ರೈಲ್ವೆ ಮಾರ್ಗ ಪದೇ ಪದೇ ಬದಲಿಗೆ ಆಕ್ರೋಶ


Team Udayavani, Oct 24, 2021, 3:39 PM IST

19railway

ಬಾಗಲಕೋಟೆ: ಕಳೆದ ಒಂದು ದಶಕದಿಂದಲೂ ಹೆಚ್ಚು ದಿನಗಳ ಬೇಡಿಕೆಯಾದ ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಳ್ಳುತ್ತಿಲ್ಲ. ಭೂಸ್ವಾಧೀನ ವಿಷಯದಲ್ಲಿ ಜಿಲ್ಲಾಡಳಿತ ಹಾಗೂ ರೈಲ್ವೆ ಇಲಾಖೆಯಲ್ಲಿ ಸಮನ್ವಯತೆ ಇಲ್ಲ. ಅಲ್ಲದೇ ಪ್ರಭಾವಿಗಳ ಒತ್ತಡಕ್ಕೆ ಮಣಿದು ಖಜ್ಜಿಡೋಣಿ-ಲೋಕಾಪುರ ಮಧ್ಯೆ ಮಾರ್ಗ ನಿರ್ಮಾಣದ ಯೋಜನೆ ಪದೇ ಪದೇ ಬದಲಾವಣೆ ಮಾಡಲಾಗುತ್ತಿದೆ ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್‌ ಖಾಜಿ ಆರೋಪಿಸಿದ್ದಾರೆ.

ಶನಿವಾರ ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ನೈರುತ್ಯ ರೈಲ್ವೆ ವಿಭಾಗದ ಮಹಾ ವ್ಯವಸ್ಥಾಪಕ ಸಂಜೀವಕಿಶೋರ, ವಿಭಾಗೀಯ ಮಹಾ ವ್ಯವಸ್ಥಾಪಕ ಅರವಿಂದ ಮಲಖೇಡ ಅವರು ಒಳಗೊಂಡ ಹಿರಿಯ ಅ ಧಿಕಾರಿಗಳಿಗೆ ಹಲವು ಬೇಡಿಕೆಗಳ ಕುರಿತು ಮನವಿ ಸಲ್ಲಿಸಿ ಈ ವೇಳೆ ಅವರು ಮಾತನಾಡಿದರು.

ಕಳೆದ ದಶಕದಿಂದ ನೆನೆಗುದಿಗೆ ಬಿದ್ದಿರುವ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಖಜ್ಜಿಡೋಣಿಯಿಂದ ಕಾಮಗಾರಿ ಪ್ರಾರಂಭಿಸಬೇಕು. ಖಜ್ಜಿಡೋಣಿಯಿಂದ-ಲೋಕಾಪುರವರೆಗೆ ಟೆಂಡರ್‌ ಕರೆಯಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಒಂದು ವರ್ಷದಿಂದ ಹೇಳುತ್ತಲೇ ಇದ್ದಾರೆ. ಕಾಮಗಾರಿ ಯಾವಾಗ ಪ್ರಾರಂಭಿಸುತ್ತೀರಿ ಎಂದು ಪ್ರಶ್ನಿಸಿದರು.

