Rabkavi-Banhatti; ಬಡವರಿಗೆ ಉಚಿತವಾಗಿ ಡಯಾಲಿಸಿಸ್ ಕೇಂದ್ರ: ಶಾಸಕ ಸಿದ್ದು ಸವದಿ
Team Udayavani, Aug 30, 2024, 6:18 PM IST
ರಬಕವಿ ಬನಹಟ್ಟಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಗೊಂಡಿದ್ದು, ರಬಕವಿ ಬನಹಟ್ಟಿ ಹಾಗೂ ತೇರದಾಳ ಮತಕ್ಷೇತ್ರದ ಬಡ ರೋಗಿಗಳು ಈ ಘಟಕದ ಸೌಲಭ್ಯವನ್ನು ಉಚಿತವಾಗಿ ಪಡೆದುಕೊಳ್ಳಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಶುಕ್ರವಾರ ರಬಕವಿ ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಡಯಾಲಿಸಿಸ್ ಗಾಗಿ ಈ ಭಾಗದ ಜನರು ಮೊದಲು ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ಹೋಗುವುದು ಅನಿವಾರ್ಯವಾಗಿತ್ತು. ಆದರೆ ಈಗ ರಬಕವಿ ಬನಹಟ್ಟಯಲ್ಲಿಯೇ ಈ ಘಟಕ ಆರಂಭವಾಗಿದ್ದು ಹೆಮ್ಮೆಯ ಸಂಗತಿಯಾಗಿದೆ.
ದಿನಾಲು ಇಲ್ಲಿ 6ಜನರಿಗೆ ಉಚಿತವಾಗಿ ಸೇವೆಯನ್ನು ನೀಡಲಾಗುವುದು. ಈ ಡಯಾಲಿಸಿಸ್ ಕೇಂದ್ರದ ಸೌಲಭ್ಯವನ್ನು ಬಡ ರೋಗಿಗಳು ಪಡೆದುಕೊಳ್ಳಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ದಯಾನಂದ ಕರೆನ್ನವರ ಮಾತನಾಡಿ, ಇಲ್ಲಿ ರೂ. 30 ಲಕ್ಷ ವೆಚ್ಚದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸಲಾಗಿದೆ. ಕೇಂದ್ರಕ್ಕೆ ಬೇಕಾದ ಸಿಬ್ಬಂದಿ ವರ್ಗದವರಿಗೂ ಕೂಡಾ ತರಬೇತಿನ್ನು ನೀಡಿ ನೇಮಕ ಮಾಡಿಕೊಳ್ಳಲಾಗಿದೆ ಎಂದರು.
ಡಾ. ಎನ್.ಎಂ. ನದಾಫ್ ಮಾತನಾಡಿ, ಸದ್ಯ ಎರಡು ಘಟಕಗಳನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಾದರೆ ಇನ್ನೆರಡು ಘಟಕಗಳನ್ನು ಆರಂಭಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ, ವೈದ್ಯರಾದ ಡಾ.ವೀರೇಶ ಹುಡೇದಮನಿ, ಸುನೀಲ ಹನಗಂಡಿ, ಕಾವೇರಿ ಹಳ್ಯಾಳ, ಆರ್.ಎನ್. ನದಾಫ್, ಆಯೇಷಾ ತಾಂಬೋಳಿ, ಪೌರಾಯುಕ್ತ ಜಗದೀಶ ಈಟಿ, ಶ್ರೀಶೈಲ ಬೀಳಗಿ, ಈರಣ್ಣ ಚಿಂಚಖಂಡಿ, ಅಶೋಕ ರಾವಳ, ಆಸ್ಪತ್ರೆಯ ಅಧೀಕ್ಷಕಿ ಸ್ಮಿತಾ ಕಾಳಗಿ, ಶಿವಾನಂದ ಕಾಗಿ, ಮುಖೇಶ ಬನಹಟ್ಟಿ, ಗಂಗಾಧರ ಗೊಬ್ಬಾಣಿ, ಅಪ್ಪಾಜಿ ಹೂಗಾರ, ಗೋಪಾಲ ಕರಜಗಿ, ಮಹಾಲಿಂಗ ಗೋಣಿ, ರವಿ ವಾಘ್ಮೋರೆ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.