಿ ಕಣ್ಣಾಲಿಗೆಯಲ್ಲಿ ನೀರು ತೆಗೆದು, ನಮಗ ಮನಿ ಕಟ್ಟಿಸಿಕೊಡ್ರಿ ಸಾಹೇಬ್ರ ಎಂದು ಹೇಳಿಕೊಂಡರು. ಇದೇ ವೇಳೆ ಕಾರಜೋಳರ ಕಾಲಿಗೆ ಬಿದ್ದು, ನಾವು ಬಡವರಿದ್ದೇವೆ. ಬಿದ್ದ ಮನೆ ಕಟ್ಟಿಕೊಳ್ಳಲು ಆಗುತ್ತಿಲ್ಲ. ಅದೇ ಮನೆಯಲ್ಲಿ ವಾಸವಾಗಿದ್ದೇವೆ. ಮಳೆ-ಗಾಳಿಗೆ ಬಿದ್ದ ಮನೆಯಲ್ಲಿ ವಾಸಿಸುವುದು ಕಷ್ಟವಾಗಿದೆ. ಸರ್ಕಾರದಿಂದ ಮನೆ ಕಟ್ಟಿಕೊಡುವುದಾಗಿ ಹೇಳುತ್ತಿದ್ದಾರೆ. ಆದರೆ, ಇನ್ನೂ ಮನೆ ಕಟ್ಟಿಕೊಟ್ಟಿಲ್ಲ. ಬೇಗ ಮನೆ ಕೊಡಿ ಎಂದು ಕೇಳಿಕೊಂಡರು.

ಪಿಡಿಒಗಳಲ್ಲ- ರಾಕ್ಷಸರು: ಗುಲಗಾಲಜಂಬಗಿ ಗ್ರಾಮದಲ್ಲಿ ಪರಿಸ್ಥಿತಿ ಅವಲೋಕಿಸಿ ರೂಗಿ ಗ್ರಾಮಕ್ಕೆ ಆಗಮಿಸುವ ವೇಳೆ ಗ್ರಾಮದ ಹೊರಭಾಗದಲ್ಲಿನ ಗಲೀಜ ಕಂಡು ಕೆಂಡಾಮಂಡಲರಾದ ವಿ.ಸೋಮಣ್ಣ, ಕೂಡಲೇ ಅದನ್ನು ಸ್ವತ್ಛಗೊಳಿಸುವಂತೆ ಜಿಪಂ ಸಿಇಒ ಮಾನಕರ ಅವರಿಗೆ ಸೂಚಿಸಿದರು. ಈ ವೇಳೆ ಸಿಇಒ ಮಾನಕರ ನಾಳೆನೇ ಪಿಡಿಒ ಅವರಿಗೆ ಹೇಳುವೆ ಎಂದು ತಿಳಿಸಿದಾಗ ಅವರು ಪಿಡಿಒಗಳಲ್ಲ ರಾಕ್ಷಸರು ಎಂದು ಕೆಂಡಕಾರಿದರು.

ಮಕ್ಕಳನ್ನು ಬಿಸಿಲಲ್ಲಿ ಕಾಯಿಸಬೇಡಿ: ನಮ್ಮನ್ನು ಸ್ವಾಗತಿಸುವ ಉದ್ದೇಶಕ್ಕಾಗಿ ದೇವರ ಸ್ವರೂಪಿಯಾಗಿರುವ ಮಕ್ಕಳನ್ನು ಬಿಸಿಲಲ್ಲಿ ಕಾಯಿಸಬೇಡಿ ಎಂದು ಶಾಲೆ ಸಿಬ್ಬಂದಿಗೆ ಸಚಿವ ವಿ.ಸೋಮಣ್ಣ ಕಿವಿಮಾತು ಹೇಳಿದರು. ತಾಲೂಕಿನ ರೂಗಿ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರ ಕುಂದು ಕೊರತೆ ವಿಚಾರಿಸಲು ತೆರಳಿ ದಾಗ ಗ್ರಾಮದ ಸೋಮೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ಸಚಿವರ ಸ್ವಾಗತಕ್ಕೆ ಕಾದು ನಿಂತಿದ್ದರು. ಈ ವೇಳೆ ಶಿಕ್ಷಕರಿಗೆ ಕಿವಿಮಾತು ಹೇಳಿದರು. ಬಳಿಕ ಶಾಲೆಯ ಕೊಠಡಿ ಶಿಥಿಲಗೊಂಡಿರುವುದನ್ನು ಪರಿಶೀಲಿಸಿದ ಸಚಿವರು ಶಾಲೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಶಾಲೆ ಮಕ್ಕಳೊಂದಿಗೆ ಕುಶಲೋಪರಿ ವಿಚಾರಿಸಿ ಚನ್ನಾಗಿ ಓದಿ ಕಾರಜೋಳರಂತೆ ಬೆಳೆಯಿರಿ ಎಂದು ಸಲಹೆ ನೀಡಿದರು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಗೋವಿಂದ ಕಾರಜೋಳ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿ ಗ್ರಾಮದಲ್ಲಿ ಕುಸಿತಗೊಂಡ ಮನೆಗಳನ್ನು ವೀಕ್ಷಿಸಿದರು. ಗ್ರಾಮದ ಮಹಾಂತೇಶ ರಾಮತೀರ್ಥ ಹಾಗೂ ಶಿವಪ್ಪ ಅವರ ಮನೆಗೆ ತೆರಳಿದ ಸಚಿವರು ಸರ್ಕಾರದಿಂದ ದೊರೆಯುವ ಸೌಲಭ್ಯವನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ. ಕೂಡಲೆ ಮನೆಯ ಕಾಮಗಾರಿಯನ್ನು ಆರಂಭಿಸಿ ಎಂದು ಹೇಳಿದರು. ಬಳಿಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಅವರಿಗೆ ಶಿಥಿಲಗೊಂಡಿರುವ ಮನೆಗಳಿಗೆ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.