Rabkavi Banhatti; ಬೀದಿ ಜಾನುವಾರು, ಕತ್ತೆ, ನಾಯಿಗಳಿಂದ ಹೈರಾಣದ ಜನತೆ
ರೋಗಕ್ಕೆ ಒಳಗಾದ ನಾಯಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಿ
Team Udayavani, Sep 2, 2024, 6:27 PM IST
ರಬಕವಿ-ಬನಹಟ್ಟಿ: ರಬಕವಿ-ಬನಹಟ್ಟಿ, ರಾಮಪುರ ಮತ್ತು ಹೊಸೂರಿನ ನಗರದ ಜನತೆ ಬೀದಿ ಜಾನುವಾರು, ಕತ್ತೆ ಮತ್ತು ಬೀದಿ ನಾಯಿಗಳಿಂದ ಹೈರಾಣಾಗಿದ್ದಾರೆ.
ಇದು ದಿನನಿತ್ಯದ ಸಮಸ್ಯೆಯಾಗಿದೆ. ಬನಹಟ್ಟಿ ಬಸ್ ನಿಲ್ದಾಣದ ಹತ್ತಿರದ ಜಮಖಂಡಿ ಕುಡಚಿ ರಾಜ್ಯ ಹೆದ್ದಾರಿಯ ಮೇಲೆ, ತಮ್ಮಣ್ಣಪ್ಪ ಚಿಕ್ಕೋಡಿ ರಸ್ತೆ ಮೇಲೆ ಮತ್ತು ರಬಕವಿಯ ಈಶ್ವರ ಸಣಕಲ್ ರಸ್ತೆ ಮಾರ್ಗದಲ್ಲಿ ಬೆಳೆಗ್ಗೆಯಿಂದ ಮಧ್ಯಾಹ್ನದವರೆಗೆ ಬೀದಿ ಜಾನುವಾರುಗಳು ಮಲಗಿಕೊಂಡು ರಸ್ತೆ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿವೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದೆ. ಇನ್ನೂ ಬಸ್ ಸಂಚಾರಕ್ಕೆ ಬಹಳಷ್ಟು ತೊಂದರೆಯಾಗಿದೆ.
ಜಾನುವಾರುಗಳು ಮಲಗಿರುವುದರಿಂದ ಟ್ರಾಫಿಕ್ ಸಮಸ್ಯೆಯಾಗಿದೆ. ಬೀದಿ ಜಾನುವಾರುಗಳ ಜೊತೆಗೆ ಮನೆಯಲ್ಲಿ ಸಾಕಿರುವ ಜಾನುವಾರುಗಳು ಕೂಡಾ ಇವೆ.
ಇನ್ನೂ ನಗರದಲ್ಲಿ ಕತ್ತೆಗಳ ಕಾಟವಂತೂ ಬಹಳಷ್ಟಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ನಗರದ ಪ್ರಮುಖ ಬೀದಿ, ನೂಲಿನ ಗಿರಣಿ ಸೇರಿದಂತೆ ಅನೇಕ ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ನಿಂತಿರುತ್ತವೆ. ಸ್ಥಳೀಯ ತಮ್ಮಣ್ಣಪ್ಪ ರಸ್ತೆಯ ಮೇಲೆ ನಗರಸಭೆಯ ಕಸ ಸಂಗ್ರಹಣೆಗಾಗಿ ಕಸವನ್ನು ಜಮಾವಣೆ ಮಾಡಿರುತ್ತಾರೆ. ಇಲ್ಲಿ ಬಹಳಷ್ಟು ಕತ್ತೆಗಳು ನಿಂತಿರುತ್ತವೆ.
ಇದರಿಂದಾಗಿ ದಿನಾಲು ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಹಳಷ್ಟು ಸಮಸ್ಯೆಯಾಗಿದೆ. ಈ ಕತ್ತೆಗಳ ಪೂರ್ತಿ ರಸ್ತೆಯನ್ನು ಆಕ್ರಮಿಸಿ ಕೊಂಡಿರುತ್ತವೆ. ತಿರುಗಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಬೀದಿ ನಾಯಿಗಳಿಗೆ ಜನರು ಬೇಸತ್ತು ಹೋಗಿದ್ದಾರೆ. ಕತ್ತೆ ಮತ್ತ ಬೀದಿ ನಾಯಿಗಳಿಂದಾಗಿ ದಿನನಿತ್ಯ ಅಪಘಾತಗಳು ನಡೆಯುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರಂತೂ ಬಿದ್ದ ಪ್ರಕರಣಗಳು ಸಾಕಷ್ಟಾಗಿವೆ. ಸ್ಥಳೀಯ ಜೇಡರ ದಾಸಿಮಯ್ಯ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಅಂಗಡಿಕಾರರು ಸಂಜೆ ಕಸವನ್ನು ಹಾಕಿ ಹೋಗುತ್ತಿದ್ದಾರೆ. ಈ ಕಸವನ್ನ ತಿನ್ನಲು ಐವತ್ತಕ್ಕಿಂತ ಹೆಚ್ಚು ನಾಯಿಗಳು ಇಲ್ಲಿ ಸೇರಿರುತ್ತವೆ. ಇವು ಜಗಳವಾಡುತ್ತ ರಸ್ತೆಗೆ ಬರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಬೀದಿ ಜಾನುವಾರುಗಳು, ಕತ್ತೆ ಮತ್ತು ನಾಯಿಗಳಿಂದಾಗಿ ಜನರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು.
-ಗೌರಿ ಮಿಳ್ಳಿ ನಗರಸಭಾ ಸದಸ್ಯೆ
ಈಗಾಗಲೇ ಕತ್ತೆ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಎರಡು ಸಭೆಯನ್ನು ಕೂಡಾ ಮಾಡಲಾಗಿದೆ. ಕೆಲವು ಬಾರಿ ದಂಡವನ್ನು ಕೂಡಾ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೊಂದು ಸಭೆಯನ್ನು ಮಾಡಿ ಕತ್ತೆಯ ಮಾಲೀಕರಿಗೆ ಕಟ್ಟು ನಿಟ್ಟಾಗಿ ತಿಳಿಸುವುದರ ಜೊತೆಗೆ ಇನ್ನಷ್ಟು ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಲಾಗುವುದು.
-ಜಗದೀಶ ಈಟಿ ಪೌರಾಯುಕ್ತರು ರಬಕವಿ ಬನಹಟ್ಟಿ
-ಕಿರಣ ಶ್ರೀಶೈಲ ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.