9 ಕಿ.ಮಿ. ರೈಲ್ವೆ ಮಾರ್ಗಕ್ಕೆ 144 ಎಕರೆ ಭೂಮಿ ಅವಶ್ಯಕತೆ ಇದ್ದು, ಈಗಾಗಲೇ 111 ಎಕರೆ ಜಮೀನನ್ನು ಜಿಲ್ಲಾಡಳಿತ, ಇಲಾಖೆಗೆ ಹಸ್ತಾಂತರಿಸಿದೆ. ಇನ್ನುಳಿದ 33 ಎಕರೆ ಭೂಮಿಯನ್ನು ರೈತರಿಂದ ಜಿಲ್ಲಾಡಳಿತವು ಕಾಮಗಾರಿ ಪ್ರಾರಂಭಿಸಲು ಒಪ್ಪಿಗೆ ಪಡೆದಿದೆ ಎಂದು ಸ್ವತಃ ಜಿಲ್ಲಾಡಳಿತವೇ ಹೇಳುತ್ತಿದೆ. ಕಾಮಗಾರಿ ಪ್ರಾರಂಭಿಸಲು ಯಾವುದೇ ಅಡೆತಡೆ ಇಲ್ಲ. ಆದರೂ ರೈಲ್ವೆ ಇಲಾಖೆ, ಸುಳ್ಳು ಭರವಸೆ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾರದಲ್ಲಿ ಕಾಮಗಾರಿ ಪ್ರಾರಂಬಿಸಬೇಕು. ಇಲಾಖೆಯ ತಪ್ಪು ನೀತಿಗಳಿಂದ ಅಂದರೆ ಖಜ್ಜಿಡೋಣಿಯಿಂದ ಪದೇ ಪದೇ ಮಾರ್ಗ ಬದಲಾವಣೆ ಮಾಡುವುದರ ಮುಖಾಂತರ ಭೂಸ್ವಾಧೀನ ಪಡಿಸಿಕೊಳ್ಳುವಲ್ಲಿ ವಿಳಂಬವಾಗಿದೆ. ಇನ್ನು ಮುಂದೆ ಇಂತಹ ತಪ್ಪು ನಿರ್ಣಯಗಳನ್ನು ತೆಗೆದುಕೊಳ್ಳದೇ ಸರಳವಾಗಿ ಕಾಮಗಾರಿ ಆರಂಬಿಸಬೇಕು. ಇಲ್ಲದಿದ್ದಲ್ಲಿ ಮಾರ್ಗ ಬದಲಾವಣೆ ಹಗರಣದಲ್ಲಿ ಯಾರಿಗೋ ಅನುಕೂಲ ಮಾಡುವ ಸಲುವಾಗಿ ಜನರ ಹಿತಾಸಕ್ತಿಯನ್ನು ಬಲಿಪಶು ಮಾಡಿದ್ದೀರಿ, ಯೋಜನೆ ವೆಚ್ಚ 816 ಕೋಟಿಯಿಂದ ಮೂರು ಪಟ್ಟು ಹೆಚ್ಚಾಗಿ ಸಾರ್ವಜನಿಕ ಬೊಕ್ಕಸಕ್ಕೆ ರೈಲ್ವೆ ಇಲಾಖೆ ಮತ್ತು ಜನಪ್ರತಿನಿಧಿಗಳು ಸೇರಿ ಮಾಡಿದ್ದೀರಿ. ಖಜ್ಜಿಡೋಣಿಯಿಂದ ಕಾಮಗಾರಿ ಪ್ರಾರಂಭಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಸಮಿತಿಯು ಬಾಗಲಕೋಟೆ-ಬೆಳಗಾವಿ ಜಿಲ್ಲೆಯಲ್ಲಿ ಸಾರ್ವಜನಿಕರೊಂದಿಗೆ ಉಗ್ರ ಹೋರಾಟ ನಡೆಸುತ್ತೇವೆ. ರೈಲ್ವೆ ಮಾರ್ಗ ಅನುಷ್ಠಾನದಲ್ಲಿ ಆದಂತಹ ಅವ್ಯವಹಾರ ಬಯಲಿಗೆಳೆಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಳೆದ ವಾರ ಭೇಟಿ ಮಾಡಿದ್ದಾಗ ಪ್ಯಾಸೆಂಜರ್‌ ರೈಲು ಮತ್ತು ಸ್ಥಗಿತಗೊಂಡ ಎಲ್ಲ ರೈಲುಗಳ ಪ್ರಾರಂಭ ಮತ್ತು ಜೋಡಿ ಮಾರ್ಗದ ಕಾಮಗಾರಿ ಅತಿ ಶೀಘ್ರ ಪೂರ್ಣಗೊಳಿಸಿ ವಿದ್ಯುತ್‌ಕರ್ಣಗೊಳಿಸಲು ಒತ್ತಾಯ ಮಾಡಲಾಗಿತ್ತು. ಅದಕ್ಕೆ ತಕ್ಕಂತೆ ತಾವುಗಳು ನ. 1ರಿಂದ ಪ್ಯಾಸೆಂಜರ್‌ ರೈಲು ಬಿಜಾಪುರ-ಹುಬ್ಬಳ್ಳಿ ಮಧ್ಯದಲ್ಲಿ ಬಿಜಾಪುರ-ಮಂಗಳೂರ ರೈಲುಗಳ ಪ್ರಾರಂಭಿಸಲು ಆದೇಶಿಸಿದ್ದು ಹೋರಾಟ ಸಮಿತಿ ಸ್ವಾಗತಿಸುತ್ತದೆ. ಅದರಂತೆ ಜೋಡಿ ಮಾರ್ಗ ಪ್ರಗತಿ ಪರಿಶೀಲಿಸುತ್ತಿರುವುದು ಸ್ವಾಗತಾರ್ಹ ಎಂದರು.

ರೈಲು ನಿಲ್ದಾಣ ಕೌಂಟರಗಳಲ್ಲಿ ಎಕ್ಸ್‌ಪ್ರೆಸ್‌ ರೈಲುಗಳ ಟಿಕೆಟ ದೊರೆಯುವಂತೆ ಮಾಡಬೇಕು. ಹೊಂಬಳ, ಬಳಗಾನೂರ, ಹೊಳೆಆಲೂರ, ಬಾದಾಮಿ, ಗುಳೇದಗುಡ್ಡ ಸೇರಿದಂತೆ ಗದಗ-ವಿಜಯಪುರ ಮಾರ್ಗಕ್ಕೆ ಒಳಪಡುವ ಎಲ್ಲ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಮೇಲು ಸೇತುವೆಗಳ, ಆಸನಗಳ, ಶುದ್ಧ ಕುಡಿಯುವ ನೀರು, ವಿದ್ಯುತ್‌ ದೀಪಗಳು, ನೈರ್ಮಲ್ಯ ಶೌಚಾಲಯಗಳ, ಡಿಜಿಟಲ್‌ ಇಂಡಿಕೇಷನ್‌ ಬೋರ್ಡ್‌ಗಳು, ರೈಲು ಮಾರ್ಗದಲ್ಲಿ ಅಗತ್ಯ ಇರುವ ಕಡೆ ಎಲ್‌.ಸಿ. ಗೇಟ್‌ಗಳ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ, ಗದಗ-ವಿಜಯಪುರ ಮಾರ್ಗಕ್ಕೆ ಒಳಪಡುವ ಎಲ್ಲ ರೈಲು ನಿಲ್ದಾಣಗಳ ಮೂಲಭೂತ ಸೌಲಭ್ಯ, ಜೋಡಿ ಮಾರ್ಗದ ಕಾಮಗಾರಿ ಪ್ರಗತಿ ಪರಿಶೀಲಿಸಿದರು. ಹೋರಾಟ ಸಮಿತಿಯ ಪರಶುರಾಮ ಬಳ್ಳಾರಿ, ಜಯಶ್ರೀ ಗುಳಬಾಳ, ಸಂಗಪ್ಪ ಸಾಳಗುಂದಿ, ಆಸೀಫ ಖಾಜಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.